Kadaba: ಸಿದ್ಧವಾಯಿತು ಪಾಲೋಳಿ ಸರ್ವಋತು ಸೇತುವೆ

19.68 ಕೋ.ರೂ. ವೆಚ್ಚ ; ಸಂಚಾರಕ್ಕೆ ತೆರೆಯಲು ಆಗ್ರಹ ; ನನಸಾಗುತ್ತಿದೆ ಬಹುಕಾಲದ ಕನಸು

Team Udayavani, Aug 26, 2024, 1:08 PM IST

Kadaba: ಸಿದ್ಧವಾಯಿತು ಪಾಲೋಳಿ ಸರ್ವಋತು ಸೇತುವೆ

ಕಡಬ: ಕುಮಾರಾಧಾರಾ ನದಿಗೆ ಪಾಲೋಳಿಯಲ್ಲಿ ನಿರ್ಮಾಣ ಗೊಂಡಿರುವ ಸರ್ವಋತು ಸೇತುವೆಯ ಕಾಮಗಾರಿ ಪೂರ್ಣಗೊಂಡಿದ್ದು, ಜನರ ಬಹುಕಾಲದ ಕನಸು ನನಸಾಗಿದೆ.

ಕಡಬ ಹಾಗೂ ಎಡಮಂಗಲ ಗ್ರಾಮ ಗಳನ್ನು ಬೆಸೆಯುವ ಈ ಸೇತುವೆಯ ಕಾಮಗಾರಿ 2022 ನವೆಂಬರ್‌ನಲ್ಲಿ ಪ್ರಾರಂಭಗೊಂಡಿತ್ತು. ಕಳೆದ ವರ್ಷ ಮಳೆ ಗಾಲದ ಕಾರಣದಿಂದಾಗಿ ಕೆಲವು ತಿಂಗಳು ಕಾಮಗಾರಿ ನಿಲ್ಲಿಸಲಾಗಿತ್ತು. ಬಳಿಕ ಶೀಘ್ರ ವಾಗಿ ಕಾಮಗಾರಿ ನಡೆದು ಈಗ ಪೂರ್ಣಗೊಂಡಿದೆ. ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್‌ ಪ್ರಮೋದ್‌ಕುಮಾರ್‌ ಕೆ.ಕೆ. ಉಸ್ತುವಾರಿಯಲ್ಲಿ ಸೇತುವೆಗೆ ಬಣ್ಣ ಬಳಿಯುವುದು, ಸೋಲಾರ್‌ ದೀಪಗಳ ಅಳವಡಿಕೆ ಕಾರ್ಯವೂ ಪೂರ್ಣಗೊಂಡಿದೆ.

ಗ್ರಾಮಸ್ಥರಿಂದಲೇ ತಾತ್ಕಾಲಿಕೆ ಸೇತುವೆ
ದಾನಿಗಳ ಆರ್ಥಿಕ ನೆರವಿನಿಂದ ಎಡಮಂಗಲ ಹಾಗೂ ಪಿಜಕಳ ಪರಿಸರದ ಜನರ ಶ್ರಮದಾನದ ಫಲವಾಗಿ ಕಳೆದ ಕೆಲವು ವರ್ಷಗಳಿಂದ ಇಲ್ಲಿ ತಾತ್ಕಾಲಿಕ ನೆಲೆಯ ಸೇತುವೆ ನಿರ್ಮಾಣ ಮಾಡಿ ಬೇಸಗೆಯಲ್ಲಿ ವಾಹನ ಸಂಚರಿಸಲು ವ್ಯವಸ್ಥೆಮಾಡಿಕೊಂಡಿದ್ದರು. ಇಲ್ಲಿ ಬೇಸಗೆಯಲ್ಲಿ ಉಪಯೋಗಿಸಬಹುದಾದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡುವ ಕಲ್ಪನೆಯನ್ನು ಕಂಡವರು ಸ್ಥಳೀಯ ಕುಮಾರಧಾರಾ ಯುವಕ ಮಂಡಲದ ಯುವಕರು. ಅದರ ಫಲವಾಗಿ 10 ವರ್ಷಗಳ ಹಿಂದೆ ದಾನಿಗಳ ಆರ್ಥಿಕ ನೆರವಿನಿಂದ ಎಡಮಂಗಲ ಹಾಗೂ ಪಿಜಕಳ ಪರಿಸರದ ಜನರ ಶ್ರಮದಾನದ ಫಲವಾಗಿ ಸುಮಾರು 120 ಮೀ. ಉದ್ದದ 10 ಮೀ. ಆಗಲದ ಸೇತುವೆ ನಿರ್ಮಿಸಲಾಗಿತ್ತು. ಆದರೆ ಮಳೆಗಾಲದಲ್ಲಿ ಕೊಚ್ಚಿಹೋಗುವ ಕಚ್ಚಾ ಸೇತುವೆಯನ್ನು ಪ್ರತೀ ಬೇಸಗೆಯಲ್ಲಿ ಊರವರು ಪುನರ್ನಿರ್ಮಾಣ ಮಾಡುತ್ತಲೇ ಬಂದಿದ್ದರು.

