US ಓಪನ್‌ ಇಂದಿನಿಂದ: ನ್ಯೂಯಾರ್ಕ್‌ ಟೆನಿಸ್‌ ಗಾದಿಗೆ ಪೈಪೋಟಿ


Team Udayavani, Aug 26, 2024, 6:30 AM IST

1-usss

ನ್ಯೂಯಾರ್ಕ್‌: ವಿಶ್ವದ ಅಗ್ರಮಾನ್ಯ ಟೆನಿಸಿಗರ ಅಖಾಡವಾಗಿರುವ ವರ್ಷಾಂತ್ಯದ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಟೆನಿಸ್‌ ಪಂದ್ಯಾವಳಿ ಸೋಮವಾರ ನ್ಯೂಯಾ ರ್ಕ್‌ನಲ್ಲಿ ಆರಂಭವಾಗಲಿದೆ. ಮೊನ್ನೆ ಯಷ್ಟೇ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಚಿನ್ನ ಜಯಿಸಿದ ಹುರುಪಿನಲ್ಲಿರುವ ನೊವಾಕ್‌ ಜೊಕೋವಿಕ್‌ ಪ್ರಶಸ್ತಿ ಉಳಿಸಿಕೊಳ್ಳುವರೇ, ಫಾರ್ಮ್ ಇಲ್ಲದೇ ಪರದಾಡುತ್ತಿರುವ ವನಿತಾ ವಿಭಾಗದ ಚಾಂಪಿಯನ್‌ ಕೊಕೊ ಗಾಫ್ ಎಲ್ಲಿಯ ತನಕ ಓಟ ಬೆಳೆಸಿಯಾರು ಎಂಬುದು ಈ ಕೂಟದ ದೊಡ್ಡ ಕುತೂಹಲ.

ಕೂಟದ ಅಗ್ರ ಶ್ರೇಯಾಂಕ ಪಡೆದಿ ರುವ ಜಾನಿಕ್‌ ಸಿನ್ನರ್‌ ಮತ್ತು ಇಗಾ ಸ್ವಿಯಾಟೆಕ್‌, ಪ್ರಬಲ ಸ್ಪರ್ಧಿಯಾಗಿರುವ ಕಾರ್ಲೋಸ್‌ ಅಲ್ಕರಾಜ್‌ ಅವರೆಲ್ಲ ನೆಚ್ಚಿನ ಆಟಗಾರರಾಗಿದ್ದಾರೆ. ಅಲ್ಕ ರಾಜ್‌ ಅಭ್ಯಾಸದ ವೇಳೆ ಪಾದ ಉಳುಕಿಸಿ ಕೊಂಡರೂ ಇದೊಂದು ಗಂಭೀರ ಸಮಸ್ಯೆ ಅಲ್ಲ ಎಂದಿದ್ದಾರೆ. ಅವರು ಈ ವರ್ಷದ ಫ್ರೆಂಚ್‌ ಓಪನ್‌ ಹಾಗೂ ವಿಂಬಲ್ಡನ್‌ ಚಾಂಪಿಯನ್‌ ಎಂಬುದನ್ನು ಮರೆಯುವಂತಿಲ್ಲ. ವಿಂಬಲ್ಡನ್‌ ಫೈನಲ್‌ನಲ್ಲಿ ಅವರು ಜೊಕೋವಿಕ್‌ಗೆ
ಆಘಾತವಿಕ್ಕಿದ್ದರು. ಇದಕ್ಕೆ ಜೊಕೋ ಪ್ಯಾರಿಸ್‌ನಲ್ಲಿ ಒಂದು ಸುತ್ತಿನ ಸೇಡು ತೀರಿ ಸಿಕೊಂಡಿದ್ದಾರೆ, ಆದರೆ ನ್ಯೂಯಾರ್ಕ್‌ ನಲ್ಲಿ ಸ್ಪೇನಿಗನನ್ನು ಸೋಲಿಸಿದರಷ್ಟೇ ಅವರಿಗೆ ಸಮಾಧಾನ!

ಸಿನ್ನರ್‌ ಹಾಟ್‌ ಫಾರ್ಮ್
ಹಾಗೆಯೇ ಪ್ರಚಂಡ ಫಾರ್ಮ್ ನಲ್ಲಿರುವ ಇಟಲಿಯ ಜಾನಿಕ್‌ ಸಿನ್ನರ್‌ ಇತ್ತೀಚೆಗಷ್ಟೇ “ಪಾಸಿಟಿವ್‌’ ಸುಳಿಯಲ್ಲಿ ಸಿಲುಕಿದ್ದರು. ಆದರೆ ಇದು ಅರಿಯದೇ ಆದ ತಪ್ಪು ಎಂದು ಸ್ವತಂತ್ರ ಟ್ರಿಬ್ಯುನಲ್‌ ತೀರ್ಪು ನೀಡಿರುವುದು ಸಿನ್ನರ್‌ ಆತ್ಮ ವಿಶ್ವಾಸವನ್ನು ಸಹಜವಾಗಿಯೇ ಹೆಚ್ಚಿಸಿದೆ. ವರ್ಷಾರಂಭದ ಆಸ್ಟ್ರೇಲಿಯನ್‌ ಓಪನ್‌ ಚಾಂಪಿಯನ್‌ಶಿಪ್‌ ಪ್ರಶಸ್ತಿಯೊಂದಿಗೆ ಮೊದಲ ಗ್ರ್ಯಾನ್‌ಸ್ಲಾಮ್‌ ಗೆದ್ದ ಸಿನ್ನರ್‌, ಮೊನ್ನೆಯಷ್ಟೇ ಸಿನ್ಸಿನಾಟಿ ಮಾಸ್ಟರ್ ಚಾಂಪಿಯನ್‌ ಕೂಡ ಆಗಿದ್ದರು. ಇವರ ಮೊದಲ ಸುತ್ತಿನ ಎದುರಾಳಿ ಅಮೆರಿಕದ ಮೆಕೆಂಜಿ ಮೆಕ್‌ಡೊನಾಲ್ಡ್‌. ಪುರುಷರ ಡ್ರಾದಲ್ಲಿ ಸಿನ್ನರ್‌ ಮತ್ತು ಜೊಕೋವಿಕ್‌ ವಿರುದ್ಧ ಗುಂಪಿನಲ್ಲಿದ್ದಾರೆ.

ವನಿತಾ ವಿಭಾಗದಲ್ಲಿ ಒಲಿಂಪಿಕ್‌ ಚಾಂಪಿಯನ್‌ ಜೆಂಗ್‌ ಕ್ವಿನ್ವೆನ್‌, ಅರಿನಾ ಸಬಲೆಂಕಾ ಪ್ರಬಲ ಸ್ಪರ್ಧಿಗಳಾಗಿದ್ದಾರೆ. ಇವರಿಬ್ಬರು ಕ್ವಾರ್ಟರ್‌ ಫೈನಲ್‌ನಲ್ಲಿ ಎದುರಾಗುವ ಸಾಧ್ಯತೆ ಇದೆ. ಆಗ ಇದು ಆಸ್ಟ್ರೇಲಿಯನ್‌ ಓಪನ್‌ ಪಂದ್ಯಾವಳಿಯ ರೀ ಮ್ಯಾಚ್‌ ಆಗಲಿದೆ. ಇಲ್ಲಿ ಸಬಲೆಂಕಾ ಜಯ ಸಾಧಿಸಿದ್ದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.