Parappana Agrahara Jail: ಹಣ ಕೊಟ್ಟರೆ ಜೈಲಿನಲ್ಲಿ ಸಿಗರೆಟ್,ಎಣ್ಣೆ,ಡ್ರಗ್ಸ್ ಸಿಗುತ್ತೆ
Team Udayavani, Aug 27, 2024, 11:02 AM IST
ಬೆಂಗಳೂರು: ದರ್ಶನ್ಗೆ ವಿಶೇಷ ಆದ್ಯತೆ ನೀಡಿದ ಬೆನ್ನಲ್ಲೇ ಪರಪ್ಪನ ಅಗ್ರಹಾರದಲ್ಲಿ ನಡೆಯುವ ಅಕ್ರಮಗಳು ಬಯಲಾಗುತ್ತಿದ್ದು, ಪ್ರತಿಯೊಂದು ಸೌಲಭ್ಯಕ್ಕೂ ಜೈಲಿನ ಅಧಿಕಾರಿಗಳ ದರ ನಿಗದಿ ಪಡಿಸಿ ದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಿಸಿ ನೀರು, ಎಣ್ಣೆ, ಸಿಗರೆಟು, ಸ್ಪೆಷನ್ ಊಟಕ್ಕೆ ಒಂದೊಂದು ದರ ನಿಗದಿ ಪಡಿಸಲಾಗಿದೆ. ಇನ್ನು ಪ್ರಮುಖವಾಗಿ ಜೈಲಿನಲ್ಲಿ ವಸ್ತುಗಳು ಪೂರೈಕೆ ಮಾಡಲು ಒಂದು ತಂಡವೇ ಇದೆ ಎಂದು ಹೇಳಲಾಗಿದೆ.
ಜೈಲಿನಿಂದ ಬಿಡುಗಡೆಯಾದ ಕೈದಿಯೊಬ್ಬರು ಕೆಲವೊಂದು ಅಂಶಗಳನ್ನು ಮಾಧ್ಯಮಗಳ ಮುಂದೆ ಹೊರಹಾಕಿದ್ದಾರೆ. ಜೈಲಿನಲ್ಲಿ ವಸ್ತುಗಳ ಪೂರೈಕೆ ಮಾಡಲು ಪ್ರತ್ಯೇಕ ತಂಡ ಇದೆ. 10 ವರ್ಷಕ್ಕಿಂತ ಹೆಚ್ಚು ಕಾಲ ಇರುವ ಕೈದಿಗಳೇ ಈ ತಂಡದ ಸದಸ್ಯರಾಗಿದ್ದಾರೆ. ಕೈದಿಗಳಿಗೆ ಏನು ನೀಡಬೇಕೆಂದು ಕೈದಿಗಳಿಂದಲೇ ನಿರ್ಧಾರ ಮಾಡಲಾಗುತ್ತದೆ. ಈ ತಂಡ ಸೇರುವ ಸ್ವಯಂಸೇವಕ ಹಿರಿಯ ಕೈದಿಗಳಾಗಿದ್ದು, ಹಣ ಕೊಡುವ ಕೈದಿಗಳಿಗೆ ಈ ತಂಡ ಸವಲತ್ತು ನೀಡುತ್ತದೆ.
ಸಿಗರೆಟ್, ಊಟ, ಎಣ್ಣೆ, ಫೋನ್, ಡ್ರಗ್ಸ್ ಹೀಗೆ ಪ್ರತಿಯೊಂದಕ್ಕೂ ದರ ನಿಗದಿ ಪಡಿಸಿದ್ದಾರೆ. ಕೈದಿಗಳಿಂದ ಹಣ ಸಂಗ್ರಹಿಸುವ ಈ ತಂಡ ಕೈದಿಗಳ ಭೇಟಿಗೆ ಆಗಮಿಸುವ್ಯಕ್ತಿಗಳಿಂದ ಫೋನ್ ಪೇ, ಬ್ಯಾಂಕ್ಗಳಿಂದ ಹಣ ವರ್ಗಾಯಿಸಿಕೊಳ್ಳುತ್ತಾರೆ. ನಾನು ಸೌಲಭ್ಯ ಪಡೆಯಲು ಸುಮಾರು 1.30 ಲಕ್ಷ ರೂ. ಖರ್ಚು ಮಾಡಿದ್ದೆ. ಸೆಂಟ್ರಲ್ ಜೈಲಿನ ದಂಧೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಜೈಲಿನಲ್ಲಿ ಬಡ್ಡಿ ದಂಧೆ ನಡೆಯುತ್ತದೆ. ಸಾವಿರಾರು ರೂ. ಕೊಟ್ಟರೆ ಹುಡುಗಿಯನ್ನೂ ಸಹ ಕಳುಹಿಸುತ್ತಾರೆ ಎಂದು ಸ್ಫೋಟಕ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.