Udupi: ಶ್ರೀಕೃಷ್ಣ ಅವತಾರವೇ ಆಕರ್ಷಕ: ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು

ಕೃಷ್ಣನ ಮೃಣ್ಮಯ ಮೂರ್ತಿಯ ಮೆರವಣಿಗೆಗೆ ಚಾಲನೆ

Team Udayavani, Aug 27, 2024, 6:45 AM IST

Uduapi

ಉಡುಪಿ: ವಿಶ್ವದ ಒಳಿತಿಗಾಗಿ ಆಗಿರುವ ಶ್ರೀ ಕೃಷ್ಣ ಅವತಾರವೇ ಆಕರ್ಷಕ. ಶ್ರೀ ಕೃಷ್ಣನ ನಡೆ, ನುಡಿ ಸದಾ ಸ್ಫೂರ್ತಿ ಹಾಗೂ ಜೀವನ ಉತ್ಸಾಹ ತುಂಬುತ್ತದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಅನುಗ್ರಹಿಸಿದರು.

ಶ್ರೀ ಕೃಷ್ಣಮಠ, ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಮಾಸೋತ್ಸವ, ಸಪ್ತೋತ್ಸವದ ಪ್ರಯುಕ್ತ ಸೋಮವಾರ ಶ್ರೀ ಕೃಷ್ಣಾಷ್ಟಮಿಯಂದು ರಥಬೀದಿಯಲ್ಲಿ ಮೃಣ್ಮಯ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿ, ಅನಂತರ ರಥಬೀದಿ ಸುತ್ತಿ ರಾಜಾಂಗಣಕ್ಕೆ ಆಗಮಿಸಿ, ಅಲ್ಲಿ ಸಭಾ ಕಾರ್ಯಕ್ರಮವನ್ನು “ವಸುದೇವ ಶ್ರೀ ಕೃಷ್ಣನನ್ನು ಬುಟ್ಟಿಯಲ್ಲಿ ಹೊತ್ತು ಹೋಗುವಾಗ ಶೇಷ ಶಯನ ಅನುಗ್ರಹಿಸುತ್ತಿರುವ ಪ್ರತಿಕೃತಿ ಅನಾವರಣಗೊಳಿಸಿ ಆಶೀರ್ವಚನ ನೀಡಿದರು.

ಕೃಷ್ಣನ ಅವತಾರವೇ ಭಕ್ತ ಸ್ನೇಹಿ ಹಾಗೂ ಆಪ್ಯಾಯ ಮಾನವಾದುದು. ಕೃಷ್ಣೋಪಾಸನೆಯಿಂದ ತತ್‌ಕ್ಷಣ ಭಕ್ತರಿಗೆ ಅನುಗ್ರಹಿಸುತ್ತಾನೆ. ಶ್ರೀಕೃಷ್ಣ ಹೇಗೆ ಆಕರ್ಷಕನೋ ಹಾಗೆಯೇ ಭಕ್ತರ ಭಕ್ತಿಗೂ ಆಕರ್ಷಿತನಾಗುತ್ತಾನೆ. ಕೃಷ್ಣಾವತಾರ ಕಲಿಯುಗದ ಭಕ್ತರಿಗಾಗಿ ವಿನ್ಯಾಸ ಮಾಡಿದ ಅವತಾರ ಎಂದು ಅನುಗ್ರಹಿಸಿದರು.

ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಅನುಗ್ರಹಿಸಿ, ಸ್ತ್ರೀಯರನ್ನು ಎಲ್ಲಿ ಪೂಜಿಸುತ್ತಾರೋ ಅಲ್ಲಿ ದೇವರು ಇರುತ್ತಾರೆ. ಧರ್ಮ ದ್ರೋಹಿಗಳ ನಾಶಕ್ಕೆ ಭಗವಂತನ ಅವತಾರ ಎನ್ನುತ್ತಾರೆ. ಧರ್ಮ ದ್ರೋಹಿಗಳ ನಾಶಕ್ಕೆ ಭಗವಂತ ಅವತ ರಿಸ ಬೇಕೆಂದಿಲ್ಲ. ತನ್ನ ಇಚ್ಛೆ ಮಾತ್ರ ದಿಂದಲೇ ಸಂಹಾರ ಮಾಡಬಹುದು. ನಮ್ಮಲ್ಲಿರುವ ದೋಷ ಗಳನ್ನು ಕಳೆಯುವವನೇ ಶ್ರೀ ಕೃಷ್ಣ ಎಂದರು.

