Tourist Spot ಅಭಿವೃದ್ಧಿಗೆ ವಿಶೇಷ ಯೋಜನೆ: “ದೇಕೋ ಅಪ್ನಾ ದೇಶ್‌, ಪೀಪಲ್ಸ್‌ ಚಾಯ್ಸ್ -2024′


Team Udayavani, Aug 25, 2024, 11:52 PM IST

Tourist Spot ಅಭಿವೃದ್ಧಿಗೆ ವಿಶೇಷ ಯೋಜನೆ: “ದೇಕೋ ಅಪ್ನಾ ದೇಶ್‌, ಪೀಪಲ್ಸ್‌ ಚಾಯ್ಸ -2024′

ಮಂಗಳೂರು: ಪ್ರವಾಸೋದ್ಯಮವನ್ನು ಮೇಲ್ದರ್ಜೆ ಗೇರಿಸಲು ಹಾಗೂ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ “ದೇಕೋ ಅಪ್ನಾ ದೇಶ್‌, ಪೀಪಲ್ಸ್‌ ಚಾಯ್ಸ -2024′ ಕಾರ್ಯಕ್ರಮ ಪ್ರಾರಂಭಿಸಿದೆ.

ಕಾರ್ಯಕ್ರಮದ ಭಾಗವಾಗಿ ನಾಗರಿಕರು ಹಾಗೂ ಪ್ರವಾಸಿಗರು ಆದ್ಯತೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲು ಮೈ ಗವರ್ನಮೆಂಟ್‌ ವೇದಿಕೆಯಡಿ ಅವಕಾಶ ಕಲ್ಪಿಸಲಾಗಿದೆ. ಆದ್ಯತೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲು ಸೆ.15ರ ವರೆಗೆ ಮತ ನೀಡುವ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆ ಮಾಡಲು ತಾವು ಈಗಾಗಲೇ ಭೇಟಿ ನೀಡಿರುವ ಕನಿಷ್ಠ ಒಂದು ಪ್ರೇಕ್ಷಣೀಯ ಸ್ಥಳವನ್ನು ಆಯ್ಕೆ ಮಾಡುವುದು ಕಡ್ಡಾಯವಾಗಿದೆ ಮತ್ತು ತಾವು ಭವಿಷ್ಯದಲ್ಲಿ ಭೇಟಿ ನೀಡಲು ಬಯಸುವ ಕನಿಷ್ಠ ಒಂದು ಪ್ರೇಕ್ಷಣೀಯ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬೇಕು.

ಈ ವೇಳೆ ಲಿಂಕ್‌ನಲ್ಲಿ ತಮ್ಮ ಮೊಬೈಲ್‌ ನಂಬರ್‌, ಹೆಸರು, ವಯಸ್ಸು, ರಾಜ್ಯ ಸಹಿತ ಪ್ರಾಥಮಿಕ ಮಾಹಿತಿಯನ್ನು ತುಂಬಿ ಒಟಿಪಿ ಮೂಲಕ ಲಾಗಿನ್‌ ಆಗಿ ದೇಶದ ಯಾವುದೇ ಪ್ರವಾಸಿ ಸ್ಥಳದ ಕುರಿತು ವೋಟ್‌ ಮಾಡಬಹುದಾಗಿದೆ. ದೇಶದ ಹಲವು ಪ್ರವಾಸಿ ತಾಣಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳನ್ನು ಸೇರಿಸಲಾಗಿದೆ.

ಇದರಿಂದ ಗುರುತಿಸಲಾದ ವಿಜೇತ ಪ್ರೇಕ್ಷಣೀಯ ತಾಣಗಳನ್ನು ಭಾರತ ಸರಕಾರದ ಪ್ರವಾಸೋದ್ಯಮ ಸಚಿವಾಲಯದ ಅಡಿಯಲ್ಲಿ ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುವುದರೊಂದಿಗೆ ಇದು ಭಾರತದ ವೀಕ್ಷಿತ್‌ ಭಾರತ್‌-2047 ಕಡೆ ಪ್ರಯಾಣಕ್ಕೆ ಕೊಡುಗೆ ನೀಡುತ್ತದೆ.

ವೋಟಿಂಗ್‌ನಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಕೇಂದ್ರ ಸರಕಾರದಿಂದ ಅವರ ಹೆಸರಿನಲ್ಲಿ ಇ-ಪ್ರಮಾಣ ಪತ್ರ ನೀಡಲಾಗುತ್ತದೆ. ಸಾರ್ವಜನಿಕರು http://https;//innovateindia.mygov.in/dekho-apna-desh/login/ ವೆಬ್‌ ಲಿಂಕ್‌ ಬಳಸಿ ಜಿಲ್ಲೆಯ ಮೆಚ್ಚಿನ ಪ್ರವಾಸಿ ತಾಣದ ಕುರಿತು ವೋಟ್‌ ಮಾಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.