Krishna Matha: ಉಡುಪಿಯಲ್ಲಿಂದು ವೈಭವದ ಕೃಷ್ಣಾಷ್ಟಮಿ


Team Udayavani, Aug 26, 2024, 1:10 AM IST

Krishna Matha: Glorious Krishna Ashtami in Udupi

ಉಡುಪಿ: ಪೊಡವಿಗೊಡೆಯನ ನಾಡಿನಲ್ಲಿ ಅಷ್ಟಮಿಯ ಸಂಭ್ರಮ ಕಳೆಗಟ್ಟಿದ್ದು, ಶ್ರೀ ಕೃಷ್ಣಮಠದ ಆವರಣ ಸಹಿತವಾಗಿ ಇಡೀ ನಗರದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಸೋಮವಾರ ಬೆಳಗ್ಗೆಯಿಂದಲೇ ಅಷ್ಟಮಿಯ ವೈಭವ ಕಾಣಸಿಗಲಿದೆ.
ಶ್ರೀ ಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಮಠದೊಳಗೆ ನಡೆಯುವ ವಿವಿಧ ಧಾರ್ಮಿಕ ಕಾರ್ಯಕ್ರಮ, ಒಳಗಿನ ಅಲಂಕಾರ, ನೈವೇದ್ಯ ಹಾಗೂ ಪ್ರಸಾದದ ರೂಪದಲ್ಲಿ ನೀಡುವ ಲಡ್ಡು, ಚಕ್ಕುಲಿ ಇತ್ಯಾದಿಗಳ ಸಿದ್ಧತೆ ಭರದಿಂದ ಸಾಗಿದೆ. ಆ. 26ರ ಬೆಳಗ್ಗೆಯಿಂದಲೇ ಶ್ರೀ ಕೃಷ್ಣಮಠದಲ್ಲಿ ಅಷ್ಟಮಿ ಸಂಭ್ರಮ ಡೋಲೋತ್ಸವದೊಂದಿಗೆ ಆರಂಭಗೊಂಡು ಆ.27ರ ವಿಟ್ಲಪಿಂಡಿ ಉತ್ಸವ ಮುಗಿಯುವರೆಗೂ ಇರಲಿದೆ.

ರಥಬೀದಿಯಲ್ಲಿ ನಾನಾ ಬಗೆಯ ಅಂಗಡಿ, ಮಾರಾಟ ಮಳಿಗಳನ್ನು ತೆರೆಯಲಾಗಿದೆ. ರಥಬೀದಿ ಸಹಿತವಾಗಿ ಉಡುಪಿ ನಗರದ ಮುಖ್ಯರಸ್ತೆಗಳು, ಮಣಿಪಾಲ, ಬ್ರಹ್ಮಾವರ, ಕಾಪು, ಕೋಟ, ಸಾಲಿಗ್ರಾಮ ಮೊದಲಾದ ಭಾಗದಲ್ಲಿ ಅಷ್ಟಮಿ ನಿಮಿತ್ತವಾಗಿ ವಿವಿಧ ಬಗೆಯ ಹೂವಿನ ಮಾರಾಟವೂ ಜೋರಾಗಿ ನಡೆಯುತ್ತಿದೆ. ಹೊರ ಜಿಲ್ಲೆಗಳ ಮಾರಾಟಗಾರರು ಅಲ್ಲಲ್ಲಿ ಹೂವಿನ ರಾಶಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದಾರೆ. ಪುರದ ಜನರಿಂದ ಖರೀದಿ ಪ್ರಕ್ರಿಯೆಯೂ ಜೋರಾಗಿ ನಡೆಯುತ್ತಿದೆ. ಕೃಷ್ಣಮಠಕ್ಕೆ ಆಗಮಿಸುವ ಭಕ್ತರು, ಪ್ರವಾಸಿಗರ ಸಂಖ್ಯೆಯೂ ಹೆಚ್ಚುತ್ತಿದೆ.

ಲಕ್ಷ ಲಾಡು, ಚಕ್ಕುಲಿ
40ಕ್ಕೂ ಅಧಿಕ ಬಾಣಸಿಗರು ಸೇರಿ ಗುಂಡಿಟ್ಟು ಲಡ್ಡು, ಎಳ್ಳುಲಡ್ಡು, ಕಡಲೆಹಿಟ್ಟಿನ ಲಡ್ಡು ಹೀಗೆ ಮೂರ್‍ನಾಲ್ಕು ಬಗೆಯ ತಲಾ 1 ಲಕ್ಷ ಲಡ್ಡು ಜತೆಗೆ 1 ಲಕ್ಷ ಚಕ್ಕುಲಿ ಸಿದ್ಧಪಡಿಸಿದ್ದಾರೆ. ಲಡ್ಡು ಮತ್ತು ಚಕ್ಕುಲಿಯನ್ನು ಪ್ರಸಾದದ ರೂಪದಲ್ಲಿ ಭಕ್ತರಿಗೆ ನೀಡಿಲು ಬೇಕಾದ ಪ್ಯಾಕಿಂಗ್‌ ವ್ಯವಸ್ಥೆಯನ್ನು ರವಿವಾರ ಬೆಳಗ್ಗೆಯಿಂದಲೇ ಮಾಡಲಾಗಿದೆ.

