Karnataka Government; ಆ್ಯಂಟಿಬಯಾಟಿಕ್‌ ಅತಿಬಳಕೆ ತಡೆಗೆ ಆಪರೇಶನ್‌ ಅಮೃತ್‌!

ಕೇರಳ ಮಾದರಿಯ ಯೋಜನೆ ಜಾರಿಗೆ ರಾಜ್ಯ ಸರಕಾರ ಚಿಂತನೆ

Team Udayavani, Aug 26, 2024, 7:30 AM IST

Karnataka Government; ಆ್ಯಂಟಿಬಯಾಟಿಕ್‌ ಅತಿಬಳಕೆ ತಡೆಗೆ ಆಪರೇಶನ್‌ ಅಮೃತ್‌!

ಬೆಂಗಳೂರು: ರಾಜ್ಯದಲ್ಲಿ ಆ್ಯಂಟಿ ಬಯಾಟಿಕ್‌ ಔಷಧಗಳ ಅತೀ ಹಾಗೂ ದುರ್ಬಳಕೆಯನ್ನು ತಡೆಯಲು ಕೇರಳ ಮಾದರಿಯ “ಆಪರೇಶನ್‌ ಅಮೃತ್‌’ ಯೋಜನೆಯನ್ನು ಜಾರಿಗೊಳಿಸಲು ಕರ್ನಾಟಕ ಸರಕಾರ ಚಿಂತನೆ ನಡೆಸುತ್ತಿದೆ.

ರಾಜ್ಯದಲ್ಲಿ ವೈದ್ಯರ ಸಲಹೆ ಇಲ್ಲದೆ ಆ್ಯಂಟಿ ಬಯಾಟಿಕ್‌ಗಳು ಹಾಗೂ ಕಳಪೆ ಗುಣಮಟ್ಟದ ಔಷಧಗಳು ಮಾರಾಟವಾಗುತ್ತಿವೆ. ಇದು ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಪ್ರಾಣಹಾನಿ ಸಂಭವಿಸುತ್ತಿದೆ. ಈಗ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆಯು ಆ್ಯಂಟಿಬಯಾಟಿಕ್‌ ಹಾಗೂ ಕಳಪೆ ಗುಣಮಟ್ಟದ ಔಷಧಗಳ ಮಾರಾಟ ವನ್ನು ನಿಯಂತ್ರಿಸಲು ಕೇರಳ ಮಾದರಿ ಯೋಜನೆ ಆಳವಡಿಸಿಕೊಳ್ಳಲು ಅಗತ್ಯವಿರುವ ವರದಿಯನ್ನು ನೀಡುವಂತೆ ರಾಜ್ಯ ಔಷಧ ನಿಯಂತ್ರಣ ವಿಭಾಗಕ್ಕೆ ಆದೇಶ ನೀಡಿದೆ. ಈ ವರದಿಯು ಮುಂದಿನ 15 ದಿನಗಳಲ್ಲಿ ಇಲಾಖೆಯ ಕೈಸೇರಲಿದೆ.

ಆ್ಯಂಟಿಬಯಾಟಿಕ್‌ ದುಷ್ಪರಿಣಾಮ
ಸಣ್ಣಪುಟ್ಟ ಕಾಯಿಲೆಗಳಿಗೂ ನಿರಂತರವಾಗಿ ಆ್ಯಂಟಿ ಬಯಾಟಿಕ್‌ ಸೇವನೆ ಮಾಡುವುದರಿಂದ ರೋಗಕಾರಕ ಸೂಕ್ಷ್ಮಜೀವಿಗಳು ಔಷಧ ಪ್ರತಿರೋಧ ಗುಣ ಬೆಳೆಸಿಕೊಳ್ಳುತ್ತವೆ. ಇದರಿಂದ ತುರ್ತು ಸಂದರ್ಭಗಳಲ್ಲಿ ಆ್ಯಂಟಿಬಯಾಟಿಕ್‌ ಔಷಧಗಳನ್ನು ನೀಡಿದರೂ ಕೆಲಸ ಮಾಡದೆ ಪ್ರಾಣ ಹಾನಿ ಸಂಭವಿಸುತ್ತದೆ.