ಪ್ರಸಾದ್‌ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ| ಕೃಷ್ಣ ಪ್ರಸಾದ್‌ ಕೂಡ್ಲು, ದುಬಾೖಯ ಸುಧಾಕರ ಪೇಜಾವರ, ಉದ್ಯಮಿಗಳಾದ ಚೆಲ್ಲಡ್ಕ ಕುಸುಮೋದರ ಡಿ. ಶೆಟ್ಟಿ, ಪ್ರೀತಂ ಕುಮಾರ್‌ ದಂಪತಿಗೆ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಶ್ರೀಪಾದರ ಅನುಗ್ರಹಿಸಿದರು.

ವಿ. ಪರಿಷತ್‌ ಸದಸ್ಯ ಬೋಜೇಗೌಡ, ಸು. ಕೋ. ಹಿರಿಯ ವಕೀಲ ಬಾಲರಾಜ್‌, ಗುಜರಾತ್‌ನ ಮಾಜಿ ಸಂಸದ ಸಾಗರ್‌ ರಾಯ್ಕರ್‌, ಬೆಂಗ ಳೂರಿನ ಆರೆಸ್ಸೆಸ್‌ನ ಹಿರಿಯರಾದ ಮಿಲಿಂದ್‌ ಗೋಖಲೆ, ಮುಂಬಯಿ ಉದ್ಯಮಿ ಗುರುಪ್ರಸಾದ್‌, ಅರುಣ್‌ ಕುಮಾರ್‌ ಉಪಸ್ಥಿತರಿದ್ದರು. ಶ್ರೀಮಠದ ರಮೇಶ್‌ ಭಟ್‌ ಸ್ವಾಗತಿಸಿ, ಡಾ| ಗೋಪಾಲಾಚಾರ್ಯ ನಿರೂಪಿಸಿದರು.

ಭಂಡತನದ ಚರ್ಚೆ ಕೇಳಲಷ್ಟೇ ಚಂದ, ಅನುಷ್ಠಾನ ಅಸಾಧ್ಯ
ಕಿರುತೆರೆ ನಿರ್ದೇಶಕ ಎಸ್‌.ಎನ್‌. ಸೇತುರಾಮ್‌ ಅವರು ಕೃಷ್ಣನ ವ್ಯಕ್ತಿತ್ವದ ಪ್ರಸ್ತುತತೆ ಬಗ್ಗೆ ಉಪನ್ಯಾಸ ನೀಡಿ, ಹಿಂದೂ ಧರ್ಮ, ದೇವತೆಗಳ ವಿಷಯದಲ್ಲಿ ಭಂಡತನದ ಚರ್ಚೆ ಕೇಳಲು ಚೆನ್ನಾಗಿರುತ್ತದೆ. ಅದರಂತೆ ಬದುಕಲು ಕಷ್ಟ. ಅದು ಕೇವಲ ಮನೋರಂಜನೆ ಅಷ್ಟೆ. ಭಾರತದ ಸಂಪತ್ತನ್ನು ಹುಡುಕಿ ವಿದೇಶಿಗರು ಇಲ್ಲಿಗೆ ಬಂದಿದ್ದರು. ನಮ್ಮಲ್ಲಿ ಎಲ್ಲ ಸಂಪತ್ತು ಇದ್ದುದರಿಂದ ನಾವು ಎಲ್ಲಿಗೂ ಹೋಗಿಲ್ಲ. ಆದರೆ ಇಲ್ಲಿಗೆ ಬಂದರು ನಮ್ಮಲ್ಲಿ ನಾವೇ ಹೊರಗಿನವರು ಎಂಬ ಭಾವ ತುಂಬಿ ಹೋಗಿದ್ದರಿಂದ ಪೂರ್ವಜರ ರೇಖೆಯನ್ನು ಮರೆತಿದ್ದೇವೆ ಎಂದು ವಿಶ್ಲೇಷಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.