ಉಡುಪಿಯಲ್ಲಿ ಇಂದು ಶ್ರೀಕೃಷ್ಣಾಷ್ಟಮಿ ಸಂಭ್ರಮ

ಡೋಲು ಉತ್ಸವ ಸಹಿತ ದಿನಪೂರ್ತಿ ವಿಶೇಷ ಕಾರ್ಯಕ್ರಮ ; ನಾಳೆ ಶ್ರೀಕೃಷ್ಣ ಲೀಲೋತ್ಸವ

Team Udayavani, Aug 26, 2024, 1:16 AM IST

ಉಡುಪಿಯಲ್ಲಿ ಇಂದು ಶ್ರೀಕೃಷ್ಣಾಷ್ಟಮಿ ಸಂಭ್ರಮ

ಉಡುಪಿ: ಕೃಷ್ಣನಗರಿಯಲ್ಲಿ ಈ ಬಾರಿ ಮಾಸೋತ್ಸವ ಆಚರಣೆ ಮೂಲಕ ಶ್ರೀ ಕೃಷ್ಣಾಷ್ಟಮಿಗೆ ವಿಶೇಷ ಮೆರಗು ನೀಡಲಾಗಿತ್ತು. ಆ.1ರಿಂದಲೇ ಇದಕ್ಕೆ ಚಾಲನೆ ದೊರೆತಿತ್ತು. ಈಗ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದ್ದು, ಶ್ರೀಕೃಷ್ಣ ಮಠದಲ್ಲಿ ಆ.26ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಆ.27ರಂದು ಶ್ರೀಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ಆಚರಣೆ ಜರಗಲಿದೆ.

ಶ್ರೀಕೃಷ್ಣಮಠಕ್ಕೆ ಹೂವಿನ ಅಲಂಕಾರ, ದೇವರಿಗೆ ವಿಶೇಷ ಪೂಜೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ದಿನಪೂರ್ತಿ ನಡೆಯಲಿವೆ. ಶ್ರೀಕೃಷ್ಣ ಮಠದಲ್ಲಿ ಸೋಮವಾರ ಬೆಳಗ್ಗೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದ ಬಳಿಕ ರಾತ್ರಿ ಪೂಜೆ ನಿವೇದನೆಗೆ ಉಂಡೆ ಕಟ್ಟುವುದಕ್ಕೆ ಮುಹೂರ್ತ ಮಾಡಲಿದ್ದಾರೆ. ಶ್ರೀಗಳು ಸಹಿತ ಭಕ್ತರು, ಶಿಷ್ಯ ವರ್ಗ ಏಕಾದಶಿಯಂತೆ ನಿರ್ಜಲ ಉಪವಾಸವಿದ್ದು ಕೃಷ್ಣಾಷ್ಟಮಿ ವ್ರತ ಆಚರಿಸುವರು. ಆದ್ದರಿಂದ ರಾತ್ರಿಯೂ ಅರ್ಚನೆ, ಮಹಾಪೂಜೆಯನ್ನು ನಡೆಸುವ ಶ್ರೀಗಳು ಬೆಳಗ್ಗೆ ಮುಹೂರ್ತ ಮಾಡಿದ ಲಡ್ಡುಗಳನ್ನು ಶ್ರೀಕೃಷ್ಣನಿಗೆ ನಿವೇದಿಸುವರು.

ಶ್ರೀ ಕೃಷ್ಣ ದೇವರ ದರ್ಶನಕ್ಕೆ ಎಂದಿನಂತೆ ವ್ಯವಸ್ಥೆ ಇರಲಿದೆ. ವಸಂತ ಮಂಟಪದಲ್ಲಿ ಡೋಲು ಉತ್ಸವ ನಡೆಯಲಿದೆ. ಸಂಕಲ್ಪ ಸಹಿತ ಶ್ರೀ ಕೃಷ್ಣನ ತೊಟ್ಟಿಲು ತೂಗಲು ಅವಕಾಶ ಮಾಡಲಾಗಿದೆ.

