J-K polls; 51 ಸ್ಥಾನಗಳಲ್ಲಿ ನ್ಯಾಷನಲ್ ಕಾನ್ಫರೆನ್ಸ್,ಕಾಂಗ್ರೆಸ್ 32 ರಲ್ಲಿ ಸ್ಫರ್ಧೆ
ಜಟಿಲವಾದ 5 ಕ್ಷೇತ್ರಗಳು... ಅಲ್ಲಿ ''ಸೌಹಾರ್ದಯುತ ಶಿಸ್ತಿನ ಸ್ಪರ್ಧೆ'' ಎಂದ ಉಭಯ ಪಕ್ಷಗಳು!!!
Team Udayavani, Aug 26, 2024, 9:45 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ 90 ಸ್ಥಾನಗಳ ಪೈಕಿ ಮಿತ್ರ ಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್(National Conference) 51 ಸ್ಥಾನಗಳಲ್ಲಿಸ್ಪರ್ಧಿಸಲಿದ್ದು, 32 ಕ್ಷೇತ್ರಗಳಲ್ಲಿ ಕಾಂಗ್ರೆಸ್(Congress) ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ಸೋಮವಾರ(ಆ 26)ಸಂಜೆ ಎಂದು ಉಭಯ ಪಕ್ಷಗಳ ಹಿರಿಯ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು ‘ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶದ 5 ಸ್ಥಾನಗಳಲ್ಲಿ ಸೌಹಾರ್ದಯುತ ಶಿಸ್ತಿನ ಸ್ಪರ್ಧೆಯನ್ನು ನಡೆಸಲಿದೆ’ ಎಂದು ಹೇಳಿದ್ದಾರೆ.
ಐದು ಸ್ಥಾನಗಳಲ್ಲಿ ಎರಡೂ ಪಕ್ಷಗಳು ಅಭ್ಯರ್ಥಿಗಳನ್ನು ಕಣ್ಣಕಿಳಿಸುತ್ತಿರುವುದು ಎರಡು ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಸೂಚಿಸುತ್ತದೆ. ಇಂಡಿಯಾ ಮೈತ್ರಿಕೂಟದಡಿಯಲ್ಲಿ ಸ್ಪರ್ಧೆ ನಡೆಯುತ್ತಿದ್ದು, ಕಾಂಗ್ರೆಸ್ ಬೆಳಗ್ಗೆ ಶ್ರೀನಗರಕ್ಕೆ ಇಬ್ಬರು ಹಿರಿಯ ನಾಯಕರನ್ನು ಕಳುಹಿಸಿಕೊಟ್ಟ ನಂತರವೂ ಸಂಪೂರ್ಣವಾಗಿ ಐದು ಸ್ಥಾನಗಳ ವಿಚಾರ ಬಗೆ ಹರಿಸಲು ಸಾಧ್ಯವಾಗಲಿಲ್ಲ.
ಸೀಟು ಹಂಚಿಕೆ ಒಪ್ಪಂದವನ್ನು ಕಾಂಗ್ರೆಸ್ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಪ್ರಕಟಿಸಿದ್ದಾರೆ. ಮೈತ್ರಿಕೂಟವು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಮತ್ತು ಪ್ಯಾಂಥರ್ಸ್ ಪಾರ್ಟಿಗೆ ತಲಾ 1 ಸ್ಥಾನವನ್ನು ಬಿಟ್ಟು ಕೊಡಲಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು ದಶಕದ ನಂತರ ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 4 ರಂದು ಮತ ಎಣಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್ ಶಾ ಘೋಷಣೆ
Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.