LSG; ಗೋಯೆಂಕಾ ಭೇಟಿಯಾದ ರಾಹುಲ್;‌ ಯಾವುದೇ ಭರವಸೆ ನೀಡದ ಎಲ್‌ಎಸ್‌ಜಿ ಮಾಲಕ


Team Udayavani, Aug 27, 2024, 4:14 PM IST

LSG; ಗೋಯೆಂಕಾ ಭೇಟಿಯಾದ ರಾಹುಲ್;‌ ಯಾವುದೇ ಭರವಸೆ ನೀಡದ ಎಲ್‌ಎಸ್‌ಜಿ ಮಾಲಕ

ಮುಂಬೈ: ದಿನಕಳೆದಂತೆ ಐಪಿಎಲ್‌ ಮೆಗಾ ಹರಾಜಿನ (IPL Mega Auction) ಬಗ್ಗೆ ಕುತೂಹಲ ಹೆಚ್ಚಾಗುತ್ತಲೇ ಹೋಗುತ್ತಿದೆ. ಯಾವೆಲ್ಲಾ ಆಟಗಾರರನ್ನು ತಂಡಗಳು ಉಳಿಸಿಕೊಳ್ಳಲಿದೆ, ಯಾರನ್ನೆಲ್ಲಾ ಕೈಬಿಡಲಿದೆ ಎನ್ನುವ ಕುತೂಹಲ, ಊಹಾಪೋಹಗಳು ಹೆಚ್ಚುತ್ತಿದೆ. ಸ್ಟಾರ್‌ ಆಟಗಾರ, ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡದ ನಾಯಕ ಕೆಎಲ್‌ ರಾಹುಲ್‌ (KL Rahul) ಅವರು ತಂಡ ತೊರೆಯಲಿದ್ದಾರೆ ಎಂಬ ವರದಿ ಕಳೆದ ಸೀಸನ್‌ ನಿಂದಲೇ ಬರುತ್ತಿದೆ. ಇದೀಗ ಸ್ವತಃ ರಾಹುಲ್‌ ಅದಕ್ಕೆ ಅಂತ್ಯ ಹಾಡುವ ಪ್ರಯತ್ನ ಮಾಡುತ್ತಿದ್ದಾರೆ.

ಕಳೆದ ಸೀಸನ್‌ ನ ಕೊನೆಯಲ್ಲಿ ಎಲ್‌ಎಸ್‌ ಜಿ ಹೀನಾಯವಾಗಿ ಪಂದ್ಯ ಸೋತ ಬಳಿಕ ಫ್ರಾಂಚೈಸಿ ಮಾಲಕ ಸಂಜೀವ್‌ ಗೋಯೆಂಕಾ (Sanjiv Goenka) ಅವರು ರಾಹುಲ್‌ ರನ್ನು ತರಾಟೆಗೆ ತೆಗೆದುಕೊಂಡಿದ್ದರು. ಮೈದಾನದಲ್ಲಿ ಕ್ಯಾಮರಾ ಕಣ್ಣಿಗೆ ಸೆರೆಯಾಗುವಂತೆ ಈ ಪ್ರಸಂಗ ನಡೆದಿತ್ತು. ಹೀಗಾಗಿ ರಾಹುಲ್‌ ತಂಡ ತೊರೆಯಲಿದ್ದಾರೆ ಎನ್ನಲಾಗಿತ್ತು.

ಆದರೆ ಇದೀಗ ಸ್ವತಃ ರಾಹುಲ್‌ ಮತ್ತು ಸಂಜೀವ್‌ ಗೋಯೆಂಕಾ ಭೇಟಿಯಾಗಿ ಈ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಕ್ರಿಕ್‌ ಬಝ್‌ ವರದಿಯ ಪ್ರಕಾರ, ಮಾಲಿಕ ಮತ್ತು ಕಪ್ತಾನನ ನಡುವೆ ಸಭೆಯು ಒಂದು ಗಂಟೆಗಳ ಕಾಲ ನಡೆದಿದೆ. ಅಲಿಪೋರ್‌ ನಲ್ಲಿ ನಡೆದ ಈ ಮೀಟಿಂಗ್‌ ನಲ್ಲಿ ಮುಂದಿನ ಸೀಸನ್‌ ಗಾಗಿ ರಾಹುಲ್ ಮತ್ತು ಇತತ ಉಳಿಸಿಕೊಳ್ಳುವ ಆಟಗಾರರ ಬಗ್ಗೆ ಚರ್ಚೆ ನಡೆಸಲಾಗಿದೆ.

