Uchila: ರಾಷ್ಟ್ರೀಯ ಹೆದ್ದಾರಿಯಲ್ಲಿ ಉರಿಯುತ್ತಿಲ್ಲ ಬೀದಿದೀಪ

ಎಸ್‌ಡಿಪಿಐ ಮೊಬೈಲ್‌ ಟಾರ್ಚ್‌ ಪ್ರತಿಭಟನೆ

Team Udayavani, Aug 27, 2024, 1:12 PM IST

Uchila: ರಾಷ್ಟ್ರೀಯ ಹೆದ್ದಾರಿಯಲ್ಲಿ ಉರಿಯುತ್ತಿಲ್ಲ ಬೀದಿದೀಪ

ಕಾಪು: ರಾಷ್ಟ್ರಿಯ ಹೆದ್ದಾರಿ 66ರ ಉಚ್ಚಿಲದಲ್ಲಿ ಅಳವಡಿಸಿರುವ ದಾರಿದೀಪಗಳು ಕಳೆದ ಹಲವು ತಿಂಗಳುಗಳಿಂದ ಉರಿಯದೇ ಇರುವುದನ್ನು ಖಂಡಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ಉಚ್ಚಿಲ ಗ್ರಾಮ ಸಮಿತಿಯ ವತಿಯಿಂದ ಉಚ್ಚಿಲ ಪೇಟೆಯಲ್ಲಿ ಡಿವೈಡರ್‌ ಮಧ್ಯದಲ್ಲಿ ಮೊಬೈಲ್‌ ಟಾರ್ಚ್‌ ಪ್ರದರ್ಶಿಸಿ ಶನಿವಾರ ರಾತ್ರಿ ವಿನೂತನ ಶೈಲಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಎಸ್‌.ಡಿ.ಪಿ.ಐ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಹನೀಫ್‌ ಮೂಳೂರು ಮಾತನಾಡಿ, ರಾಷ್ಟ್ರಿಯ ಹೆದ್ದಾರಿಯ 66ರಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಡಿವೈಡರ್‌ಗಳಲ್ಲಿ ಅಳವಡಿಸಿರುವ ಲೈಟ್‌ ಗಳು ಉರಿಯದೇ ಸಾರ್ವಜನಿಕರಿಗೆ ರಾತ್ರಿ ಹೊತ್ತು ರಸ್ತೆ ದಾಟಲು ಕಷ್ಟಕರವಾಗಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟವರಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಒಂದು ತಿಂಗಳೊಳಗಾಗಿ ಹೆದ್ದಾರಿ ಪ್ರಾಧಿಕಾರ ದಾರಿದೀಪ ಉರಿಯುವಂತೆ ಮಾಡದೆ ಇದ್ದಲ್ಲಿ ಸಾವರ್ಜನಿಕರ ಸಹಕಾರದೊಂದಿಗೆ ಉಗ್ರ ರೀತಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಎಸ್‌.ಡಿ.ಪಿ.ಐ ಜಿಲ್ಲಾ ಕಾರ್ಯದರ್ಶಿ ಅಬ್ದುಲ್‌ ಮಜೀದ್‌ ಮಾತನಾಡಿ, ದಾರಿದೀಪಗಳು ಉರಿಯದಿದ್ದಲ್ಲಿ ಕಂಬಗಳ ಅಗತ್ಯವಿರುವುದಿಲ್ಲ, ಕಾಮಗಾರಿಯ ಗುತ್ತಿಗೆ ಪಡೆದಿರುವ ನವಯುಗ ಕಂಪೆನಿ ತತ್‌ಕ್ಷಣವೇ ಸ್ಪಂಧಿಸಿ ದಾರಿದೀಪಗಳನ್ನು ಉರಿಯುವಂತೆ ಮಾಡಬೇಕು. ಇಲ್ಲದಿದ್ದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಕಂಬಗಳನ್ನೇ ಕಿತ್ತು ಎಸೆಯುವುದಾಗಿ ಎಚ್ಚರಿಸಿದರು.

ಎಸ್‌.ಡಿ.ಪಿ.ಐ ಉಚ್ಚಿಲ ಗ್ರಾಮ ಸಮಿತಿ ಅಧ್ಯಕ್ಷ ಹಮೀದ್‌ ಉಚ್ಚಿಲ, ಬಡಾ ಗ್ರಾ.ಪಂ. ಪಂಚಾಯತ್‌ ಸದಸ್ಯರಾದ ಅಬ್ದುಲ್‌ ರಜಾಕ್‌, ರಫೀಕ್‌ ದೀವು, ಆಸೀಫ್‌ ವೈ.ಸಿ., ತವಕ್ಕಲ್‌ ಯಂಗ್‌ ಮೆನ್ಸ್‌ ಅಸೋಸಿಯೇಶನ್‌ನ ಅಧ್ಯಕ್ಷ ಅಬ್ದುಲ್‌ ರಜಾಕ್‌, ಉಚ್ಚಿಲ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಸಿರಾಜ್‌ ಎನ್‌.ಎಚ್‌., ನಿಸಾರ್‌ ಮೂಲ್ಕಿ ಉಪಸ್ಥಿತರಿದ್ದರು.

ಉದಯವಾಣಿ ಸುದಿನದಲ್ಲಿ ಸಚಿತ್ರ ವರದಿ ಎರ್ಮಾಳು – ಉಚ್ಚಿಲ – ಮೂಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ರಸ್ತೆಯಲ್ಲಿ 91 ಬೀದಿ ದೀಪಗಳಿದ್ದರೂ ಅದರಲ್ಲಿ ಒಂದೂ ಉರಿಯುತ್ತಿಲ್ಲ ಎನ್ನುವುದರ ಬಗ್ಗೆ ಅ.18ರ ಉದಯವಾಣಿ ಸುದಿನದಲ್ಲಿ ಸಚಿತ್ರ ವರದಿ, ಸಮಸ್ಯೆಗಳ ಸರಮಾಲೆಯನ್ನು ಬಿಚ್ಚಿಡಲಾಗಿತ್ತು. ಈ ಬಗ್ಗೆ ಉಚ್ಚಿಲ ಬಡಾ ಗ್ರಾ.ಪಂ., ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅವರು ಮತ್ತೂಮ್ಮೆ ಹೆದ್ದಾರಿ ಇಲಾಖೆ, ಪ್ರಾಧಿಕಾರ ಮತ್ತು ಜಿಲ್ಲಾಡಳಿತಕ್ಕೆ ಪತ್ರ ಬರೆದು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.