Mudhol: ನಗರಸಭೆ ಗದ್ದುಗೆಗೇರಲು ಕೈ-ಕಮಲ ಕಸರತ್ತು


Team Udayavani, Aug 25, 2024, 10:27 AM IST

Mudhol: A Congress-BJP fight for the Municipal Council

ಮುಧೋಳ: ಮುಧೋಳ ನಗರಸಭೆ ಅಧಿಕಾರದ ಗದ್ದುಗೆ ಹಿಡಿಯಲು ಶತಾಯ ಗತಾಯ ಕಸರತ್ತು ನಡೆಸುತ್ತಿರುವ ಕೈ-ಕಮಲ ಕಲಿಗಳು ಅಧಿಕಾರಕ್ಕಾಗಿ ತಂತ್ರ-ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಪ್ರಕಟಗೊಂಡಿರುವ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಅಧಿಕಾರ ಹಿಡಿಯಲು ತೆರೆಮರೆಯ ಕಸರತ್ತು ನಡೆಸಿರುವ ಎರಡೂ ಪಕ್ಷಗಳ ಮುಖಂಡರು ನಗರಸಭೆ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯಲು ಎಲ್ಲ ಬಗೆಯ ಪ್ರಯತ್ನಕ್ಕೆ ಮುಂದಾಗುತ್ತಿದ್ದಾರೆ.

31 ಸದಸ್ಯ ಬಲ: ಮುಧೋಳ ನಗರಸಭೆ ಒಟ್ಟು 31ಸದಸ್ಯ ಬಲ ಹೊಂದಿದ್ದು, ಶಾಸಕ-ಸಂಸದರ ಮತಗ ಳನ್ನು ಕ್ರೋಢೀಕರಿಸಿದರೆ 33ಮತಗಳು ಚುನಾವಣೆಯಲ್ಲಿ ಚಲಾವಣೆಗೊಳ್ಳಲಿವೆ. ಮೇಲ್ನೋಟದಲ್ಲಿ 16 ಸದಸ್ಯರು ಹಾಗೂ ಸಂಸದರ ಮತ ಸೇರಿ ಒಟ್ಟು 17 ಮತಗಳು ಬಿಜೆಪಿ ಪರ ಇದ್ದರೂ ಚುನಾವಣೆ ಘೋಷಣೆಯಾದಾಗಿನಿಂದ ಈ ಮತಗಳಲ್ಲಿ 3-4 ಮತಗಳು ವ್ಯತ್ಯಾಸವಾಗಲಿವೆ ಎಂಬ ಮಾತುಗಳು ಜೋರಾಗಿಯೇ ಹರಿದಾಡತೊಡಗಿವೆ. ಇನ್ನು 14 ನಗರಸಭೆ ಸದಸ್ಯರು, ಒಬ್ಬರು ಶಾಸಕರ ಮತ ಸೇರಿ ಕಾಂಗ್ರೆಸ್‌ ತೆಕ್ಕೆಯಲ್ಲಿ 15 ಮತಗಳಿವೆ. ಮ್ಯಾಜಿಕ್‌ ಸಂಖ್ಯೆ ದಾಟಲು ಬೇಕಾದ ಇನ್ನೂ ಎರಡು ಮತಗಳನ್ನು ಪಡೆಯಲು ಪಕ್ಷದ ಮುಖಂಡರು ರಣತಂತ್ರ ಹೆಣೆದಿದ್ದಾರೆ ಎನ್ನಲಾಗುತ್ತಿದೆ.

ಮೇಲುಗೈ ಸಾಧಿಸಲು ಕೊನೆಯ ದಿನ: ಆ.26ರಂದು ಚುನಾವಣೆ ನಿಗದಿಯಾಗಿದ್ದು, ಅಧಿಕಾರಕ್ಕಾಗಿ ಮೇಲುಗೈ ಸಾಧಿಸಲು ಒಂದೇ ದಿನ ಬಾಕಿ ಉಳಿದಿದೆ. ಚುನಾವಣೆ ಅಂಗಳದ ಮಾತುಗಳನ್ನು ಕೇಳಿದಾಗ ಕಾಂಗ್ರೆಸ್‌ ಪಕ್ಷದ ಸದಸ್ಯರ ಮೇಲೆ ಹಿಡಿತ ಹೊಂದಿದ್ದು ಅಧಿಕಾರ ಗದ್ದುಗೆ ಏರುವುದು ನಿಕ್ಕಿ ಎಂಬ ಮಾತುಗಳು ಹರಿದಾಡುತ್ತಿವೆ. ಇನ್ನು ಬಿಜೆಪಿ ಕಲಿಗಳು ಮಾತ್ರ ಸದಸ್ಯರನ್ನು ತಮ್ಮತ್ತ ಸೆಳೆಯಲು ನಿರಂತರ ಪರಿಶ್ರಮ ಪಡುತ್ತಿದ್ದು, ತಮ್ಮ ಕಾರ್ಯದಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತಾರೆ ಎಂಬುದರ ಫಲಿತಾಂಶ ಅರಿಯಲು ಸೋಮವಾರ ಮಧ್ಯಾಹ್ನದವರೆಗೆ ಕಾಯಬೇಕಿದೆ.