ದಿನವಿಡೀ ಕಾರ್ಯಕ್ರಮ
ಜನ್ಮಾಷ್ಟಮಿ ಪ್ರಯುಕ್ತ ದಿನಪೂರ್ತಿ ಮುದ್ದುಕೃಷ್ಣ ವೇಷ ಸ್ಪರ್ಧೆ ರಾಜಾಂಗಣ, ಗೀತಾಮಂದಿರ ಹಾಗೂ ಪುತ್ತಿಗೆ ಮಠದಲ್ಲಿ ನಡೆಯಲಿದೆ. ಭಜನೆ, ನೃತ್ಯ, 108 ಕಲಾವಿದರಿಂದ ಕೊಳಲು ವಾದನ, ಯಕ್ಷಗಾನ ಹೀಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀಪಾದರು ಸಂದೇಶ ನೀಡಲಿದ್ದಾರೆ.

ನಾಳೆ ವಿಟ್ಲಪಿಂಡಿ
ಆ. 27ರಂದು ರಥಬೀದಿಯಲ್ಲಿ ಸಂಭ್ರಮದ ಶ್ರೀಕೃಷ್ಣ ಲೀಲೋತ್ಸವ ನಡೆಯಲಿದೆ. ದ್ವಾದಶಿಯಂತೆ ಮಂಗಳವಾರ ಮುಂಜಾನೆ ಎಲ್ಲ ವಿಧಗಳ ಪೂಜೆಗಳನ್ನು ಶ್ರೀಪಾದರು ನೆರವೇರಿಸುವರು. ಬೆಳಗ್ಗೆ 11ರಿಂದ ಅನ್ನ ಸಂತರ್ಪಣೆ ಆರಂಭಗೊಳ್ಳಲಿದ್ದು, ರಾಜಾಂಗಣದ ಉಪ್ಪರಿಗೆ, ಭೋಜನ ಶಾಲೆ, ಅನ್ನಬ್ರಹ್ಮದಲ್ಲಿ ಸಾವಿರಾರು ಭಕ್ತರಿಗೆ ಕೃಷ್ಣ ಪ್ರಸಾದ ವಿತರಣೆಗೆ ತಯಾರಿ ನಡೆದಿದೆ.

ಮಧ್ಯಾಹ್ನ 3ಕ್ಕೆ ರಥಬೀದಿಯಲ್ಲಿ ಸ್ವರ್ಣರಥದಲ್ಲಿ ಕೃಷ್ಣನ ಮೃಣ್ಮಯ ಮೂರ್ತಿ ಮತ್ತು ಅನಂತೇಶ್ವರ, ಚಂದ್ರಮೌಳೀಶ್ವರ ದೇವಸ್ಥಾನದ ಉತ್ಸವ ಮೂರ್ತಿಗಳನ್ನು ನವರತ್ನ ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ನಡೆಸಲಾಗುತ್ತದೆ. ಈ ಸಂದರ್ಭ ಗುರ್ಜಿಗಳಿಗೆ ಹಾಕಿರುವ ಮೊಸರು ಕುಡಿಕೆಯನ್ನು ಕೃಷ್ಣಮಠದ ಗೋವಳರು ಒಡೆಯುತ್ತಾರೆ. ಪರ್ಯಾಯ ಶ್ರೀಪಾದರು ಚಕ್ಕುಲಿ, ಉಂಡೆ ಪ್ರಸಾದವನ್ನು ಮೆರವಣಿಗೆ ವೇಳೆ ಭಕ್ತರಿಗೆ ವಿತರಿಸುತ್ತಾರೆ. ಅನಂತರ ಮೃಣ್ಮಯ ಮೂರ್ತಿಯನ್ನು ಸಾಂಪ್ರದಾಯಿಕವಾಗಿ ಮಧ್ವ ಸರೋವರದಲ್ಲಿ ಜಲಸ್ತಂಭನ ಮಾಡಲಾಗುತ್ತದೆ. ಹುಲಿವೇಷ ಸಹಿತ ವಿವಿಧ ವೇಷಧಾರಿಗಳ ಕುಣಿತ ವಿಶೇಷವಾಗಿರಲಿದೆ.

ಇಂದು ಮಧ್ಯರಾತ್ರಿ
12.07ಕ್ಕೆ ಕೃಷ್ಣಾರ್ಘ್ಯ ಪ್ರದಾನ
ಶ್ರೀಕೃಷ್ಣಮಠದಲ್ಲಿ ಸೋಮವಾರ ರಾತ್ರಿ ಚಂದ್ರೋದಯದ ವೇಳೆ 12.07ಕ್ಕೆ ಕೃಷ್ಣಾರ್ಘ್ಯ ಪ್ರದಾನ ನೆರವೇರಲಿದೆ. ಶ್ರೀಪಾದರು ಅರ್ಘ್ಯ ಪ್ರದಾನ ಮಾಡಿದ ಬಳಿಕ ಭಕ್ತರಿಗೆ ಅವಕಾಶ ಮಾಡಿಕೊಡಲಾಗುತ್ತದೆ.

