ಆರ್ಥಿಕ ಸಂಕಷ್ಟದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ-ಸಂಪನ್ಮೂಲ ಮೀರಿ ಖರ್ಚು!


Team Udayavani, Aug 26, 2024, 6:05 PM IST

ಆರ್ಥಿಕ ಸಂಕಷ್ಟದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ-ಸಂಪನ್ಮೂಲ ಮೀರಿ ಖರ್ಚು!

ಉದಯವಾಣಿ ಸಮಾಚಾರ
ಬೆಳಗಾವಿ: ಗಡಿ ಮತ್ತು ಭಾಷಾ ವಿವಾದಗಳ ಮೂಲಕ ಸುದ್ದಿಯಲ್ಲಿರುತ್ತಿದ್ದ ಬೆಳಗಾವಿ ಮಹಾನಗರ ಪಾಲಿಕೆ ಈಗ ಮತ್ತೊಮ್ಮೆ ಸದ್ದು ಮಾಡುತ್ತಿದೆ. ಈ ಬಾರಿ ಯಾವುದೇ ವಿವಾದಗಳು ಸುದ್ದಿಗೆ ಕಾರಣವಾಗಿಲ್ಲ. ಬದಲಾಗಿ ಅಧಿಕಾರಿಗಳೇ ಮಾಡಿರುವ ಯಡವಟ್ಟುಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸುದ್ದಿ ಮಾಡಿದೆ.

ಸರಕಾರದ ಮೇಲೆ ಅವಲಂಬನೆಯಾಗದೆ ತನ್ನ ಸಂಪನ್ಮೂಲಗಳಿಂದಲೇ ಹೇಗೆ ನಿರ್ವಹಣೆ ಮಾಡಬಹುದು ಎಂಬುದನ್ನು ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರು, ಅಧಿಕಾರಿಗಳು ಮರೆತಿದ್ದಾರೆ. ಒಂದು ವೇಳೆ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಮೌನವಾಗಿದ್ದಾರೆಂಬ ಅಭಿಪ್ರಾಯಗಳು ಕೇಳಿ ಬರುತ್ತಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲ ಇಡೀ ಪಾಲಿಕೆಯನ್ನೇ ಅನುಮಾನದಿಂದ ನೋಡುವಂತೆ ಮಾಡಿದೆ.

ಮಹಾನಗರ ಪಾಲಿಕೆಗಳಿಗೆ ಸರಕಾರದಿಂದ ಅನುದಾನ ನೀಡಲ್ಲ. ಬದಲಾಗಿ ತನ್ನಸಂಪನ್ಮೂಲಗಳಿಂದಲೇ ಪಾಲಿಕೆಯನ್ನು ನಿರ್ವಹಣೆ ಮಾಡಬೇಕು, ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು ಎಂದು ಸರಕಾರ ಸ್ಪಷ್ಟವಾಗಿ ತಿಳಿಸಿ ಕೈತೊಳೆದುಕೊಂಡಿದೆ. ಸರಕಾರದ ಐದು ಗ್ಯಾರಂಟಿ ಯೋಜನೆಗಳು ಪಾಲಿಕೆಯ ಅನುದಾನದ ಮೇಲೆ ಪರಿಣಾಮ ಬೀರಿವೆ. ತನ್ನ ಮೂಲ ಆದಾಯಗಳನ್ನೇ ಮರೆತಂತಿರುವ ಪಾಲಿಕೆಗೆ ಸರಕಾರದ ಈ ಕ್ರಮ ಇಕ್ಕಟ್ಟಿಗೆ ಸಿಲುಕಿಸಿದೆ.

ಅಧಿಕಾರಿಗಳ ಸುದೀರ್ಘ‌ ಆಡಳಿತ: ಚುನಾವಣೆ ನಡೆದರೂ ಬಹಳ ಸಮಯದ ನಂತರ ಚುನಾಯಿತ ಸದಸ್ಯರು ಅಧಿಕಾರ ವಹಿಸಿಕೊಂಡಿದ್ದು, ಇದುವರೆಗೆ ಅಧಿಕಾರಿಗಳೇ ತಮ್ಮ ಮನಸ್ಸಿಗೆ ಬಂದಂತೆ ಅಧಿಕಾರ ನಡೆಸಿದ್ದು ಪಾಲಿಕೆಯ ಇಂದಿನ ಸಂಕಷ್ಟಕ್ಕೆ ಕಾರಣ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಇದರ ನಡುವೆ ಮಹಾನಗರ ಪಾಲಿಕೆಗೆ ಪ್ರತಿ ವರ್ಷ ಬರುತ್ತಿದ್ದ ನಗರೋತ್ಥಾನ ಅನುದಾನ ಸ್ಥಗಿತವಾಗಿದೆ. ಅದನ್ನು ತರುವ ಪ್ರಯತ್ನ ನಡೆದಿಲ್ಲ. ನಮ್ಮಲ್ಲಿ ಒಳ್ಳೆಯ ಸಂಪನ್ಮೂಲ ಇದೆ. ಅದರ ಸದ್ಬಳಕೆ ಆಗುತ್ತಿಲ್ಲ. ಬದಲಾಗಿ ಸಂಪನ್ಮೂಲಗಳನ್ನು ಮೀರಿ ಖರ್ಚು ಮಾಡಲಾಗುತ್ತಿದೆ ಎಂಬುದು ಹಿರಿಯ ಅಧಿಕಾರಿಗಳ ಅಭಿಪ್ರಾಯ.