ಇಂದು ವಿವಿಧ ಸ್ಪರ್ಧೆ
ಅಷ್ಟಮಿಯ ಹಿನ್ನೆಲೆಯಲ್ಲಿ ರವಿವಾರ ಬೆಳಗ್ಗೆ ಶ್ರೀ ಕೃಷ್ಣಮಠದ ಆವರಣದಲ್ಲಿ ಕಬಡ್ಡಿ ಸ್ಪರ್ಧೆ ನಡೆದಿದೆ. ಪೇಪರ್‌ ವೇಷ ಸಹಿತ ವಿವಿಧ ವೇಷಧಾರಿಗಳು ಈಗಾಗಲೇ ಮಠದ ಆವರಣ ಸಹಿತ ನಗರದಾದ್ಯಂತ ಸುತ್ತಾಟ ಆರಂಭಿಸಿದ್ದಾರೆ. ರಾಜಾಂಗಣದಲ್ಲಿ ರಂಗೋಲಿ ಸ್ಪರ್ಧೆಯೂ ನಡೆದಿದೆ. ಸೋಮವಾರ ಬೆಳಗ್ಗೆಯಿಂದಲೇ ಮುದ್ದುಕೃಷ್ಣ ಸ್ಪರ್ಧೆ ನಡೆಯಲಿದೆ.

ಹುಲಿವೇಷಗಳ ಅಬ್ಬರ
ಕೃಷ್ಣಾಷ್ಟಮಿಯೆಂದರೆ ಎಲ್ಲೆಡೆ ಹುಲಿವೇಷ, ವಿವಿಧ ವೇಷಗಳ ರಂಗು ಕಣ್ತುಂಬಿಕೊಳ್ಳಬಹುದು. ಈ ನಡುವೆ ಮಹಿಳಾ ಹುಲಿವೇಷಧಾರಿಗಳ ತಂಡ ವಿಶೇಷ ಗಮನ ಸೆಳೆಯಲಿದೆ. ದರ್ಪಣ ನೃತ್ಯ ಸಂಸ್ಥೆಯ ಬಾಲಕಿ, ಯುವತಿಯರು, ಮಹಿಳೆಯರು 2ನೇ ವರ್ಷವೂ ಹುಲಿವೇಷ ಹಾಕಿ ಗಮನ ಸೆಳೆಯಲಿದ್ದಾರೆ. ಮಾರ್ಪಳ್ಳಿ, ಅಲೆವೂರು, ನಿಟ್ಟೂರು, ಕೊರಂಗ್ರಪಾಡಿ, ಕಡಿಯಾಳಿ, ಕಾಡುಬೆಟ್ಟು, ಮಲ್ಪೆ, ಮಣಿಪಾಲ ಹುಡ್ಕೋ ಕಾಲನಿ ಸಹಿತ ಮೊದಲಾದ ಕಡೆಯ ಪ್ರಸಿದ್ಧ ಹುಲಿವೇಷ ತಂಡಗಳು ಅಬ್ಬರಿಸಲಿವೆ. ಇದಕ್ಕಾಗಿ ರಥಬೀದಿ ಸಹಿತ ನಗರದ ವಿವಿಧ ಭಾಗದಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಹುಲಿ ಕುಣಿತಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ.

ಡೋಲೋತ್ಸವ
ಈ ವರ್ಷ ವಿಶೇಷ ಎಂಬಂತೆ ವಸಂತ ಮಂಟಪದಲ್ಲಿ ಡೋಲೋತ್ಸವ ಹೆಸರಿನಲ್ಲಿ ಕೃಷ್ಣನ ಮೂರ್ತಿ ಇರುವ ತೊಟ್ಟಿಲು ತೂಗಲು ಸೇವಾಕರ್ತರಿಗೆ ಅವಕಾಶ ಮಾಡಿಕೊಡಲಾಗಿದೆ. ಅಷ್ಟಮಿಯಂದು ಉಪವಾಸ ವ್ರತ ಇರಲಿದೆ. ಮಧ್ಯರಾತ್ರಿ ಅರ್ಘ್ಯ ಪ್ರದಾನಕ್ಕೆ ದೇವಸ್ಥಾನದ ಒಳಗೆ ಮತ್ತು ಹೊರಗೂ ವ್ಯವಸ್ಥೆ ಕಲ್ಪಿಸಲಾಗುವುದು. ಮಂಗಳವಾರ ವಿಟ್ಲಪಿಂಡಿ ಉತ್ಸವ, ಭೋಜನಪ್ರಸಾದ ಇರಲಿದೆ.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.