Darshan ಜೈಲಿನಲ್ಲಿ ರಾಜಾತಿಥ್ಯ ? ಫೋಟೋ ಬೆನ್ನಲ್ಲೇ ಚಾಟ್ ವಿಡಿಯೋ ಬಯಲಿಗೆ!
ಪರಪ್ಪನ ಅಗ್ರಹಾರದಲ್ಲಿ ಏನಾಗುತ್ತಿದೆ... ಗೃಹ ಇಲಾಖೆಗೆ ಸವಾಲಾಗಿ ಪರಿಣಮಿಸಿದ ಫೋಟೋ, ವಿಡಿಯೋ!!
Team Udayavani, Aug 25, 2024, 8:39 PM IST
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy case) ಜೈಲಿನಲ್ಲಿರುವ ನಟ ದರ್ಶನ್ (Darshan) ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಜೇವನಕ್ಕೆ ಅವಕಾಶ ನೀಡಲಾಗಿದೆಯೇ? ರಾಜಾತಿಥ್ಯ ನೀಡಲಾಗುತ್ತಿದೆಯೇ? ಈ ಪ್ರಶ್ನೆಗಳು ಹುಟ್ಟಿ ಕೊಳ್ಳಲು ಕಾರಣವಾಗಿದ್ದು ಭಾನುವಾರ (ಆ 25) ಬಿಡುಗಡೆಯಾಗಿರುವ ಒಂದು ಫೋಟೋ ಮತ್ತು ವಿಡಿಯೋ.
ದರ್ಶನ್ ಅವರು ಪ್ರಕರಣದ 11ನೇ ಆರೋಪಿ ನಾಗರಾಜ್, ರೌಡಿಶೀಟರ್ ವಿಲ್ಸನ್ ನಾಗರಾಜ್ ಹಾಗೂ ಇನ್ನೊಬ್ಬ ವ್ಯಕ್ತಿಯೊಂದಿಗೆ ಜೈಲಿನ ವಿಡಿಯೋ ಕಾನ್ಫೆರೆನ್ ಹಾಲ್ನ ಹಿಂಭಾಗದ ಸ್ಥಳದಲ್ಲಿ ಖುರ್ಚಿ ಮೇಲೆ ಕುಳಿತು ಕೈಯಲ್ಲಿ ಸಿಗರೇಟ್ ಹಿಡಿದು, ಮತ್ತೊಂದು ಕೈಯಲ್ಲಿ ಕಾಫಿ ಕಪ್ ಹಿಡಿದುಕೊಂಡಿರುವ ಫೋಟೋ ವೈರಲ್ ಆಗಿದೆ.
ಫೋಟೋ ಬೆನ್ನಲ್ಲೇ ಅದೇ ಮುಖಭಾವದಲ್ಲಿ ದರ್ಶನ್ ಆಪ್ತರೊಬ್ಬರೊಂದಿಗೆ ಇನ್ಸ್ಟಾ ಗ್ರಾಂ ವಿಡಿಯೋದಲ್ಲಿ ಮಾತನಾಡಿರುವ ವಿಡಿಯೋ ಕೂಡ ಬಯಲಿಗೆ ಬಂದಿದೆ.
ಇದನ್ನೂ ಓದಿ : Darshan ಫೋಟೋ ವೈರಲ್;ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ: ಸಿಬಿಐ ತನಿಖೆಗೆ ಒತ್ತಾಯ
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಮತ್ತು ಜೈಲು ಅಧಿಕಾರಿಗಳಿಗೆ ಮತ್ತು ಗೃಹ ಇಲಾಖೆಗೆ ಈ ವಿದ್ಯಮಾನ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗಾಗಲೇ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶವೂ ವ್ಯಕ್ತವಾಗುತ್ತಿದೆ.
ಈ ಫೋಟೋ ಮತ್ತು ವಿಡಿಯೋ ಕುರಿತು ತನಿಖೆ ಮಾಡಿ ಸತ್ಯಾ ಸತ್ಯತೆ ತಿಳಿಸಬೇಕಾದ ಅನಿವಾರ್ಯತೆ ಈಗ ಎದುರಾಗಿದೆ. ಪೊಲೀಸ್ ಇಲಾಖೆಗೆ ಅತೀ ದೊಡ್ಡ ಪ್ರಕರಣ ಇನ್ನಷ್ಟು ಸವಾಲಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.