Kollywood: ರಜಿನಿ ʼವೆಟ್ಟೈಯನ್ʼಗೆ ದಾರಿ ಬಿಟ್ಟ ಸೂರ್ಯ; ʼಕಂಗುವʼ ರಿಲೀಸ್ ಮುಂದೂಡಿಕೆ?
Team Udayavani, Aug 26, 2024, 3:53 PM IST
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಅವರ ಮುಂದಿನ ಸಿನಿಮಾ ʼವೆಟ್ಟೈಯನ್ʼ (Vettaiyan) ರಿಲೀಸ್ಗೆ ಡೇಟ್ ಫಿಕ್ಸ್ ಆಗಿದೆ. ಇದೇ ದಿನ ಸೂರ್ಯ ಅವರ ಬಹುನಿರೀಕ್ಷಿತ ʼಕಂಗುವʼ(Kanguva) ರಿಲೀಸ್ ಆಗಲಿದೆ ಎಂದು ಚಿತ್ರತಂಡ ಅನೌನ್ಸ್ ಮಾಡಿತ್ತು.
ʼವೆಟ್ಟೈಯನ್ʼ ರಿಲೀಸ್ ದಿನವೇ ಕಾಲಿವುಡ್ನಲ್ಲಿ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಸಿನಿಮಾ ʼಕಂಗುವʼ ರಿಲೀಸ್ ಆಗುವುದರಿಂದ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಪೈಪೋಟಿ ಆಗುವ ಸಾಧ್ಯತೆಯಿತ್ತು ಎನ್ನುವ ಮಾತುಗಳು ಕೇಳಿ ಬರುತ್ತಿತ್ತು.
ಆದರೆ ಇದೀಗ ʼಕಂಗುವʼ ರಿಲೀಸ್ ಡೇಟ್ ಬಗ್ಗೆ ಹೊಸ ಅಪ್ಡೇಟ್ ವೊಂದು ಹೊರಬಿದ್ದಿದೆ. ಅಕ್ಟೋಬರ್ 10 ರಂದು ರಿಲೀಸ್ ಆಗುವ ಯೋಜನೆಯಿಂದ ಚಿತ್ರತಂಡ ಹಿಂದೇಟು ಹಾಕಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ ಶಿವ (Director Shiva) ನಿರ್ದೇಶನದ, ಸೂರ್ಯ(Suriya) ಅಭಿನಯದ ʼಕಂಗುವʼ(Kanguva) ದೀಪಾವಳಿ ಹಬ್ಬಕ್ಕೆ ಅಂದರೆ ಅಕ್ಟೋಬರ್ 31ರಂದು ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.
ಚಿತ್ರತಂಡ ಇದುವರೆಗೆ ರಿಲೀಸ್ ಡೇಟ್ ಮುಂದೂಡಿಕೆ ಹಾಗೂ ಹೊಸ ರಿಲೀಸ್ ಡೇಟ್ ಬಗ್ಗೆ ಅಧಿಕೃತವಾಗಿ ಮಾಹಿತಿಯನ್ನು ಹಂಚಿಕೊಂಡಿಲ್ಲ.
ಇದನ್ನೂ ಓದಿ: Actor Darshan: ಜೈಲಿನಲ್ಲಿ ರಾಜಾರೋಷ; ದರ್ಶನ್ ಸೇರಿ ಹಲವರ ವಿರುದ್ಧ 3 ಪ್ರತ್ಯೇಕ FIR
ಒಂದು ವೇಳೆ ʼಕಂಗುವʼ ಮುಂದೂಡಿಕೆ ಆದರೆ ರಜಿನಿಕಾಂತ್ ʼವೆಟ್ಟೈಯನ್ʼ ಕಾಲಿವುಡ್ನಲ್ಲಿ ದೊಡ್ಡ ರಿಲೀಸ್ ಆಗಿ ಮೂಡಿಬರಲಿದೆ.
ರಜಿನಿಕಾಂತ್ ʼಜೈಲರ್ʼ ಬಳಿಕ ಮತ್ತೆ ಖಾಕಿ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ಟಿ.ಜೆ. ಜ್ಞಾನವೇಲ್ ನಿರ್ದೇಶನದ ʼವೆಟ್ಟೈಯನ್ʼ ಈಗಾಗಲೇ ಟೀಸರ್ನಿಂದ ಗಮನ ಸೆಳೆದಿದ್ದು ನಿರೀಕ್ಷೆ ಹೆಚ್ಚಾಗಿಸಿದೆ.
ಬುಡಕಟ್ಟು ಸಮುದಾಯದ ನಡುವಿನ ಅಳಿವು – ಉಳಿವಿನ ಹೋರಾಟದ ಕಥೆಯನ್ನು ʼಕಂಗುವʼ ಒಳಗೊಂಡಿದೆ. ಸೂರ್ಯ, ಬಾಬಿ ಡಿಯೋಲ್ ಪ್ರಧಾನ ಪಾತ್ರದಲ್ಲಿ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇತ್ತ ಕನ್ನಡದಲ್ಲಿ ಧ್ರುವ ಸರ್ಜಾ ಅವರ ಪ್ಯಾನ್ ಇಂಡಿಯಾ ʼಮಾರ್ಟಿನ್ʼ ಕೂಡ ಅಕ್ಟೋಬರ್ 10ರಂದೇ ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raghu Thatha: ಓಟಿಟಿಯಲ್ಲಿ ರಿಲೀಸ್ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.