Virtual arrest ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಸೆನ್‌ ಪೊಲೀಸರು


Team Udayavani, Aug 26, 2024, 6:35 AM IST

Virtual arrest ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಸೆನ್‌ ಪೊಲೀಸರು

ಉಡುಪಿ: ಮುಂಬಯಿಯ ಕಸ್ಟಮ್ಸ್‌ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಆನ್‌ಲೈನ್‌ನಲ್ಲಿ ಕೋಟ್ಯಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಸೆನ್‌ ಪೊಲೀಸರು ಗುಜರಾತ್‌ ರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಗುಜರಾತ್‌ ರಾಜ್ಯದ ಸೂರತ್‌ ಸಿಟಿ ದಭೋಲಿ ರಸ್ತೆಯ ನಿವಾಸಿ ನವಾದಿಯಾ ಮುಖೇಶ್‌ ಭಾಯಿ/ಗಣೇಶ್‌ ಭಾಯಿ (44), ಗುಜರಾತ್‌ನ ರಾಜ್‌ಕೋಟ್‌ ಜಿಲ್ಲೆಯ ಆಕಾಶವಾಣಿ ಚೌಕ್‌ ಯೂನಿವರ್ಸಿಟಿ ರಸ್ತೆಯ ನಿವಾಸಿ ಧರಮ್‌ಜೀತ್‌ ಕಮಲೇಶ್‌ ಚೌಹಾನ್‌ (28) ಬಂಧಿತ ಆರೋಪಿಗಳು. ಆರೋಪಿಗಳಿಂದ 5 ಮೊಬೈಲ್‌ ಫೋನ್‌ಗಳನ್ನು ಹಾಗೂ 13.95 ಲಕ್ಷ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವೈದ್ಯರಾಗಿರುವ ಡಾ| ಅರುಣ್‌ ಕುಮಾರ್‌ (53) ಅವರಿಗೆ ಜು. 29ರಂದು ಅಪರಿಚಿತ ವ್ಯಕ್ತಿಗಳು ಫೋನ್‌ ಕರೆ ಮಾಡಿ ಕಸ್ಟಮ್ಸ್‌ನಿಂದ ಕರೆ ಮಾಡುವುದಾಗಿ ತಿಳಿಸಿ, ನಿಮ್ಮ ಆಧಾರ್‌ ನಂಬರ್‌ ಬಳಸಿ ಬುಕ್‌ ಆಗಿರುವ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್‌, 5 ಎಟಿಎಂ ಕಾರ್ಡ್‌, 200 ಗ್ರಾಂ. ಎಂಡಿಎಂಎ ಹಾಗೂ 5000 ಯುಎಸ್‌ ಡಾಲರ್‌ವಿದ್ದು, ಕೋರಿಯರ್‌ ಮುಂಬಯಿಯ ಕಸ್ಟಮ್ಸ್‌ ಅಧಿಕಾರಿಗಳ ವಶದಲ್ಲಿ ಇರುವುದಾಗಿ ತಿಳಿಸಿ ಹೆದರಿಸಿದ್ದರು.

ಆ ಬಳಿಕ ಪೊಲೀಸ್‌ ಅಧಿಕಾರಿ ಯೆಂದು ನಂಬಿಸಿ ಡಾ| ಅರುಣ್‌ ಕುಮಾರ್‌ಗೆ ಕರೆ ಮಾಡಿ, ನಿಮ್ಮ ಆಧಾರ್‌ ಕಾರ್ಡ್‌ ದುರ್ಬಳಕೆಯ ಬಗ್ಗೆ ದೂರನ್ನು ಸ್ವೀಕರಿಸಲಾಗಿದ್ದು, ಆಧಾರ್‌ ಕಾರ್ಡ್‌ ಅನ್ನು ಭಯೋ ತ್ಪಾದಕರು ಸಿಮ್‌ ಖರೀದಿಸಲು ಬಳಸಿ ದ್ದಾರೆ. ಈ ದೂರಿಗೆ ಸಂಬಂಧಿಸಿ ನಿಮ್ಮನ್ನು “ವರ್ಚುವಲ್‌ನಲ್ಲಿ ಆರೆಸ್ಟ್‌’ ಮಾಡುವು ದಾಗಿ ಬೆದರಿಕೆ ಹಾಕಿ ದ್ದರು. ಅಲ್ಲದೇ ಜು. 29ರಿಂದ ಆ. 9ರ ವರೆಗೆ ಮನೆಯ ರೂಮ್‌ ಒಂದರಲ್ಲಿ ಇರುವಂತೆ ಹಾಗೂ ಬೇರೆ ಯವರೊಂದಿಗೆ ಯಾವುದೇ ಸಂಪರ್ಕ ಮಾಡದಂತೆ ಸೂಚಿಸಿದ್ದರು.

ಸೆನ್‌ ಅಪರಾಧ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ರಾಮಚಂದ್ರ ನಾಯಕ್‌ ಅವರ ನೇತೃತ್ವದಲ್ಲಿ ಎಸ್‌ಐ ಅಶೋಕ್‌, ಸಿಬಂದಿ ಪ್ರವೀಣ ಶೆಟ್ಟಿಗಾರ್‌, ರಾಜೇಶ್‌, ಅರುಣ ಕುಮಾರ್‌, ಯತೀನ್‌ ಕುಮಾರ್‌, ರಾಘವೇಂದ್ರ ಕಾರ್ಕಡ, ದೀಕ್ಷಿತ್‌, ಪ್ರಶಾಂತ್‌, ಮುತ್ತೆಪ್ಪ ಆಡೀನ್‌, ಮಾಯಪ್ಪ ಗಡದೆ, ಪರಶುರಾಮ ಮತ್ತು ಸುದೀಪ್‌ ಅವರನ್ನು ಒಳಗೊಂಡ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.

1.33 ಕೋಟಿ ರೂ. ವಂಚಿಸಿದ್ದರು!
ಈ ಪ್ರಕರಣವನ್ನು ಸರಿಪಡಿ ಸಲು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಣ ಪಾವತಿಸುವಂತೆ ತಿಳಿ ಸಿದ್ದು, ಅದರಂತೆ ಡಾ| ಅರುಣ್‌ ಕುಮಾರ್‌ ತಮ್ಮ ಖಾತೆ ಯಿಂದ ಆ. 6ರಿಂದ ಆ. 9ರ ವರೆಗೆ ಹಂತವಾಗಿ ಒಟ್ಟು 1,33,81,000 ರೂ. ಹಣವನ್ನು ವರ್ಗಾ ಯಿಸಿರುವುದಾಗಿ ದೂರಿ ನಲ್ಲಿ ತಿಳಿಸಿದ್ದರು. ಈ ಬಗ್ಗೆ ಡಾ| ಅರುಣ್‌ ಕುಮಾರ್‌ ಗೋವಿಂದ ಕರ್ನವರ್‌ ನೀಡಿದ ದೂರಿನಂತೆ ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.