Hubli; ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ: ಬಸವರಾಜ ಬೊಮ್ಮಾಯಿ


Team Udayavani, Aug 25, 2024, 2:44 PM IST

Hubli; ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಕಾಂಗ್ರೆಸ್‌ ನಲ್ಲಿ ಏನು ನಡೆಯುತ್ತಿದೆಯೋ ಅದು ಅವರ ಆಂತರಿಕ ವಿಚಾರ. ಆದರೆ ರಾಜ್ಯದಲ್ಲಿ ಏನು ನಡೆಯುತ್ತಿದೆ ಅನ್ನುವುದು ಮುಖ್ಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವುದು ಅವರಿಗೆ ಬಿಟ್ಟದ್ದು.‌ ವಿಪಕ್ಷದ ಆರೋಪಗಳನ್ನು ನಿಭಾಯಿಸಲು ಸಿಎಂ ಸಭೆಗಳ ಮೇಲೆ ಸಭೆ ಮಾಡುತ್ತಿದ್ದಾರೆ. ಹೈಕಮಾಂಡ್ ಶ್ರೀರಕ್ಷೆ ಎಲ್ಲಿಯವರೆಗೆ ಅನ್ನುವುದು ಅವರಿಗೆ ಬಿಟ್ಟ ವಿಚಾರ. ಒಂದು ವರದಿಯಲ್ಲಿ ಸಿಎಂಗೆ ರಕ್ಷೆ ಎಂದರೆ, ಮತ್ತೊಂದರಲ್ಲಿ ಪ್ರಾದೇಶಿಕ ಪಕ್ಷದ ರೀತಿ ನಡೆದುಕೊಳ್ಳಲಾಗಲ್ಲ ಎನ್ನಲಾಗುತ್ತಿದೆ ಎಂದರು.

ರಾಜ್ಯದ ಜನತೆ ಒಳ್ಳೆಯ ಆಡಳಿತ ನೀಡಲೆಂದು ಕಾಂಗ್ರೆಸ್‌ ಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ ಸರ್ಕಾರದಲ್ಲಿ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಬರಗಾಲ ಬಂದರೂ ಸರಿಯಾದ ಪರಿಹಾರ ಕೊಡುತ್ತಿಲ್ಲ. ಮುಳುಗಡೆಯಾದ ಪ್ರದೇಶಗಳಿಗೆ ಪರಿಹಾರ ಕೊಟ್ಟಿಲ್ಲ. ಒಂದು ವಿಡಿಯೋ ಕಾಲ್ ಬಿಟ್ಟರೆ ಬೇರೇನೂ ಮಾಡಿಲ್ಲ. ಸಂಕಷ್ಟದಲ್ಲಿರುವ ಜನತೆಗೆ ಸ್ಪಂದನೆ ಮಾಡದ ಸರ್ಕಾರ ರಾಜ್ಯದಲ್ಲಿದೆ. ಇಂತಹ ಸರ್ಕಾರ ಬೇಕೆ ಅನ್ನುವ ಪ್ರಶ್ನೆ ಉದ್ಭವವಾಗಿದೆ ಎಂದರು.

ಹಂಸರಾಜ್ ಭಾರದ್ವಾಜ್ ಒಬ್ಬ ರಾಜಕಾರಣಿಯ ಗವರ್ನರ್ ಆಗಿದ್ದ. ಆ ರೀತಿ ವರ್ತಿಸಿದ್ದ ಎಂದು ಮಾಜಿ ರಾಜ್ಯಪಾಲರ ವಿರುದ್ಧ ಏಕ ವಚನದಲ್ಲಿಯೇ ವಾಗ್ದಾಳಿ ನಡೆಸಿದರು.

