Tragic: ಮಗನ ಆತ್ಮಹತ್ಯೆ ವಿಷಯ ತಿಳಿದು 3 ಗಂಟೆಯಲ್ಲೇ ತಾಯಿ ಕೂಡ ಸಾವು


Team Udayavani, Aug 26, 2024, 11:59 AM IST

Tragic: ಮಗನ ಆತ್ಮಹತ್ಯೆ ವಿಷಯ ತಿಳಿದು 3 ಗಂಟೆಯಲ್ಲೇ ತಾಯಿ ಕೂಡ ಸಾವು

ಬೆಂಗಳೂರು: ತಾಯಿಯ ಅನಾರೋಗ್ಯ ಹಾಗೂ ಸಾಲಬಾಧೆಗೆ ಮಾನಸಿಕ ಖನ್ನತೆಗೊಳಗಾಗಿದ್ದ ಕ್ಯಾಬ್‌ ಚಾಲಕನೊಬ್ಬ ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ.

ಮತ್ತೂಂದೆಡೆ ಪುತ್ರನ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಆತನ ತಾಯಿ ಕೂಡ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭಾನು ವಾರ ನಡೆದಿದೆ.

ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಅರುಣ್‌ ಕುಮಾರ್‌ (37) ಆತ್ಮಹತ್ಯೆ ಮಾಡಿಕೊಂಡವ. ಈತನ ತಾಯಿ ಸರಸ್ವತಿ(73) ಮೃತರು. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಮೃತ ಸ್ವರಸ್ವತಿಗೆ ಮೂವರು ಗಂಡ ಮಕ್ಕಳು. ಈ ಪೈಕಿ ಹಿರಿಯ ಮತ್ತು ಕೊನೆಯ ಮಗ ಪ್ರತ್ಯೇಕವಾಗಿ ವಾಸವಾಗಿದ್ದಾರೆ. 2ನೇ ಪುತ್ರ ಅರುಣ್‌ ಕುಮಾರ್‌ ಮತ್ತು ತಾಯಿ ಸರಸ್ವತಿ ಜತೆ ಕಾವೇರಿಪುರದಲ್ಲಿ ವಾಸವಾಗಿದ್ದರು. ಅರುಣ್‌ ಕುಮಾರ್‌ ಅವಿವಾಹಿತನಾಗಿದ್ದು, ಕ್ಯಾಬ್‌ ಚಾಲನಾಗಿದ್ದ. ತಾಯಿಯ ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟದಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಈ ಮಧ್ಯೆ ಒಂದು ವರ್ಷದ ಹಿಂದೆ ಸ್ನಾನದ ಕೋಣೆಯಲ್ಲಿ ತಾಯಿ ಸರಸ್ವತಿ ಕಾಲು ಜಾರಿ ಬಿದ್ದು ಬೆನ್ನು ಮೂಳೆ ಮುರಿದುಕೊಂಡಿದ್ದು, ಅನಾರೋಗ್ಯಕ್ಕೀಡಾಗಿ ಹಾಸಿಗೆ ಹಿಡಿದಿದ್ದರು.

ಡೆತ್‌ನೋಟ್‌ ಪತ್ತೆ: ಸಾಲಬಾಧೆ ಹಾಗೂ ತಾಯಿಯ ಅನಾರೋಗ್ಯದಿಂದಾಗಿ ಅರುಣ್‌ ಕುಮಾರ್‌ ಮಾನಸಿಕ ಖನ್ನತೆಗೆ ಒಳಗಾಗಿದ್ದು, ಭಾನುವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಾಹ್ನ 12.30ಕ್ಕೆ ಆತನ ಸಹೋದರ ಮನೆಗೆ ಬಂದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತ್ಮಹತ್ಯೆಗೂ ಮೊದಲು ಅರುಣ್‌ ಕುಮಾರ್‌ ಬರೆದಿದ್ದ ಡೆತ್‌ನೋಟ್‌ ಸಿಕ್ಕಿದ್ದು, ಅದರಲ್ಲಿ “ತನ್ನ ಸಾಲ, ತಾಯಿಯ ಅನಾರೋಗ್ಯದಿಂದ ಮಾನಸಿಕ ಖನ್ನತೆಗೊಳಗಾಗಿದ್ದೇನೆ’ ಎಂದು ಉಲ್ಲೇಖೀಸಿರುವುದು ಪತ್ತೆಯಾಗಿದೆ.

3 ತಾಸಿನ ಬಳಿಕ ತಾಯಿ ಸಾವು: ಮತ್ತೂಂದೆಡೆ ಪುತ್ರ ಅರುಣ್‌ ಕುಮಾರ್‌ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಅನಾರೋಗ್ಯಕ್ಕೊಳಗಾಗಿ ಹಾಸಿಗೆ ಹಿಡಿದಿದ್ದ ಆತನ ತಾಯಿ ಸರಸ್ವತಿ ಘಟನೆ ಬೆಳಕಿಗೆ ಬಂದ 3 ತಾಸಿನ ಬಳಿಕ ಮಲಗಿದ್ದ ಹಾಸಿಗೆಯಲ್ಲೇ ಮೃತಪಟ್ಟಿದ್ದಾರೆ. ಮಗನ ಆತ್ಮಹತ್ಯೆ ವಿಚಾರ ತಿಳಿದು ಅದರ ಆಘಾತದಿಂದ ಮೃತಪಟ್ಟಿರುವ ಸಾಧ್ಯತೆಯಿದೆ.

 

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.