Hubli; ಹಿಂದುಳಿದ ವರ್ಗದವರಲ್ಲಿ ನಾಯಕತ್ವದ ಕೊರತೆಯಿದೆ: ಎನ್.ಎಲ್. ನರೇಂದ್ರ ಬಾಬು
Team Udayavani, Aug 26, 2024, 3:57 PM IST
ಹುಬ್ಬಳ್ಳಿ: ದೇಶಕ್ಕೆ ಸ್ವಾತಂತ್ರ್ಯ ದೊರೆತು 76 ವರ್ಷವಾದರೂ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರರ ಆಸೆ ಇನ್ನೂ ಈಡೇರಿಲ್ಲ. ದೇಶದಲ್ಲಿ ಹಿಂದುಳಿದ ವರ್ಗದವರು ಶೇ.60ರಷ್ಟು ಜನಸಂಖ್ಯೆ ಹೊಂದಿದ್ದರೂ ಸರಿಯಾಗಿ ಮೀಸಲಾತಿ ಜಾರಿಯಾಗಿಲ್ಲ. ಇದಕ್ಕೆಲ್ಲಾ ಸಮಾಜವು ಸಂಘಟಿತವಾಗುವಲ್ಲಿ ತೋರಿದ ನಿರ್ಲಕ್ಷ್ಯ ಹಾಗೂ ಮುಖಂಡರು ಗಟ್ಟಿ ಧ್ವನಿ ಎತ್ತುವಲ್ಲಿ ವಿಫಲವಾಗಿರುವುದೇ ಕಾರಣ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಎನ್.ಎಲ್. ನರೇಂದ್ರ ಬಾಬು ಹೇಳಿದರು.
ಇಲ್ಲಿನ ಕೇಶ್ವಾಪುರ ರಸ್ತೆಯ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗೀಯ ವ್ಯವಸ್ಥಾಪಕರ ಕಚೇರಿ ಎದುರಿನಲ್ಲಿ ಅಖಿಲ ಭಾರತ ಒಬಿಸಿ ರೈಲ್ವೆ ನೌಕರರ ಸಂಘದ (ಎಐಒಬಿಸಿಆರ್ಇಎ) ನವೀಕೃತ ವಲಯ ಕಚೇರಿ ಉದ್ಘಾಟನೆ ಹಾಗೂ ಬಿ.ಪಿ. ಮಂಡಲ 106ನೇ ಜನ್ಮದಿನೋತ್ಸವ ಕಾರ್ಯಕ್ರಮದ ಅತಿಥಿಯಾಗಿ ಅವರು ಮಾತನಾಡಿದರು.
ಕೌಶಲ್ಯ ಇರುವುದೇ ಹಿಂದುಳಿದ ವರ್ಗದವರಲ್ಲಿ. ಆದರೆ ನಮ್ಮ ಭವಿಷ್ಯ ರೂಪಿಸುವ ನಾಯಕತ್ವದ ಕೊರತೆ ಇದೆ. ಸಮಾಜವು ಎಲ್ಲಾ ಕ್ಷೇತ್ರಗಳಲ್ಲಿ ಪ್ರವರ್ಧಮಾನಕ್ಕೆ ಬರಬೇಕು. ಸಮಾನತೆ, ಸಮಾನ ಅವಕಾಶ ಸಿಗಬೇಕು. ಹಿಂದುಳಿದವರೆಂದು ಕೈಕಟ್ಟಿ ಕುಳಿತರೆ ಆಗದು. ಸುಶಿಕ್ಷಿತರಾಗಿ ಸಂಘಟಿತರಾಗಬೇಕಿದೆ. ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಬೇಕಿದೆ ಎಂದರು.
ಎಐಒಬಿಸಿಆರ್ಇಎ ಪ್ರಧಾನ ಕಾರ್ಯದರ್ಶಿ ಗೋವರ್ಧನ ವೈ., ಹುಬ್ಬಳ್ಳಿ ವಿಭಾಗದ ಮುಖ್ಯ ಕಾರ್ಯಾಗಾರ ವ್ಯವಸ್ಥಾಪಕ ವಿಜಯ ಸಿಂಗ್ ಯಾದವ, ಅನಂತ ಗುರುಸ್ವಾಮಿ, ಜಿ.ಬಿ. ವೆಂಕಟ ರಾವ್., ಗೋಪಿನಾಥ, ರಾಜೇಶ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.