ಹಂಸರಾಜ್ ಭಾರದ್ವಾಜ್ ರಾಜಕಾರಣ ಬಿಟ್ಟರೆ ಬೇರೇನು ಮಾಡಲಿಲ್ಲ. ದಿನ ಬೆಳಗಾದರೆ ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಿದ್ದರು. ಆ ಸಂದರ್ಭದಲ್ಲಿ ಕಾಂಗ್ರೆಸ್ ಹೇಗೆ ನಡೆದುಕೊಂಡಿತು? ಅಂದು ರಾಜ್ಯಪಾಲರ ಭಾಷೆ, ಅವರ ನಿರ್ಧಾರ ಇವರಿಗೆ ಬೇಕಾಗಿತ್ತು. ಈಗ ಅದೇ ಪರಿಸ್ಥಿತಿ ಅವರಿಗೆ ಬಂದಾಗ ರಾಜ್ಯಪಾಲರ ವಿರುದ್ಧ ಮಾತನಾಡುತ್ತಿದ್ದಾರೆ. ಇದು ಸಂವಿಧಾನ ಮತ್ತು ರಾಜ್ಯಾಂಗದ ಪ್ರಶ್ನೆ. ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಗಳು. ಆ ಸ್ಥಾನ ಬಹಳ ಮುಖ್ಯವಾದದ್ದು.‌ ಅವರ ಕಾರ್ಯ ವೈಖರಿ ಬಗ್ಗೆ ಭಿನ್ನಾಭಿಪ್ರಾಯವಿದ್ದರೆ ಹೇಳುವುದಕ್ಕೆ ರೀತಿ ನೀತಿ ಇದೆ.‌ ಆ ರೀತಿ ನಡೆದುಕೊಂಡರೆ ರಾಜ್ಯ ಸರ್ಕಾರದ ಗೌರವ ಸಿಗುತ್ತದೆ. ರಾಜ್ಯಪಾಲರನ್ನು ಬಯ್ಯುವುದರಿಂದ ಕಾಂಗ್ರೆಸ್‌ ಗೆ ಏನು ಲಾಭ ಆಗಲ್ಲ. ಅಹಿಂದ ಸಂಘಟನೆಯಿಂದ ರಾಜಭವನ ಚಲೋ ವಿಚಾರವು ಕಾಂಗ್ರೆಸ್ ಪ್ರೇರಿತ ಹೋರಾಟ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ನನ್ನ ಮಗ ಸ್ಪರ್ಧಿಸಲ್ಲ

ಭರತ್ ಬೊಮ್ಮಾಯಿ ಶಿಗ್ಗಾವಿಯಿಂದ ಸ್ಪರ್ಧಿಸಲ್ಲ. ಟಿಕೆಟ್ ಸಹ ಕೇಳಿಲ್ಲ. ಅಲ್ಲದೆ ಶಿಗ್ಗಾವಿ-ಸವಣೂರು ಕ್ಷೇತ್ರದ ಜನ ಭರತ್‌ಗೆ ಟಿಕೆಟ್ ಕೊಡಲು ಒತ್ತಡ ತಂದಿಲ್ಲ. ಜೋಶಿಯವರನ್ನು ಭೇಟಿಯಾಗಲು ಶಿಗ್ಗಾವಿ ಕ್ಷೇತ್ರದ ಜನ ಹೋಗಿದ್ದ ಉದ್ದೇಶವೇ ಬೇರೆ. ಆದರೆ ಅದು ಬೇರೆ ರೀತಿಯ ಪ್ರಚಾರವಾಗಿದೆ. ಕಷ್ಟದಲ್ಲಿ ಪಕ್ಷ ಕಟ್ಟಿದವರಿಗೆ, ನಿಷ್ಠರಿಗೆ ಟಿಕೆಟ್ ಕೊಡುವಂತೆ ಮನವಿ ಮಾಡಿದ್ದಾರೆ.‌ ಈ ವೇಳೆ ಜೋಶಿಯವರು ಭರತ್ ಹೆಸರು ಹೇಳಿದ್ದಾರೆ.‌ ನಾನು ನನ್ನ ಮಗನಿಗೆ ಟಿಕೆಟ್ ಕೇಳಿಲ್ಲ.‌ ನನ್ನ ಮಗ ಸ್ಪರ್ಧೆ ಮಾಡುವ ವಿಚಾರವಿಲ್ಲ ಎಂದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanagere

Davanagere: ಮರಳು ತೆಗೆದ ವಿಚಾರದಲ್ಲಿ ಘರ್ಷಣೆ… ಓರ್ವ ಮೃತ್ಯು, ಇನ್ನೋರ್ವ ಗಂಭೀರ

police

Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು

M. P. Renukacharya:ಪ್ಯಾಲೆಸ್ತೇನ್‌ ಪರ ಧ್ವಜ ಹಾರಿಸುವವರ ಮೇಲೆ ಗುಂಡು ಹೊಡೆಯಿರಿ

M. P. Renukacharya:ಪ್ಯಾಲೆಸ್ತೇನ್‌ ಪರ ಧ್ವಜ ಹಾರಿಸುವವರ ಮೇಲೆ ಗುಂಡು ಹೊಡೆಯಿರಿ

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.