Crime: ರಜೆಬೇಕೆಂದು ಜತೆ ಕಲಿಯುತ್ತಿದ್ದವನನ್ನು ಹೊಡೆದು ಕೊಂದ ಮದರಸಾದ ವಿದ್ಯಾರ್ಥಿಗಳು

ಕ್ರೈಮ್‌ ಶೋ ನೋಡಿ ಕೃತ್ಯವೆಸಗಿದ ಬಾಲಕರು.!

Team Udayavani, Aug 25, 2024, 1:24 PM IST

Crime: ರಜೆಬೇಕೆಂದು ಜತೆ ಕಲಿಯುತ್ತಿದ್ದವನನ್ನು ಹೊಡೆದು ಕೊಂದ ಮದರಸಾದ ವಿದ್ಯಾರ್ಥಿಗಳು

ದೆಹಲಿ: ಮದರಸಾದಲ್ಲಿ ಕಲಿಯುತ್ತಿದ್ದ 5 ವರ್ಷದ ಬಾಲಕನೊಬ್ಬ ಅನುಮನಾಸ್ಪದ ರೀತಿ ಸಾವನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಕೃತ್ಯದ ಹಿಂದಿನ ಅಸಲಿಯತ್ತು ತನಿಖೆಯಲ್ಲಿ ಬಯಲಾಗಿದೆ.

ಏನಿದು ಘಟನೆ?: ಶುಕ್ರವಾರ (ಆ.23ರಂದು) ರಾತ್ರಿ 10 ಗಂಟೆ ಸುಮಾರಿಗೆ ಈಶಾನ್ಯ ದೆಹಲಿಯ ದೈಲಾಪುರ ಪ್ರದೇಶದಲ್ಲಿರುವ ತಲೀಮುಲ್ ಖುರಾನ್‌ ಮದರಸಾದಿಂದ 5 ವರ್ಷದ ಬಾಲಕನ ತಾಯಿಗೆ ಕರೆ ಮಾಡಿ ನಿಮ್ಮ ಮಗನಿಗೆ ಹುಷಾರ್‌ ಇಲ್ಲವೆಂದು  ಹೇಳಲಾಗಿದೆ. ಕೂಡಲೇ ತಾಯಿ ಮದರಸಾದ ಬಳಿ ಬಂದು ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಮಗನ ಕುತ್ತಿಗೆ, ಬೆನ್ನು ಮತ್ತು ಸೊಂಟದ ಹಾಗೂ ತೊಡೆಸಂದುಗಳಲ್ಲಿ ಗಾಯಗಳಿತ್ತು. ಇದನ್ನು ನೋಡಿ ಅನುಮಾನಗೊಂಡ ತಾಯಿ ಮಗನ ಮೃತದೇಹವನ್ನು ಮದರಸಾಕ್ಕೆ ತಂದು ಅಲ್ಲಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿ ಪೊಲೀಸರಿಗೆ ಕರೆ ಮಾಡಿದ್ದಾರೆ.

ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕ ಅನಾರೋಗ್ಯದಿಂದ ಮೃತಪಟ್ಟಿರುವುದು ಅಲ್ಲವೆನ್ನುವುದು ಗೊತ್ತಾಗಿದೆ. ವಿದ್ಯಾರ್ಥಿಗೆ ಹಲ್ಲೆಗೈದ ಪರಿಣಾಮ ಗಂಭೀರವಾಗಿ ದೇಹದೊಳಗೆ ಗಾಯಗಳಾಗಿದೆ. ಇದರಿಂದ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ದೆಹಲಿ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಪೊಲೀಸರು ಮದರಸಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ವಿದ್ಯಾರ್ಥಿಯ ಸ್ನೇಹಿತರು ಮತ್ತು ಇತರ ವಿದ್ಯಾರ್ಥಿಗಳೊಂದಿಗೆ ಮಾಹಿತಿಯನ್ನು ಕೇಳಿದ್ದಾರೆ. ಅನುಮಾನಗೊಂಡ ಪೊಲೀಸರು ಮೂವರು ಬಾಲಕರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದಾಗ 11 ವರ್ಷದ ಮತ್ತು 9 ವರ್ಷದ ಮೂವರು ಬಾಲಕರು ಅಪರಾಧವೆಸಗಿರುವುದಾಗಿ ತಪ್ಪೋಪ್ಪಿಕೊಂಡಿದ್ದಾರೆ.

ಕೊಲೆ ಮಾಡಿದ್ದು ಯಾಕೆ?: ಮೂವರು ಬಾಲಕರು ರಜೆ ಪಡೆದು ಮನೆಗೆ ಭೇಟಿ ನೀಡಲು ಬಯಸಿದ್ದರು. ಹೀಗಾಗಿ ತಮ್ಮನ್ನು ಹೆಸೆರಿಟ್ಟು ಕರೆಯುತ್ತಿದ್ದ ನಿರ್ದಿಷ್ಟ ಬಾಲಕನನ್ನು ಗುರಿಯಾಗಿಸಿಕೊಂಡು ಈ ಕೃತ್ಯವನ್ನುವೆಸಗಿರುವುದಾಗಿ ವಿಚಾರಣೆಯಲ್ಲಿ ಹೇಳಿದ್ದಾರೆ.

ಕೃತ್ಯಕ್ಕೆ ನೆರವಾದ ಕ್ರೈಮ್‌ ಶೋ: ಕ್ರೈಮ್‌ ಶೋವೊಂದನ್ನು ನೋಡಿದ ಮೂವರು ಬಾಲಕನನ್ನು ಹತ್ಯೆಗೈಯುವ ಯೋಜನೆಯನ್ನು ಹಾಕಿಕೊಂಡಿದ್ದರು. ಕ್ರೈಮ್‌ ಶೋ ನೋಡಿ ಪ್ರೇರಣೆಗೊಂಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಸದ್ಯ ಮದರಸಾಕ್ಕೆ ಬೀಗ ಹಾಕಲಾಗಿದ್ದು, ಎಲ್ಲ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ಪೊಲೀಸರು ಬಾಲನ್ಯಾಯ ಮಂಡಳಿಯ ಕಾನೂನು ಪ್ರಕಾರ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.