Landlinks ರಸ್ತೆ ಗುಂಡಿ ಮುಚ್ಚಿದ ಸಮಾನ ಮನಸ್ಕ ತಂಡ; ನಮ್ಮ ಊರು ನಮ್ಮ ರಸ್ತೆ ಅಭಿಯಾನ


Team Udayavani, Aug 26, 2024, 3:00 PM IST

Landlinks ರಸ್ತೆ ಗುಂಡಿ ಮುಚ್ಚಿದ ಸಮಾನ ಮನಸ್ಕ ತಂಡ; ನಮ್ಮ ಊರು ನಮ್ಮ ರಸ್ತೆ ಅಭಿಯಾನ

ಮಹಾನಗರ: ನಗರ ಸುತ್ತಾಡಿದರೆ ಸಾಕು ಹಲವು ಕಡೆಗಳಲ್ಲಿ ಹೊಂಡ-ಗುಂಡಿ ಕಾಣುತ್ತದೆ. ಅದರಲ್ಲೂ ನಗರ ಒಳರಸ್ತೆಗಳಲ್ಲಂತೂ ಭಾರೀ ಗಾತ್ರದ ಗುಂಡಿ ಸಾಮಾನ್ಯವಾದಂತಿದೆ. ಕೆಲವೊಂದು ಕಡೆ ಸಂಬಂಧಪಟ್ಟ ಜನಪ್ರತಿನಿಧಿಗಳಿಂದಲೂ ಇದಕ್ಕೆ ಸ್ಪಂದನೆ ಸಿಗುವುದಿಲ್ಲ. ಇದೀಗ ನಗರದ ಲ್ಯಾಂಡ್‌ಲಿಕ್ಸ್‌ ಬಳಿ ಸ್ಥಳೀಯ ಸಮಾನ ಮನಸ್ಕರು ತಂಡದ ಸದಸ್ಯರು ‘ನಮ್ಮ ಊರು ನಮ್ಮ ರಸ್ತೆ’ ಎಂಬ ಅಭಿಯಾನಕ್ಕೆ ಮುಂದಾಗಿದ್ದಾರೆ. ಈ ಮೂಲಕ ತಂಡ ರಚಿಸಿ ತಮ್ಮ ವ್ಯಾಪ್ತಿಯ ರಸ್ತೆಗಳ ಗುಂಡಿ ಮುಚ್ಚುವ ಮಾನವೀಯ ಕೆಲಸ ಮಾಡಿದ್ದಾರೆ.

ಲ್ಯಾಂಡ್‌ ಲಿಂಕ್ಸ್‌ನ ಒಂದನೇ ಮುಖ್ಯರಸ್ತೆ, ಫ್ಯಾನ್ಸಿ ಅಂಗಡಿಯೊಂದರ ಬಳಿ ಹಲವು ಸಮಯದಿಂದ ಬೃಹತ್‌ ಗಾತ್ರದ ಗುಂಡಿ ಬಿದ್ದಿತ್ತು. ಹಲವು ಮಂದಿ ದ್ವಿಚಕ್ರ ಸವಾರರು ಈ ಗುಂಡಿ ಬಿದ್ದು ಗಾಯಗೊಂಡಿದ್ದರು. ವಾಹನಗಳು ಕೂಡ ಸ್ಕಿಡ್‌ ಆಗುವ ಅಪಾಯ ಇತ್ತು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಸ್ಥಳೀಯರು ಅನೇಕ ಬಾರಿ ಮನವಿ ಮಾಡಿದ್ದರೂ ಪೂರಕ ಸ್ಪಂದನೆ ವ್ಯಕ್ತವಾಗಿಲ್ಲ. ಇದರಿಂದಾಗಿ ಸ್ಥಳೀಯ ನಿವಾಸಿಗಳೇ ಸೇರಿ ರವಿವಾರ ಗುಂಡಿ ಮುಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ. ಅಲ್ಲದೆ, ಈ ರಸ್ತೆಯ ಉಳಿದ ಕಡೆ ಇರುವ ಗುಂಡಿಯನ್ನೂ ಮುಚ್ಚುವ ಯೋಜನೆಯಲ್ಲಿದ್ದಾರೆ. ಸ್ಥಳೀಯ ರಾದ ಅಶೋಕ, ಹಿಮಕರ, ಸುನೀಲ್‌ ಹಯವದನ, ಶರವಣ ಮತ್ತು ರಘುರಾಮ ಅವರು ಈ ಕೆಲಸದಲ್ಲಿ ಸಹಕರಿಸಿದ್ದಾರೆ.

ಪ್ಲಾಸ್ಟಿಕ್‌ ಮುಕ್ತ ಲ್ಯಾಂಡ್‌ಲಿಂಕ್ಸ್‌ ಕನಸು
ಸ್ಥಳೀಯರಾದ ಅಶೋಕ್‌ ಅವರು “ಉದಯವಾಣಿ ಸುದಿನ’ಕ್ಕೆ ಪ್ರತಿಕ್ರಿಯಿಸಿ, “ರಸ್ತೆಯಲ್ಲಿದ್ದ ಹೊಂಡದಿಂದಾಗಿ ತುಂಬಾ ಸಮಸ್ಯೆ ಉಂಟಾಗುತ್ತಿತ್ತು. ಅಪಘಾತದ ಆತಂಕವೂ ಇದೆ. ಜನಪ್ರತಿನಿಧಿಗಳ ಸ್ಪಂದನೆ ಇಲ್ಲದ ಕಾರಣ ನಾವೇ ತಂಡ ಕಟ್ಟಿ ಗುಂಡಿ ಮುಚ್ಚಿದ್ದೇವೆ. ನಾವು ಒಂದೊಂದು ವೃತ್ತಿಯಲ್ಲಿದ್ದು, ರಜಾ ದಿನಗಳಲ್ಲಿ ಈ ಕೆಲಸದಲ್ಲಿ ತೊಡಗುತ್ತೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸ್ಥಳೀಯರು ನಮಗೆ ಸಾಥ್‌ ನೀಡುವ ನಿರೀಕ್ಷೆ ಇದೆ. ಅದೇ ರೀತಿ. ಪ್ಲಾಸ್ಟಿಕ್‌ ಮುಕ್ತ ಲ್ಯಾಂಡ್‌ಲಿಂಕ್ಸ್‌ ಅಭಿಯಾನವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಚಿಂತನೆ ಮಾಡುತ್ತಿದ್ದೇವೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.