ವಾಹನ ಸಂಚಾರಕ್ಕೆ ತೆರೆಯಲು ಆಗ್ರಹ
ನೂತನ ಸೇತುವೆಯ ಮೇಲೆ ಸಂಚರಿಸಲು ಜನರು ಕಾತರದಿಂದ ಕಾಯುತ್ತಿದ್ದಾರೆ. ಆದುದರಿಂದ ಸಂಬಂಧಪಟ್ಟವರು ಸೇತುವೆಯನ್ನು ಶೀಘ್ರ ಸಾರ್ವಜನಿಕರ ಬಳಕೆಗೆ ಬಿಟ್ಟುಕೊಡಬೇಕೆನ್ನುವುದು ನಮ್ಮೆಲ್ಲರ ಆಗ್ರಹವಾಗಿದೆ. .
-ಸಾಂತಪ್ಪ ಗೌಡ ಪಿಜಕಳ, ಪಾಲೋಳಿ ಶಾಶ್ವತ ಸೇತುವೆ ಹೋರಾಟ ಸಮಿತಿ ಮುಂದಾಳು.

175 ಮೀ. ಉದ್ದದ ಸೇತುವೆ
ಪರಿಸರದ ಜನರ ನಿರಂತರ ಹೋರಾಟದ ಫಲವಾಗಿ ಸರಕಾರವು ಲೋಕೋಪಯೋಗಿ ಇಲಾಖೆಯ ಮುಖಾಂತರ ಪಾಲೋಳಿ ಸೇತುವೆ ನಿರ್ಮಾಣಕ್ಕೆ 19.68 ಕೋಟಿ ರೂ.ಅನುದಾನ ಮಂಜೂರಾಗಿತ್ತು. 175 ಮೀ. ಉದ್ದದ ಈ ಸೇತುವೆ 12 ಮೀ. ಅಗಲದಲ್ಲಿ (ಒಂದು ಬದಿಯಲ್ಲಿ ಫೂಟ್‌ಪಾತ್‌ ಸೇರಿದಂತೆ) ನಿರ್ಮಾಣವಾಗಿದ್ದು, ಸೇತುವೆಯ ಎಡಮಂಗಲ ಭಾಗದಲ್ಲಿನ 675 ಮೀ. ಸಂಪರ್ಕದ ಕಚ್ಛಾ ರಸ್ತೆಯ ಸ್ವಲ್ಪ ಭಾಗವನ್ನು ಕಾಂಕ್ರೀಟ್‌ ಸಹಿತ ಅಭಿವೃದ್ಧಿಪಡಿಸಲಾಗಿದೆ. ಪಿಜಕಳ ಭಾಗದ ಸಂಪರ್ಕ ರಸ್ತೆ (100 ಮೀ.) ಯನ್ನು ಕಾಂಕ್ರೀಟ್‌ ಹಾಸಿ ಅಭಿವೃದ್ಧಿಪಡಿಸುವ ಕೆಲಸ ನಡೆಯಲಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.