UPS: ನಿವೃತ್ತರಿಗೆ ಆರ್ಥಿಕ ಭದ್ರತೆ ಖಾತರಿಪಡಿಸಿದ ಯುಪಿಎಸ್‌


Team Udayavani, Aug 26, 2024, 6:00 AM IST

pension

ಕೇಂದ್ರ ಸಚಿವ ಸಂಪುಟ ಏಕೀಕೃತ ಪಿಂಚಣಿ ವ್ಯವಸ್ಥೆ(ಯುಪಿಎಸ್‌)ಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದೆ. ಈ ಮೂಲಕ ವರ್ಷಗಳ ಹಿಂದೆ ಸರಕಾರ ಜಾರಿಗೊಳಿಸಿದ್ದ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ(ಎನ್‌ಪಿಎಸ್‌)ಯ ವಿರುದ್ಧದ ನೌಕರರ ಆಕ್ರೋಶವನ್ನು ಶಮನಗೊಳಿಸಲು ಮುಂದಾಗಿದೆ.

ಈ ಹಿಂದಿನ ಹಳೆಯ ಪಿಂಚಣಿ ವ್ಯವಸ್ಥೆ(ಒಪಿಎಸ್‌)ಯ ಬದಲಾಗಿ ಕೇಂದ್ರ ಸರಕಾರ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ಮಾರುಕಟ್ಟೆ ಅಂದರೆ ಷೇರುಪೇಟೆಯಲ್ಲಿನ ಏರಿಳಿತವನ್ನು ಆಧರಿಸಿ ನಿವೃತ್ತ ನೌಕರರಿಗೆ ಪಿಂಚಣಿ ಮೊತ್ತವನ್ನು ನಿಗದಿಪಡಿಸಲಾಗುತ್ತಿತ್ತು. ಈ ಯೋಜನೆಯಲ್ಲಿ ಖಚಿತ ಪಿಂಚಣಿ ಮೊತ್ತದ ಖಾತರಿ ಇರಲಿಲ್ಲ ಮಾತ್ರವಲ್ಲದೆ ವಿವಿಧ ಸೌಲಭ್ಯಗಳಲ್ಲೂ ಸಾಕಷ್ಟು ವ್ಯತ್ಯಾಸಗಳಿದ್ದವು.

ಈ ಹಿನ್ನೆಲೆಯಲ್ಲಿ ನೌಕರ ವರ್ಗದಿಂದ ಎನ್‌ಪಿಎಸ್‌ಗೆ ದೇಶವ್ಯಾಪಿ ವಿರೋಧ ವ್ಯಕ್ತವಾಗಿತ್ತು. ಈ ವಿಷಯ ರಾಜಕೀಯವಾಗಿಯೂ ಭಾರೀ ಚರ್ಚೆಗೆ ಗ್ರಾಸವಾಗಿತ್ತಲ್ಲದೆ ವಿವಿಧ ರಾಜ್ಯಗಳ ವಿಧಾನಸಭೆ ಮತ್ತು ಪ್ರಸಕ್ತ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲೂ ಪ್ರಮುಖ ಚುನಾವಣ ವಿಷಯವಾಗಿ ಮಾರ್ಪಟ್ಟಿತ್ತು. ಬಹುತೇಕ ವಿಪಕ್ಷಗಳು ಎನ್‌ಪಿಎಸ್‌ ಅನ್ನು ರದ್ದುಗೊಳಿಸಿ ಒಪಿಎಸ್‌ ಜಾರಿಗೊಳಿಸುವ ಭರವಸೆಯನ್ನು ನೀಡುತ್ತಲೇ ಬಂದಿದ್ದವು.

ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳು ಕೂಡ ಎನ್‌ಪಿಎಸ್‌ನಲ್ಲಿ ಸೂಕ್ತ ಮಾರ್ಪಾಡುಗಳನ್ನು ಮಾಡಿ ಒಪಿಎಸ್‌ನಲ್ಲಿ ನಿವೃತ್ತ ನೌಕರರಿಗೆ ಸಿಗುತ್ತಿದ್ದ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನು ನೀಡಿದ್ದವು. ಹೀಗಾಗಿ ಬಿಜೆಪಿ ಕೂಡ ಎನ್‌ಪಿಎಸ್‌ನ ಗೊಂದಲಗಳನ್ನು ಬಗೆಹರಿಸಲು ಕೇಂದ್ರ ಹಣಕಾಸು ಕಾರ್ಯದರ್ಶಿ ನೇತೃತ್ವದಲ್ಲಿ ಪರಿಶೀಲನೆಗಾಗಿ ಸಮಿತಿಯೊಂದನ್ನು ರಚಿಸಿ, ಅಗತ್ಯ ಬದಲಾವಣೆಗಳನ್ನು ತರುವಂತೆ ಸೂಚಿಸಿತ್ತು. ಈಗ ಕೇಂದ್ರ ಸರಕಾರ ಸಮಿತಿಯ ಶಿಫಾರಸುಗಳನ್ನು ಆಧರಿಸಿ ರೂಪಿಸಲಾದ ಯುಪಿಎಸ್‌ ಜಾರಿಗೊಳಿಸಲು ನಿರ್ಧರಿಸಿದೆ.

