Gujarat:ಬಿರುಸಿನ ಮಳೆಗೆ 3 ಮಂದಿ ಸಾವು
Team Udayavani, Aug 27, 2024, 1:38 AM IST
ಅಹ್ಮದಾಬಾದ್: ಗುಜರಾತ್ನ ಹಲವು ಭಾಗಗಳಲ್ಲಿ ಸೋಮವಾರ ಭಾರೀ ಮಳೆಯಾಗಿದೆ. ಪ್ರವಾಹ ಮತ್ತು ಮಳೆ ಪ್ರಕೋಪಕ್ಕೆ ಮೂವರು ಅಸು ನೀಗಿದ್ದಾರೆ. ಅಹ್ಮದಾಬಾದ್, ಗಾಂಧಿ ನಗರದ ಪ್ರಮುಖ ಭಾಗಗಳಲ್ಲಿನ ರಸ್ತೆಗಳಿಗೆ ನೀರು ನುಗ್ಗಿ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ವಲ್ಸಾಡ್ ಮತ್ತು ನವಸಾರಿ ಜಿಲ್ಲೆಗಳಲ್ಲಿ ನೂರಾರು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಗುಜರಾತ್ನ ಮೊರ್ಬಿ ಜಿಲ್ಲೆಯಲ್ಲಿ 7 ಮಂದಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಶೋಧ ಕಾರ್ಯ ಆರಂಭಿಸಿ ದ್ದಾರೆ. ಹಲವು ಸ್ಥಳಗಳಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇದೇ ವೇಳೆ, ಗುಜರಾತ್ನ ಕಛ, ವಡೋದರಾ, ನವಸಾರಿ, ವಲ್ಸಾಡ್, ಅಮ್ರೇಲಿ ಮತ್ತು ಭಾವಾನಗರಗಳಲ್ಲಿ ಮಂಗಳವಾರದ ವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇನ್ನೊಂದೆಡೆ, ಉತ್ತರಾಖಂಡ ದಲ್ಲಿ ಗೌರಿಕುಂಡದಿಂದ ಕೇದಾರನಾಥಕ್ಕೆ ಚಾರಣ ತೆರಳುವ ಮಾರ್ಗವನ್ನು ತೆರೆಯಲಾಗಿದೆ. 26 ದಿನಗಳಿಂದ ಮಳೆಯ ಕಾರಣದಿಂದ ಅದನ್ನು ಮುಚ್ಚಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.