Belagavi; ನನ್ನನ್ನು ಯಾರೂ ಮುಟ್ಟಲೂ ಆಗದು..: ಗುಡುಗಿದ ಸಿಎಂ ಸಿದ್ದರಾಮಯ್ಯ
Team Udayavani, Aug 26, 2024, 5:50 PM IST
ಬೆಳಗಾವಿ: ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸೋಮವಾರ (ಆ.26) ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಕಿತ್ತೂರು ಸೈನ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಮುಖ ಸೈನಿಕನಾಗಿದ್ದರು. ಮೊದಲನೇ ಯುದ್ಧದಲ್ಲಿ ಕಿತ್ತೂರು ಸಂಸ್ಥಾನಕ್ಕೆ ಜಯ ದೊರಕುತ್ತದೆ. ಎರಡನೇ ಯುದ್ದದಲ್ಲಿ ಸೋಲಾಗುತ್ತದೆ, ಕಿತ್ತೂರು ರಾಣಿ ಚನ್ನಮ್ಮ ಸೆರೆಯಾಗುತ್ತಾರೆ. ಆಗ ಸಂಗೊಳ್ಳಿ ರಾಯಣ್ಣ ಸೆರೆಯಾಗದೆ ಕಿತ್ತೂರನ್ನು ಬ್ರಿಟಿಷರಿಂದ ಬಿಡಿಸಬೇಕು ಎಂದು ಹೋರಾಟ ಮಾಡಿದರು. ಹಳ್ಳಿ, ಕಾಡು-ಮೇಡು ಸುತ್ತಿ ಸೈನ್ಯ ಕಟ್ಟಿಕೊಂಡು ಗೆರಿಲ್ಲಾ ಯುದ್ಧ ಮಾಡುತ್ತಾರೆ. ಬ್ರಿಟಿಷರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಾರೆ, ಸಂಗೊಳ್ಳಿ ರಾಯಣ್ಣ ಬ್ರಿಟಿಷರ ಕೈಗೆ ಸಿಗಲ್ಲ. ಆಗ ಬ್ರಿಟಿಷರು ಒಂದು ಉಪಾಯ ಹೂಡುತ್ತಾರೆ. ನಮ್ಮವರನ್ನೇ ಬಳಕೆ ಮಾಡಿಕೊಂಡು ಈಜುವ ಸಮಯದಲ್ಲಿ ಹಿಡಿಸುತ್ತಾರೆ. ಕತ್ತಿ ಗುರಾಣಿ ಇರಲ್ಲ, ಆಗ ಹಿಡಿಯಬಹುದು ಎಂದು ನಮ್ಮವರೇ ಸಹಾಯ ಮಾಡಿದರು. ಈಗಲೂ ಇದ್ದಾರೆ ದೇಶದ್ರೋಹಿಗಳು ಎಂದು ಹೇಳಿದ ಸಿಎಂ ಸಿದ್ದರಾಮಯ್ಯ ಬಾಲಚಂದ್ರ ಜಾರಕಿಹೊಳಿ ಮುಖ ನೋಡಿದರು.
ಬಾಲಚಂದ್ರ ನಮ್ಮ ಪರ, ಆದರೆ ಅವರ ಸಹಪಾಠಿಗಳು ನನ್ನ ವಿರುದ್ಧ. ಹೇಗಾದರೂ ಮಾಡಿ ನನ್ನ ಅಧಿಕಾರದಿಂದ ಇಳಿಸಬೇಕೆನ್ನುವುದು ಅವರ ಉದ್ದೇಶ. ಅದು ಸಾಧ್ಯವೇ ಇಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ಎಲ್ಲಿಯವರೆಗೆ ನಿಮ್ಮ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೂ ನನ್ನನ್ನು ಯಾರೂ ಮುಟ್ಟಲೂ ಆಗದು ಎಂದು ಗುಡುಗಿದರು.
ಹಿಂದುಳಿದವರು ಸಿಎಂ ಆಗಿದ್ದಾರೆಂದು ತಡೆಕೊಳ್ಳದು ಆಗುತ್ತಿಲ್ಲ. ಹಾಗೆಯೇ ಸಂಗೊಳ್ಳಿ ರಾಯಣ್ಣನನ್ನೂ ಹಿಡಿದು ಹಾಕಿದರು ಎಂದು ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.