ಔಷಧ ನಿಯಂತ್ರಕರ ಕೊರತೆ!
ರಾಜ್ಯದಲ್ಲಿ 116 ಔಷಧ ನಿಯಂತ್ರಕ ಹುದ್ದೆಗಳಿವೆ. ಅದರಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು, ಹುಬ್ಬಳ್ಳಿಯಲ್ಲಿ ಒಟ್ಟು 6 ಹುದ್ದೆಗಳು ಮಾತ್ರ ಭರ್ತಿಯಾಗಿದೆ. ಸುಮಾರು 110 ಹುದ್ದೆಗಳು ಖಾಲಿಯಿವೆ. ಪ್ರಸ್ತುತ ಸಹಾಯಕ ಔಷಧ ನಿಯಂತ್ರಕರು ಔಷಧ ಮಳಿಗೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಈ ದಾಳಿಗಳು ನಿರಂತರವಾಗಿ ನಡೆಯದ ಹಿನ್ನೆಲೆಯಲ್ಲಿ ಔಷಧ ಅಂಗಡಿಗಳಲ್ಲಿ ವ್ಯಾಪಕವಾಗಿ ವೈದ್ಯರ ಚೀಟಿ ಇಲ್ಲದೆ ಆ್ಯಂಟಿಬಯಾಟಿಕ್‌ ಔಷಧಗಳು ಮಾರಾಟವಾಗುತ್ತಿವೆ.

ಏನಿದು ಆಪರೇಶನ್‌ ಅಮೃತ್‌?
ಕೇರಳದಲ್ಲಿ ಅತಿಯಾದ ಆ್ಯಂಟಿಬಯಾಟಿಕ್‌ ಔಷಧಗಳ ಬಳಕೆಗೆ ಕಡಿವಾಣ ಹಾಕಲು “ಆಪರೇಶನ್‌ ಅಮೃತ್‌’ ಜಾರಿಗೊಳಿಸಲಾಗಿದೆ. ವೈದ್ಯರ ಸಲಹೆ ಇಲ್ಲದೆ ನೇರ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಔಷಧ ಅಂಗಡಿಗಳಿಗಾಗಿ ನಿಯಾಮಾವಳಿಯನ್ನು ರೂಪಿಸಿದ್ದು, ಅದರ ಅನ್ವಯ ಮಳಿಗೆಗಳು ಎಷ್ಟು ಆ್ಯಂಟಿಬಯಾಟಿಕ್‌ ಖರೀದಿಸಲಾಗಿದೆ, ಎಷ್ಟು ಮಾರಾಟವಾಗಿದೆ ಎನ್ನುವ ನಿಖರ ಮಾಹಿತಿಯನ್ನು ಒದಗಿಸ ಬೇಕಾಗುತ್ತದೆ. ಇಲ್ಲಿ ಸಾರ್ವಜನಿಕ ಸಹಭಾಗಿತ್ವಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಸಾರ್ವಜನಿಕರು ಕಾನೂನು ಉಲ್ಲಂ ಸುವ ಔಷಧ ಅಂಗಡಿಗಳ ವಿರುದ್ಧ ದೂರು ನೀಡಬಹುದಾಗಿದೆ. ಅದಕ್ಕಾಗಿ ಉಚಿತ ಸಹಾಯವಾಣಿ ಸ್ಥಾಪಿಸಲಾಗಿದೆ. ಜತೆಗೆ ನಿರಂತರವಾಗಿ ಔಷಧ ಮಳಿಗೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಪರಿಶೀಲನೆ ವೇಳೆ ವ್ಯತ್ಯಾಸ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮವನ್ನು ಕೇರಳ ಔಷಧ ನಿಯಂತ್ರಕ ಇಲಾಖೆ ಕೈಗೊಳ್ಳುತ್ತಿದೆ.

ರಾಜ್ಯದಲ್ಲಿ ವೈದ್ಯರ ಸಲಹೆ ಚೀಟಿ ಇಲ್ಲದೆ ಆ್ಯಂಟಿ ಬಯಾಟಿಕ್‌ ಹಾಗೂ ಕಳಪೆ ಗುಣಮಟ್ಟದ ಔಷಧ ಮಾರಾಟವಾಗುತ್ತಿದೆ. ಇದು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆ್ಯಂಟಿಬಯಾಟಿಕ್‌ ಬಳಕೆ ನಿಯಂತ್ರಣಕ್ಕೆ ಸಂಬಂಧಿಸಿ ಕೇರಳ ಮಾದರಿಯ ನಿಯಮವನ್ನು ಕರ್ನಾಟಕದಲ್ಲಿ ಅಳವಡಿಸಲಾಗುತ್ತದೆ.
-ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವರು

-ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.