ಮುಖ್ಯವಾಗಿ ಮಹಾನಗರ ಪಾಲಿಕೆಯಲ್ಲಿ ಆರ್ಥಿಕ ಶಿಸ್ತು ಸಂಪೂರ್ಣ ಮಾಯವಾಗಿದೆ. ಪಾಲಿಕೆಗೆ ಎಷ್ಟು ಆದಾಯ ಬರುತ್ತದೆ. ಎಲ್ಲಿಂದ ಎಷ್ಟು ಆದಾಯ ಬರುತ್ತದೆ ಎಂಬುದು ಅಲ್ಲಿನ ಅಧಿಕಾರಿಗಳು, ಸದಸ್ಯರಿಗೆ ಗೊತ್ತಿಲ್ಲ. ಅದರ ಬಗ್ಗೆ ಆಸಕ್ತಿಯೂ ಕಾಣಿಸುತ್ತಿಲ್ಲ.

ಪಾಲಿಕೆಯ ಆದಾಯ ಮೂಲಗಳನ್ನು ಗುರುತಿಸಿ ಅದನ್ನು ಕಟ್ಟುನಿಟ್ಟಾಗಿ ಸಂಗ್ರಹ ಮಾಡಿದರೆ ಕನಿಷ್ಠ 200 ಕೋಟಿ ರೂ. ಆದಾಯ ಗಳಿಸಬಹುದು ಎಂಬುದು ಪಾಲಿಕೆಯ ನಿವೃತ್ತ ಅಧಿಕಾರಿಗಳ ಅಭಿಪ್ರಾಯ. ಇದು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬಂದರೆ ಸರಕಾರದ ಮುಂದೆ ಪ್ರತಿವರ್ಷ ಅನುದಾನಕ್ಕಾಗಿ ಕೈ ಚಾಚುವುದು ತಪ್ಪುತ್ತದೆ. ಆದರೆ ಅಧಿಕಾರಿಗಳು, ಸದಸ್ಯರು, ಶಾಸಕರು ಇದರ ಬಗ್ಗೆ ಇಚ್ಛಾಶಕ್ತಿಯನ್ನೇ ಹೊಂದಿಲ್ಲ. ಇದು ಅವರಿಗೆ ಬೇಕಾಗಿಯೂ ಇಲ್ಲ.

ಕೋಟಿಗಟ್ಟಲೇ ಬಾಕಿ
ಮೂಲಗಳ ಪ್ರಕಾರ ಮಹಾನಗರ ಪಾಲಿಕೆಗೆ ವಿವಿಧ ಸರಕಾರಿ ಇಲಾಖೆ ಮತ್ತು ಖಾಸಗಿ ಸಂಸ್ಥೆಗಳಿಂದ 200 ಕೋಟಿಗೂ ಹೆಚ್ಚು ಬಾಕಿ ಬರಬೇಕಿದೆ. ಸರಕಾರದಿಂದಲೇ ಸುಮಾರು 40 ಕೋಟಿ ರೂ.ಬರಬೇಕಿದೆ. ಹೆಸ್ಕಾಂದಿಂದ ಅಂದಾಜು 17 ಕೋಟಿ ರೂ.ಬಾಕಿ ಇದೆ. ಜಲಮಂಡಳಿಯಿಂದ ಕೋಟ್ಯಂತರ ಬಾಕಿ ಇದೆ.

ಈಗ ಅದನ್ನು ನಿರಂತರ ನೀರು ಪೂರೈಕೆ ಯೋಜನೆ ಅನುಷ್ಠಾನಕ್ಕೆ ಸರಿದೂಗಿಸಿಕೊಳ್ಳಲಾಗಿದೆ. ಕೇಬಲ್‌ ಕಂಪನಿಗಳಿಂದ ಹಾಗೂ ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ, ಪ್ರಭಾವಿ ವ್ಯಕ್ತಿಗಳಿಂದ ಲಕ್ಷಾಂತರ ರೂ. ಬಾಕಿ ಬರಬೇಕಿದೆ. ಇದರ ವಸೂಲಾತಿಗೆ ಮಹಾನಗರ ಪಾಲಿಕೆಯ ಯಾವ ಅಧಿಕಾರಿಗಳು ಮತ್ತು ಆಡಳಿತ ಪಕ್ಷ ಧೈರ್ಯ ಮಾಡುತ್ತಿಲ್ಲ. ಇದು ಪಾಲಿಕೆಯ ಅಧೋಗತಿಗೆ ಮುಖ್ಯ ಕಾರಣವಾಗಿದೆ. ಇನ್ನೊಂದು ಕಡೆ ತೆರಿಗೆ ವಸೂಲಾತಿ ಸಹ ಶೋಚನೀಯವಾಗಿದೆ. ಅಧಿಕಾರಿಗಳು ಮತ್ತು ಸದಸ್ಯರೇ ಹೇಳುವಂತೆ ಪ್ರತಿಶತ 50 ರಿಂದ 60 ಮಾತ್ರ ತೆರಿಗೆ ವಸೂಲು ಆಗುತ್ತಿದೆ. ಹೀಗಾದರೆ ಪಾಲಿಕೆಯ ಹಣಕಾಸು ಸ್ಥಿತಿ ಸುಧಾರಿಸುವುದು ಯಾವಾಗ ಎಂಬುದು ಎಲ್ಲರ ಪ್ರಶ್ನೆ.

ಕೇಶವ ಆದಿ

ಟಾಪ್ ನ್ಯೂಸ್

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.