Bheema ಯಶಸ್ಸಿನ ಬೆನ್ನಲ್ಲೇ ಸಲಗ ಗ್ಯಾಂಗ್ ಜತೆ ದುನಿಯಾ ವಿಜಿ ಮತ್ತೊಂದು ಸಿನಿಮಾ
Team Udayavani, Aug 26, 2024, 5:45 PM IST
ಬೆಂಗಳೂರು: ‘ಭೀಮ'(Bheema) ಚಿತ್ರದ ಯಶಸ್ಸಿನ ಬೆನ್ನಲ್ಲೇ ದುನಿಯಾ ವಿಜಯ್(Duniya Vijay) ಅವರು ಮತ್ತೊಂದು ಚಿತ್ರದ ಪೋಸ್ಟರ್ ಹಂಚಿಕೊಂಡು ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ.
ಕೃಷ್ಣ ಜನ್ಮಾಷ್ಟಮಿಯ ದಿನ ಸೋಮವಾರ(ಆ 26) ರಂದು ವಿಜಯ್ ಅವರು ಪೋಸ್ಟರ್ ಅನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.ಚಿತ್ರಕ್ಕೆ ವಿಕೆ30(VK30) ಎಂದು ಟೈಟಲ್ ನೀಡಲಾಗಿದ್ದು, ವೆಟ್ರಿ ವೆಲ್ (ತಂಬಿ) ನಿರ್ದೇಶನ ಮಾಡಲಿದ್ದಾರೆ.ಸಲಗ ಮತ್ತು ಭೀಮ ಚಿತ್ರದ ಗ್ಯಾಂಗ್ ಚಿತ್ರದಲ್ಲಿದೆ ಎನ್ನುವುದನ್ನು ಟೈಟಲ್ ಗೆ ಮುನ್ನ ಬರೆಯಲಾಗಿದೆ.
ಕೆಂಪು ಟೋಪಿ ಧರಿಸಿ ಮಾಸ್ ಲುಕ್ ನಲ್ಲಿರುವ ದುನಿಯಾ ವಿಜಿ ಅವರ ಹೆಗಲ ಮೇಲೆ ಉಡವೊಂದು ಕುಳಿತಿದ್ದು, ಭರ್ಜರಿ ಲುಕ್ ನ ಪೋಸ್ಟರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಕೆಲವರು ಇದು ಸಲಗ 2 ಚಿತ್ರವೇ ಎಂದು ಪ್ರಶ್ನೆ ಮಾಡಿದ್ದಾರೆ.
ಕೃಷ್ಣ ಕ್ರಿಯೇಷನ್ಸ್ ಮತ್ತು ಜಗದೀಶ್ ಫಿಲಂಸ್ ನಿರ್ಮಾಣ ಮಾಡಿದ ವಿಜಯ್ ಅವರೇ ನಿರ್ದೇಶಿಸಿದ ಥ್ರಿಲ್ಲರ್/ಆಕ್ಷನ್ ಚಿತ್ರ ‘ಭೀಮ’ದಲ್ಲಿ ದುನಿಯಾ ವಿಜಯ್ ಜತೆಗೆ ಅಶ್ವಿನಿ, ಬ್ಲಾಕ್ ಡ್ರ್ಯಾಗನ್ ಮಂಜು, ಚಂದ್ರು, ರಂಗಾಯಣ ರಘು, ಅಚ್ಯುತ್ ಕುಮಾರ್, ಗೋಪಾಲ್ ಕೃಷ್ಣ ದೇಶಪಾಂಡೆ ಮತ್ತು ರಮೇಶ್ ಇಂದಿರಾ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸ್ಯಾಂಡಲ್ ವುಡ್ ನ ಈ ಬಾರಿಯ ಯಶಸ್ಸು ಕಂಡು ಸುದ್ದಿ ಮಾಡಿದ ಚಿತ್ರದಲ್ಲಿ ಭೀಮ ಒಂದಾಗಿದೆ.
2021, ಅಕ್ಟೋಬರ್ 14 ರಂದು ಬಿಡುಗಡೆಯಾಗಿ ಯಶಸ್ಸು ಕಂಡಿದ್ದಆಕ್ಷನ್ ಥ್ರಿಲ್ಲರ್ ‘ಸಲಗ’ ಚಿತ್ರ ದುನಿಯಾ ವಿಜಯ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿತ್ತು. ಕೆ.ಪಿ.ಶ್ರೀಕಾಂತ್ ನಿರ್ಮಿಸಿದ್ದರು. ದುನಿಯಾ ವಿಜಯ್ ಜತೆಗೆ ಸಂಜನಾ ಆನಂದ್, ಡಾಲಿ ಧನಂಜಯ್ ಮತ್ತು ನಾಗಭೂಷಣ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
Again with the gang#VK30 #VIJAYAKUMAR pic.twitter.com/VjMdMCw3Y0
— Duniya Vijay (@OfficialViji) August 26, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
Jawan Movie: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ
Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.