ಶ್ರೀಕೃಷ್ಣನ ಮೃಣ್ಮಯ ಮೂರ್ತಿ
ಉಡುಪಿ: ಶ್ರೀಕೃಷ್ಣಮಠದ ವಿಟ್ಲಪಿಂಡಿ ಉತ್ಸವದಲ್ಲಿ ಪೂಜೆಗೊಳ್ಳುವ ಶ್ರೀಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿ ಸಿದ್ಧಗೊಂಡಿದೆ. ಸುಮಾರು 9 ಇಂಚು ಎತ್ತರದ ವಿಗ್ರಹವನ್ನು ಕಲಾವಿದ ಸೋಮನಾಥ ಅವರು ಒಂದು ವಾರದಲ್ಲಿ ನಿರ್ಮಿಸಿದ್ದಾರೆ.

ಶ್ರೀಕೃಷ್ಣ ನೀಲಶ್ಯಾಮವರ್ಣದವನಾದ ಕಾರಣ ಕಪ್ಪು ಬಣ್ಣವನ್ನು ವಿಗ್ರಹಕ್ಕೆ ಕೊಡಲಾಗಿದೆ. ಸೋಮನಾಥರು ಸುಮಾರು 25 ವರ್ಷಗಳಿಂದ ವಿಗ್ರಹವನ್ನು ರಚಿಸುತ್ತಿದ್ದಾರೆ. ಇವರು ಗಣಪತಿ ತಯಾರಿಸುವ ಕಲಾವಿದರೂ ಆಗಿದ್ದಾರೆ.

ದಕ್ಷಿಣ ಕನ್ನಡದಲ್ಲೂ ಕೃಷ್ಣಾಷ್ಟಮಿ ಸಡಗರ
ಮಂಗಳೂರು: ನಾಡಿನೆಲ್ಲೆಡೆ ಸೋಮವಾರ (ಆ.26) ಶ್ರೀಕೃಷ್ಣ ಜನ್ಮಾಷ್ಟಮಿ ಭಕ್ತಿ ಸಂಭ್ರಮದಿಂದ ನಡೆಯಲಿದೆ. ಕೃಷ್ಣ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಲಿದ್ದು, ಇತರ ಆಲಯದಲ್ಲಿಯೂ ಭಕ್ತ ಸಂಭ್ರಮದ ಆಚರಣೆ ನಡೆಯಲಿದೆ. ಮನೆಗಳಲ್ಲಿಯೂ ಈ ನಿಟ್ಟಿನಲ್ಲಿ ತಯಾರಿ ನಡೆಸಲಾಗಿದೆ.

ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ರಾಷ್ಟ್ರೀಯ ಮಕ್ಕಳ ಉತ್ಸವ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಜತೆಗೆ ವಿವಿಧ ಕಡೆಗಳಲ್ಲಿ ಕೃಷ್ಣವೇಷ ಸ್ಪರ್ಧೆ, ಮೊಸರುಕುಡಿಕೆ, ದೇವಸ್ಥಾನಗಳಲ್ಲಿ ರಾತ್ರಿ ಕೃಷ್ಣನಿಗೆ ಅರ್ಘ್ಯ ಪ್ರದಾನ ಇತ್ಯಾದಿ ನಡೆಯಲಿದೆ.

ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆ.26ರಂದು ಬೆಳಗ್ಗೆ 10.30ಕ್ಕೆ ನಗರದ ಹಂಪನಕಟ್ಟೆ ನಂದಿನಿ ಸಭಾಭವನ ಸರಕಾರಿ ನೌಕರರ ಸಂಘದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಜಯಂತಿ ಹಮ್ಮಿಕೊಳ್ಳಲಾಗಿದೆ.

ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌, ದ.ಕ. ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮ ಉದ್ಘಾಟಿಸುವರು.

ಶಾಸಕ ಡಿ. ವೇದವ್ಯಾಸ ಕಾಮತ್‌ ಅಧ್ಯಕ್ಷತೆ ವಹಿಸಲಿರುವರು. ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.