Indi;ಮಹಿಳೆ ಬೆ*ತ್ತಲೆ ಮೆರವಣಿಗೆ ಪ್ರಕರಣ: ಸಸ್ಪೆಂಡ್ ಆಗಿದ್ದ ಎಸ್ ಐ ನಿರ್ದೋಷಿ
ರಾಜ್ಯದಲ್ಲೇ ಭಾರಿ ಸಂಚಲನ ಸೃಷ್ಟಿಸಿದ್ದ 7 ವರ್ಷದ ಹಿಂದಿನ ಪ್ರಕರಣ
Team Udayavani, Aug 26, 2024, 8:12 PM IST
ಸಾಂದರ್ಭಿಕ ಚಿತ್ರ ಮಾತ್ರ
ವಿಜಯಪುರ : ಏಳು ವರ್ಷಗಳ ಹಿಂದೆ ರಾಜ್ಯದಲ್ಲೇ ಭಾರಿ ಸಂಚಲನ ಸೃಷ್ಟಿಸಿದ್ದ ಮಹಿಳೆಯ ಬೆತ್ತಲೆ ಮೆರವಣಿಗೆ ಪ್ರಕರಣದಲ್ಲಿನ ನಿರ್ಲಕ್ಷದ ಆರೋಪದಲ್ಲಿ ಸಸ್ಪೆಂಡ್ ಆಗಿದ್ದ ಎಸ್ ಐ ನಿರ್ದೋಷಿ ಎಂದು ಘೋಷಿತವಾಗಿದ್ದಾರೆ.
ಹಾಲಿ ರೈಲ್ವೇ ಇಲಾಖೆಯಲ್ಲಿ ಸೇವೆಯಲ್ಲಿರುವ ಶಿವಾನಂದ ಆರೇನಾಡ ಇಂಡಿ ಗ್ರಾಮೀಣ ಠಾಣೆ ಪಿಎಸೈ ಆಗಿದ್ದಾಗ 2017 ಜುಲೈ 3 ರಂದು ಮಹಿಳೆಯೊಬ್ಬಳನ್ನು ಹಾಡು ಹಗಲೆ ಬೆತ್ತಲೆಗೊಳಿಸಿ, ಹಲ್ಲೆ ಮಾಡಿದ ಘಟನೆ ಜರುಗಿತ್ತು. ಸದರಿ ಘಟನೆ ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿತ್ತು.
ಘಟನೆಯಲ್ಲಿ ಅಂದಿನ ಎಸ್ ಐ ಶಿವಾನಂದ ಆರೇನಾಡ ಅವರು ಕರ್ತವ್ಯ ನಿರ್ಲಕ್ಷ ವಹಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೇ ಇಲಾಖೆಯ ಉನ್ನತ ಅಧಿಕಾರಿಗಳಿಂದ ತನಿಖಾ ವರದಿ ಆಧರಿಸಿ 2017 ಜುಲೈ 7 ರಿಂದ 2018 ಏಪ್ರೀಲ್ 2 ರ ವರೆಗೆ ಶಿವಾನಂದ ಅವರನ್ನು ಸೇವೆಯಿಂದ ಆಮಾನತು ಮಾಡಲಾಗಿತ್ತು. ಬಳಿಕ ಅವರನ್ನು ರೈಲ್ವೇ ಇಲಾಖೆಗೆ ವರ್ಗಾಯಿಸಿ, ವಿಜಯಪುರ ರೈಲ್ವೇ ಠಾಣೆಗೆ ಕರ್ತವ್ಯಕ್ಕೆ ನಿಯೋಜಿಸಿತ್ತು.
ಆದರೆ ಸದರಿ ಪ್ರಕರಣದಲ್ಲಿ ತನ್ನದೇನೂ ತಪ್ಪಿಲ್ಲ, ತನ್ನಿಂದ ಯಾವುದೇ ನಿರ್ಲಕ್ಷವಾಗಿಲ್ಲ ಎಂದು ಇಲಾಖೆಯ ಉನ್ನತ ಅಧಿಕಾರಿಗಳು ನೀಡಿದ ವರದಿ ಹಾಗೂ ಸಸ್ಪೆಂಡ್ ಆದೇಶವನ್ನು ಪ್ರಶ್ನಿಸಿ ಎಸೈ ಶಿವಾನಂದ ಆರೇನಾಡ ಕರ್ನಾಟಕ ಆಡಳಿತಾತ್ಮಕ ಮಂಡಳಿ (ಕೆಎಟಿ)ಗೆ ನ್ಯಾಯಕ್ಕಾಗಿ ಮೊರೆ ಹೋಗಿದ್ದರು.
ಶಿವಾನಂದ ಅವರ ವಾದ ಎತ್ತಿ ಹಿಡಿದ ಕೆಎಟಿ ಶಿವಾನಂದ ಅವರು ಮಹಿಳೆಯ ಬೆತ್ತಲೆ ಮೆರವಣಿಗೆ, ಹಲ್ಲೆ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ ತೋರಿಲ್ಲ ಎಂದು ಹಾಗೂ ಸಸ್ಪೆಂಡ್ ಮಾಡಿರುವುದು ಸೂಕ್ತವಲ್ಲ ಎಂದು ಆದೇಶಿಸಿತ್ತು.
ಕೆಎಟಿ ಆದೇಶದ ಆಧಾರದಲ್ಲಿ ಕಳೆದ ಜುಲೈ ಮೊದಲ ವಾರ ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಸ ಅವರು ಶಿವಾನಂದ ಅವರನ್ನು ದೋಷಮುಕ್ತರು ಎಂದು ಆದೇಶಿಸಿದ್ದಾರೆ.
ಅಲ್ಲದೇ ಶಿವಾನಂದ ಅವರು ದೋಷಮುಕ್ತ ಆಗಿರುವ ಕಾರಣ 2017 ಜುಲೈ 7 ರಿಂದ 2018 ಏಪ್ರಿಲ್ 2 ರ ವರೆಗೆ ಶಿವಾನಂದ ಅವರನ್ನು ಸೇವೆಯಿಂದ ಆಮಾನತು ಮಾಡಿದ್ದ ಅವಧಿಯನ್ನು ಕರ್ತವ್ಯದ ಮೇಲೆ ಕಳೆದ ಅವಧಿ ಎಂದು ಪರಿಗಣಿಸುವಂತೆಯೂ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.