ಪ್ರತಿತಂತ್ರ ಹೆಣೆಯುತ್ತಿದೆ ಬಿಜೆಪಿ: ಸ್ಪಷ್ಟ ಬಹುಮತವಿದ್ದರೂ ಸದಸ್ಯರ ನಡುವಳಿಕೆಯಲ್ಲಿನ ವ್ಯತ್ಯಾಸದಿಂದ ಎಚ್ಚೆತ್ತಿರುವ ಬಿಜೆಪಿ ಮುಖಂಡರು ಸದಸ್ಯರನ್ನು ತಮ್ಮತ್ತ ಸೆಳೆಯಲು ಪ್ರತಿತಂತ್ರ ಹೆಣೆಯುತ್ತಿದ್ದಾರೆ. ಆ ಮೂಲಕ ಮೊದಲ ಅವ ಧಿಯಲ್ಲಿ ತನ್ನ ತೆಕ್ಕೆಯಲ್ಲಿದ್ದ ಅಧಿ ಕಾರವನ್ನು ತನ್ನಲ್ಲಿಯೇ ಉಳಿಸಿಕೊಳ್ಳಲು ಹವಣಿಸುತ್ತಿದೆ.

ರಾಜಕೀಯ ಜಿದ್ದಾಜಿದ್ದಿ: ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಮೂಲಕ ರಾಜಕೀಯ ರಂಗದಲ್ಲಿ ತನ್ನದೇಯಾದ ವರ್ಚಸ್ಸು ಹೊಂದಿರುವ ಮುಧೋಳ ಮತಕ್ಷೇತ್ರದ ನಗರಸಭೆ ಚುನಾವಣೆ ಈ ಬಾರಿ ಜಿದ್ದಾಜಿದ್ದಿನಿಂದ ಕೂಡಿದೆ. ನಗರಸಭೆಯಲ್ಲಿ ಮ್ಯಾಜಿಕ್‌ ಸಂಖ್ಯೆಗೆ ಎರಡೂ ಪಕ್ಷಗಳು ಹತ್ತಿರ ಇರುವುದರಿಂದ ಅ ಧಿಕಾರ ಹಿಡಿಯಲು ಅವಳಿ ಪಕ್ಷಗಳ ಮುಖಂಡರು ಶತಪ್ರಯತ್ನ ನಡೆಸಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿನ ಸೋಲು ಬಿಜೆಪಿಗೆ ಬಿಸಿ ತುಪ್ಪದಂತಾಗಿದ್ದು, ಇದರ ಲಾಭ ಪಡೆಯಲು ಕಾಂಗ್ರೆಸ್‌ ಸಕಲ ತಯಾರಿ ನಡೆಸಿದೆ. ಆದರೂ ಪಟ್ಟು ಬಿಡದ ಬಿಜೆಪಿಗರು ಶತಾಯ ಗತಾಯ ಅಧಿ ಕಾರ ಹಿಡಿಯಲೇಬೇಕೆನ್ನುವ ಛಲದಿಂದ ರಾಜಕೀಯ ಚದುರಂಗದಾಟ ಆಡುತ್ತಿದ್ದಾರೆ.

ಪಕ್ಷೇತರ ಅಭ್ಯರ್ಥಿಗೆ ಒಲಿಯುತ್ತಾ ಅಧಿಕಾರ

ಈ ಎಲ್ಲ ಬೆಳವಣಿಗೆಯ ನಡುವೆ ನಗರಸಭೆಯಲ್ಲಿರುವ ಓರ್ವ ಪಕ್ಷೇತರ ಅಭ್ಯರ್ಥಿಗೆ ಅದೃಷ್ಟ ಖುಲಾಯಿಸುತ್ತದೆಯೇ ಎಂಬ ಚರ್ಚೆಗಳು ಜೋರಾಗಿಯೇ ಹರಿದಾಡತೊಡಗಿವೆ. ಇದುವರೆಗೆ ಯಾವ ಪಕ್ಷಕ್ಕೂ ಬಹುಮತ ಸೂಚಿಸದ ಪಕ್ಷೇತರ ಅಭ್ಯರ್ಥಿ ಕೊನೆಯ ಹಂತದಲ್ಲಿ ನಡೆಯುವ ನಾಟಕೀಯ ಬೆಳವಣಿಗೆಯಲ್ಲಿ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾದರೂ ಅಚ್ಚರಿ ಪಡಬೇಕಿಲ್ಲ ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.

 ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.