Salary!;ಅಂಗನವಾಡಿ ನೌಕರರಿಗಿಲ್ಲ ಭಾಗ್ಯ!; ಸಿಗುವುದೇ ಅತ್ಯಲ್ಪ,ಅದೂ 3 ತಿಂಗಳುಗಳಿಂದ ಬಂದಿಲ್ಲ

ಮಂಜೂರಾತಿಗೆ ಬೇಡಿಕೆ ಹೋದರೂ ಮೀನಾಮೇಷ

Team Udayavani, Aug 25, 2024, 6:40 AM IST

1-angan

ಕುಂದಾಪುರ/ ಬೆಂಗಳೂರು: ಸಣ್ಣ ಮಕ್ಕಳ ಚಟುವಟಿಕೆಗಳಿಗಷ್ಟೇ ಸೀಮಿತವಾಗದೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಅಂಗನವಾಡಿ ನೌಕರರಿಗೆ ಮೂರು ತಿಂಗಳುಗಳಿಂದ ವೇತನ ಸಿಕ್ಕಿಲ್ಲ. ಈ ಆರ್ಥಿಕ ಸಾಲಿನಲ್ಲಿ ಅನುದಾನವೇ ಬಿಡುಗಡೆಯಾಗಿಲ್ಲ. ಎಲ್ಲ ಜಿಲ್ಲೆಗಳಿಂದ 3 ತಿಂಗಳ ವೇತನಕ್ಕಾಗಿ ಹಣ ಮಂಜೂರಾತಿಗೆ ಬೇಡಿಕೆ ಹೋದರೂ ಇಂದು, ನಾಳೆ ಎಂಬ ಉತ್ತರವಷ್ಟೇ ದೊರೆಯುತ್ತಿದೆ. ಜತೆಗೆ ತಾಂತ್ರಿಕ ಕಾರಣದ ನೆಪ ಹೇಳಲಾಗುತ್ತಿದೆ.

ರಾಜ್ಯದಲ್ಲಿ 63,030 ಅಂಗನವಾಡಿ ಕೇಂದ್ರಗಳು
ರಾಜ್ಯದಲ್ಲಿ 63,030 ಅಂಗನವಾಡಿ ಕೇಂದ್ರಗಳಿವೆ. ಉಡುಪಿ ಜಿಲ್ಲೆಯಲ್ಲಿ 1,222, ಕುಂದಾಪುರದಲ್ಲಿ 432 ಅಂಗನ ವಾಡಿಗಳಿವೆ. ಬಹುತೇಕ ಅಂಗನವಾಡಿಗಳಲ್ಲಿ ಕಾರ್ಯಕರ್ತೆ ಯರು ಹಾಗೂ ಸಹಾಯಕಿಯರಿದ್ದಾರೆ.

ಬೀದರ್‌, ದೇವದುರ್ಗ, ಶಿವಮೊಗ್ಗ ಸಹಿತ ಕೆಲವು ಜಿಲ್ಲೆಗಳಲ್ಲಿ ಐದು ತಿಂಗಳುಗಳಿಂದ ಹಾಗೂ ಉಳಿದ ಜಿಲ್ಲೆಗಳಲ್ಲಿ ಜೂನ್‌, ಜುಲೈ, ಆಗಸ್ಟ್‌ ಸೇರಿ 3 ತಿಂಗಳು ಗಳಿಂದ ಅಂಗನವಾಡಿ ಕಾರ್ಯಕರ್ತೆ ಯರಿಗೆ ಸಂಬಳವಾಗಿಲ್ಲ. ಈ ಕುರಿತು ಇಲಾಖೆಗೆ ಮನವಿ ಪತ್ರ
ಕೊಡಲಾಗಿದೆ. –ಸುನಂದಾ,ರಾಜ್ಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ

ಕಾರ್ಯಕರ್ತೆಯರು, ಸಹಾಯಕಿಯರು ಸರಕಾರ ದಿಂದ ಬರುವ ಗೌರವಧನವನ್ನೇ ನಂಬಿ ಕೊಂಡಿದ್ದಾರೆ. ಮನೆ ನಡೆಸಲು, ಬೇರೆ ಬೇರೆ ಕಾರಣಗಳಿಗೆ ಸಾಲಸೋಲ ಮಾಡಿದವರಿಗೆ ಪಾವತಿ ಕಷ್ಟವಾಗುತ್ತಿದೆ. ಪ್ರತೀ ತಿಂಗಳು ಸಕಾಲದಲ್ಲಿ ಗೌರವಧನ ಪಾವತಿಗೆ ಕ್ರಮ ಕೈಗೊಳ್ಳಬೇಕು.
-ಉಷಾ ಕೆ. ಕುಂದಾಪುರ ರಾಜ್ಯ ಕಾರ್ಯದರ್ಶಿ,ಅಂಗನವಾಡಿ ಕಾರ್ಯಕರ್ತೆಯರ ಸಂಘ

ಅತ್ಯಲ್ಪ ಗೌರವಧನ

ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ 11 ಸಾವಿರ ರೂ. ಹಾಗೂ ಸಹಾಯಕಿಯರಿಗೆ 6 ಸಾವಿರ ರೂ. ಗೌರವಧನ ಇದೆ. ಈ ವೇತನದ ಆಧಾರದಲ್ಲಿ ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಕಂತು ಪಾವತಿಸುವ ಸಾಲ ಪಡೆದವರಿದ್ದಾರೆ. ಹೆಚ್ಚಿನವರಿಗೆ ಕುಟುಂಬ ನಿರ್ವಹಣೆಗಿರುವ ಆದಾಯ ಇದೇ ಆಗಿದೆ.

ಖಾಲಿ ಹುದ್ದೆ ತುಂಬಲು ಕ್ರಮ
ಖಾಲಿ ಇರುವ ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ನಡೆಯುತ್ತಿದೆ. ಉಡುಪಿ ಜಿಲ್ಲೆಯಲ್ಲಿ 57 ಕಾರ್ಯಕರ್ತೆಯರು, 136 ಸಹಾಯಕಿಯರು, ಕುಂದಾಪುರದಲ್ಲಿ 31 ಕಾರ್ಯಕರ್ತೆಯರು, 52 ಸಹಾಯಕಿಯರ ಹುದ್ದೆ ಖಾಲಿ ಇದ್ದು, ಇದನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಗೌರವಧನ ಪಾವತಿಗೆ ಅನುದಾನ ಮಂಜೂರು ಮಾಡುವಂತೆ ಇಲಾಖೆಗೆ ಪತ್ರ ಬರೆಯಲಾಗಿದೆ. ಶೀಘ್ರದಲ್ಲೇ ಮಂಜೂರಾಗುವ ಭರವಸೆ ದೊರೆತಿದೆ.
-ಶ್ಯಾಮಲಾ, ಉಪ ನಿರ್ದೇಶಕಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಉಡುಪಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.