Modi ಮಾತಿಗೂ ಬಗ್ಗದೆ ರಷ್ಯಾ-ಉಕ್ರೇನ್ ಯುದ್ಧ!
ಉಕ್ರೇನ್ ಮೇಲೆ ರಷ್ಯಾ 100 ಕ್ಷಿಪಣಿ ದಾಳಿ: ಝೆಲೆನ್ಸ್ಕಿ
Team Udayavani, Aug 27, 2024, 6:55 AM IST
ಕೀವ್: ಉಕ್ರೇನ್ ಮತ್ತು ರಷ್ಯಾ ನಡುವೆ ಸೇನಾ ಸಂಘರ್ಷ ತೀವ್ರಗೊಂಡಿದ್ದು, ರವಿವಾರ ರಾತ್ರಿ ರಷ್ಯಾ 100ಕ್ಕೂ ಅಧಿಕ ಡ್ರೋನ್ ದಾಳಿ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಹೇಳಿದ್ದಾರೆ.
“”ಈಗ ಯುದ್ಧದ ಕಾಲವಲ್ಲ. ಏನು ಸಮಸ್ಯೆಗಳಿದ್ದರೂ, ರಷ್ಯಾ ಮತ್ತು ಉಕ್ರೇನ್ ನಾಯಕರು ಪರಸ್ಪರ ಕುಳಿತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು” ಎಂದು ಉಕ್ರೇನ್ಗೆ ಭೇಟಿ ಪ್ರಧಾನಿ ನರೇಂದ್ರ ಮೋದಿಯವರು ಆ ದೇಶದ ಅಧ್ಯಕ್ಷ ವೊಲೊದಮಿರ್ ಝೆಲೆನ್ಸ್ಕಿ ಅವರಿಗೆ ಮನವರಿಕೆ ಮಾಡಿ ವಾಪಸಾದ ಬೆನ್ನಲ್ಲಿಯೇ ಈ ಬೆಳವಣಿಗೆಗಳು ನಡೆದಿವೆ.
ರಷ್ಯಾ ನಡೆಸಿದ ದಾಳಿಗೆ ಕೆಲವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ರಷ್ಯಾ ನಡೆಸಿದ ದಾಳಿಯು ಉಕ್ರೇನ್ನ ಇಂಧನ ವಲಯಕ್ಕೆ ಭಾರೀ ನಷ್ಟವನ್ನುಂಟು ಮಾಡಿದೆ ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ. ಪಶ್ಚಿಮ ಉಕ್ರೇನ್ನ ಕಿವ್ನಿಂದ ಒಡೆಸಾ ಮತ್ತು ಖಾರ್ಕಿವ್ ಪ್ರದೇಶದಲ್ಲಿನ ಬಹುತೇಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ರಷ್ಯಾ ನದಾಳಿ ನಡೆಸಿದೆ ಎಂದು ಅವರು ಹೇಳಿದ್ದಾರೆ. ಸೋಮವಾರವೂ ರಷ್ಯಾ ಉಕ್ರೇನ್ ಮೇಲೆ ದಾಳಿಯನ್ನು ಮುಂದುವರಿಸಿದೆ. ಈ ವೇಳೆ ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
9/11 ದಾಳಿ ಮಾದರಿಯ ಡ್ರೋನ್ ದಾಳಿ: ನೆಟ್ಟಿಗರು
ಈ ಮಧ್ಯೆ, ರಷ್ಯಾದ ಪ್ರಧಾನ ನಗರವಾಗಿರುವ ಸರಟೋವ್ ಮೇಲೆ ಉಕ್ರೇನ್ ಡ್ರೋನ್ ದಾಳಿ ನಡೆಸಿದೆ. ಈ ಪೈಕಿ ಒಂದು ಡ್ರೋನ್ ಆ ನಗರದ ಅತಿ ಎತ್ತರದ ಕಟ್ಟಡಕ್ಕೆ ಅಪ್ಪಳಿಸಿದೆ. ಈ ಕುರಿತು ವೀಡಿಯೋ ವೈರಲ್ ಆಗಿದೆ. ನೆಟ್ಟಿಗರೆಲ್ಲರೂ ಇದೊಂದು 9/11 ಮಾದರಿಯ ದಾಳಿಯನ್ನು ಪ್ರತಿಬಿಂಬಿಸುವಂತೆ ಇದೆ ಎಂದು ಅಚ್ಚರಿಪಟ್ಟಿ ದ್ದಾರೆ. 2001ರಲ್ಲಿ ಅಲ್-ಖೈದಾ ಉಗ್ರರು ನ್ಯೂಯಾರ್ಕ್ನಲ್ಲಿರುವ ವಲ್ಡ್ ಟ್ರೇಡ್ ಸೆಂಟರ್ಗೆ ವಿಮಾನ ಢಿಕ್ಕಿ ಹೊಡೆಸಿ ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು
Pagers explode: ಲೆಬನಾನ್ನಲ್ಲಿ ಸ್ಫೋಟ: 8 ಮಂದಿ ಮೃತ್ಯು, 2,700ಕ್ಕೂ ಅಧಿಕ ಮಂದಿಗೆ ಗಾಯ
Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್ ತಡೆ: ವಿಶ್ವಸಂಸ್ಥೆ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.