ಹೊಸ ಪಿಂಚಣಿ ಯೋಜನೆಯಲ್ಲಿ ನಿವೃತ್ತ ನೌಕರರಿಗೆ ಖಚಿತ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಕನಿಷ್ಠ ಪಿಂಚಣಿ ಲಭಿಸುವುದನ್ನು ಖಾತರಿ ಪಡಿಸಲಾಗಿದೆ. ಮುಂದಿನ ಹಣಕಾಸು ವರ್ಷದ ಆರಂಭದಿಂದ ಈ ಯುಪಿಎಸ್‌ ಜಾರಿಯಾಗಲಿದೆ ಎಂದು ಸರಕಾರ ಘೋಷಿಸಿದೆ. ಇದೇ ವೇಳೆ ಯುಪಿಎಸ್‌ ಮತ್ತು ಎನ್‌ಪಿಎಸ್‌ ನಡುವೆ ಯಾವುದಾದರೂ ಒಂದು ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಸರಕಾರ ತನ್ನ ನೌಕರರಿಗೆ ನೀಡಿದೆ. ಹೀಗಾಗಿ ಎನ್‌ಪಿಎಸ್‌ ಹಾಗೆಯೇ ಮುಂದುವರಿಯಲಿದೆ.

ಈಗಾಗಲೇ ಎನ್‌ಪಿಎಸ್‌ ಆಯ್ಕೆ ಮಾಡಿಕೊಂಡಿರುವ ನೌಕರರಿಗೆ ಹೊಸ ವ್ಯವಸ್ಥೆಯ ಜಾರಿಯಲ್ಲಿ
ಇದೇ ವೇಳೆ ಯುಪಿಎಸ್‌ ಜಾರಿಗೆ ತರಲು ರಾಜ್ಯಗಳಿಗೂ ಅವಕಾಶ ಮಾಡಿಕೊಟ್ಟಿದ್ದು, ಹೆಚ್ಚುವರಿ ಹೊರೆಯನ್ನು ಆಯಾ ರಾಜ್ಯ ಸರಕಾರಗಳೇ ಭರಿಸಬೇಕಿದೆ. ಎನ್‌ಪಿಎಸ್‌ಗೆ ಹೋಲಿಸಿದಲ್ಲಿ ಯುಪಿಎಸ್‌ ಹೆಚ್ಚು ನೌಕರಸ್ನೇಹಿಯಾಗಿದೆ. ಆದರೆ ಒಪಿಎಸ್‌ ಮಾದರಿಯ ಸೌಲಭ್ಯಗಳು ಲಭ್ಯವಾಗುವುದಿಲ್ಲವಾದರೂ ನಿಗದಿತ ಮತ್ತು ಕನಿಷ್ಠ ಮೊತ್ತವನ್ನು ನಿವೃತ್ತ ನೌಕರರು ಪಿಂಚಣಿಯಾಗಿ ಪಡೆಯುವುದನ್ನು ಖಾತರಿಪಡಿಸಿದಂತಾಗಿದೆ. ಕೌಟುಂಬಿಕ ಪಿಂಚಣಿಯ ಸೌಲಭ್ಯ ಯುಪಿಎಸ್‌ನಲ್ಲಿನ ಮತ್ತೂಂದು ಗಮನಾರ್ಹ ಅಂಶ.

ಯುಪಿಎಸ್‌ ಜಾರಿ ಘೋಷಣೆಯಾಗುತ್ತಲೇ ಸರಕಾರಿ ನೌಕರರ ಸಂಘಟನೆಗಳಿಂದ ವಿಭಿನ್ನ ಪ್ರತಿಕ್ರಿಯೆ ವ್ಯಕ್ತವಾಗಿವೆ. ಕೆಲವು ಸಂಘಟನೆಗಳು ಹಳೆಯ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಪಟ್ಟುಹಿಡಿದಿವೆ. ಯುಪಿಎಸ್‌ ಜಾರಿಗೆ ತರುವುದರಿಂದ ನೌಕರರಿಗೆ ವಿಶೇಷ ಸೌಲಭ್ಯಗಳೇನೂ ಲಭಿಸದು ಎಂಬುದು ಈ ಸಂಘಟನೆಗಳ ವಾದ. ಆದರೆ ಎನ್‌ಪಿಎಸ್‌ ಬಗೆಗಿನ ಕೇಂದ್ರ ಸರಕಾರಿ ನೌಕರರ ಅಸಮಾಧಾನವನ್ನು ತಣಿಸಲು ಯುಪಿಎಸ್‌ ನೆರವಾದೀತು ಎಂಬುದು ಕೇಂದ್ರ ಸರಕಾರದ ನಿರೀಕ್ಷೆ. ರಾಜ್ಯ ಸರಕಾರಗಳು ಕೂಡ ಒಪಿಎಸ್‌ನ ಮರುಜಾರಿಯ ಬದಲಾಗಿ ಯುಪಿಎಸ್‌ ಜಾರಿಗೆ ಮುಂದಾದಲ್ಲಿ ಬೊಕ್ಕಸದ ಮೇಲಿನ ಹೊರೆ ಬಹಳಷ್ಟು ಕಡಿಮೆಯಾಗಲಿದೆ.

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.