ಲಕ್ನೋ ತಂಡದಲ್ಲಿಯೇ ಮುಂದುವರಿಯುವ ಬಗ್ಗೆ ರಾಹುಲ್‌ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಫ್ರಾಂಚೈಸಿ ಇದರ ಬಗ್ಗೆ ಯಾವುದೇ ಖಚಿತ ಉತ್ತರ ನೀಡಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

“ಹೌದು, ರಾಹುಲ್ ಕೋಲ್ಕತ್ತಾಗೆ ಬಂದು ಆರ್‌ಪಿಜಿ ಕೇಂದ್ರ ಕಚೇರಿಯಲ್ಲಿ ಡಾ ಗೋಯೆಂಕಾ ಅವರನ್ನು ಭೇಟಿ ಮಾಡಿದರು. ತಾನು ತಂಡದಲ್ಲಿ ಉಳಿದುಕೊಳ್ಳಲು ಬಯಸುತ್ತಾರೆ ಎಂದು ರಾಹುಲ್‌ ಸ್ಪಷ್ಟವಾಗಿ ಹೇಳಿದ್ದಾರೆ. ಆದಾಗ್ಯೂ, ಬಿಸಿಸಿಐ ರೆಟೆನ್ಶನ್‌ ನೀತಿಯನ್ನು ಪ್ರಕಟ ಮಾಡುವವರೆಗೆ, ಎಲ್‌ಎಸ್‌ಜಿ ಆಡಳಿತವು ತಮ್ಮ ಯೋಜನೆಗಳನ್ನು ಹೊರಹಾಕಲು ಬಯಸುವುದಿಲ್ಲ” ಎಂದು ಐಪಿಎಲ್ ಆಡಳಿತ ಮಂಡಳಿಯ ಸದಸ್ಯರೊಬ್ಬರ ಹೇಳಿಕೆಯನ್ನು ಪಿಟಿಐ ವರದಿ ಮಾಡಿದೆ.

ಮೆಂಟರ್‌ ಜಾಗಕ್ಕೆ ಜಹೀರ್?‌

ಕ್ರಿಕ್‌ ಬಝ್‌ ವರದಿಯ ಪ್ರಕಾರ ಟೀಂ ಇಂಡಿಯಾದ ಮಾಜಿ ಬೌಲರ್‌ ಜಹೀರ್‌ ಖಾನ್‌ ಅವರು ಲಕ್ನೋ ಸೂಪರ್‌ ಜೈಂಟ್ಸ್‌ ಕೋಚಿಂಗ್‌ ಪ್ಯಾನೆಲ್‌ ಸೇರಲಿದ್ದಾರೆ. ಎಲ್‌ ಎಸ್‌ ಜಿ ತಂಡದ ಮೆಂಟರ್‌ ಮತ್ತು ಬೌಲಿಂಗ್‌ ಕೋಚ್‌ ಆಗಿ ಜಹೀರ್‌ ಸೇರುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

ಎಲ್‌ ಎಸ್‌ ಜಿ ಕೋಚಿಂಗ್‌ ಯುನಿಟ್‌ ನಲ್ಲಿ ಜಸ್ಟಿನ್‌ ಲ್ಯಾಂಗರ್‌, ಆಡಂ ವೋಗ್ಸ್‌, ಲ್ಯಾನ್ಸ್‌ ಕ್ಲೂಸ್ನರ್‌ ಮತ್ತು ಜಾಂಟಿ ರೋಡ್ಸ್‌ ಅವರಿದ್ದಾರೆ.

ಟಾಪ್ ನ್ಯೂಸ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

FIH: Harman, Sreejesh in award competition

FIH: ಪ್ರಶಸ್ತಿ ಸ್ಪರ್ಧೆಯಲ್ಲಿ ಹರ್ಮನ್‌, ಶ್ರೀಜೇಶ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.