ಕೃಷ್ಣೆಯ ಒಡಲಲ್ಲಿ ಮೊದಲ ಬಾರಿಗೆ ಆರತಿ- ಹಿಪ್ಪರಗಿಯಲ್ಲಿ ಹಿರಿ ಹಿರಿ ಹಿಗ್ಗಿದ ಕೃಷ್ಣೆ


Team Udayavani, Aug 27, 2024, 5:07 PM IST

ಕೃಷ್ಣೆಯ ಒಡಲಲ್ಲಿ ಮೊದಲ ಬಾರಿಗೆ ಆರತಿ- ಹಿಪ್ಪರಗಿಯಲ್ಲಿ ಹಿರಿ ಹಿರಿ ಹಿಗ್ಗಿದ ಕೃಷ್ಣೆ

■ ಉದಯವಾಣಿ ಸಮಾಚಾರ
ಬಾಗಲಕೋಟೆ: ಉತ್ತರ ಭಾರತದ ಗಂಗಾ ನದಿಗೆ ನಡೆಯುವ ಗಂಗಾರತಿ ಮಾದರಿಯಲ್ಲಿ ಕೃಷ್ಣಾ ನದಿಗೆ ಇದೇ ಮೊದಲ ಬಾರಿಗೆ ಕೃಷ್ಣಾರತಿ ಸಂಭ್ರಮದಿಂದ ನೆರವೇರಿತು. ವಾರಣಾಸಿಯ ಗಂಗಾರತಿ ತಂಡ ಹಾಗೂ ಮೈಸೂರು-ನಂಜನಗೂಡಿನಲ್ಲಿ ಕಾವೇರಿ ಆರತಿ ನಡೆಸುವ ಯುವಾ ಬ್ರಿಗೇಡ್‌ನ‌ ತಂಡದ ಸದಸ್ಯರು ಸುಮಾರು ಒಂದು ಗಂಟೆಗಳ ಕಾಲ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮೈದುಂಬಿ ಹರಿಯುತ್ತಿರುವ ಕೃಷ್ಣೆಯ ಒಡಲಿಗೆ ಆರತಿ ಬೆಳಗಿದರು.

ವಾರಣಾಸಿಯಿಂದ ಆಗಮಿಸಿದ್ದ ಆಚಾರ್ಯ ರಣಧೀರ, ಅಮೀತ ಪಾಂಡೆ, ಸತ್ಯಂ ಮಿಶ್ರಾ, ಗೋವಿಂದ ತಿವಾರಿ, ಪ್ರಿನ್ಸ್‌ ಮಿಶ್ರಾ, ಹನುಮಾನಜಿ ಹಾಗೂ ನಂಜನಗೂಡಿನ ಯುವಾ ಬ್ರಿಗೇಡ್‌ನ‌ ಗಂಗಾರತಿ ತಂಡದ ಚಂದ್ರು, ನಿತಿನ್‌ ಮುಂತಾದವರನ್ನು ಒಳಗೊಂಡ ತಂಡ ಕೃಷ್ಣಾರತಿ ನೆರವೇರಿಸಿತು.

ಕಣ್ತುಂಬಿಕೊಂಡ ರೈತರು: ಈ ಭಾಗದ ರೈತರ ಜೀವನಾಡಿ ಕೃಷ್ಣೆಗೆ ಇದೇ ಮೊದಲ ಬಾರಿಗೆ ಸಂಭ್ರಮದಿಂದ ನಡೆದ ಕೃಷ್ಣಾರತಿ ವೀಕ್ಷಿಸಲು ಬಾಗಲಕೋಟೆ-ವಿಜಯಪುರ ಅವಳಿ ಜಿಲ್ಲೆಯ ನದಿತೀರದ ವಿವಿಧ ಗ್ರಾಮಗಳ ರೈತರು ಕುಟುಂಬ ಸಮೇತ ಆಗಮಿಸಿದ್ದರು. ರೈತ ಮಹಿಳೆಯರು, ಕೃಷ್ಣೆಯ ಒಡಲಿಗೆ ಪೂಜೆ ಸಲ್ಲಿಸಿದರು. ಬಳಿಕ ಪರಸ್ಪರ ಉಡಿ ತುಂಬಿದರು. ಇದಾದ ಬಳಿಕ ನದಿಯ ಒಡಲಿಗೆ ಹೋಳಿಗೆ ಸಹಿತ ತರಹೇವಾರಿ ಸಿಹಿ ಪದಾರ್ಥಗಳನ್ನು ಅರ್ಪಿಸಿದರು.

ಪ್ರತಿ ವರ್ಷ ಕೃಷ್ಣಾರತಿ: ಇದಕ್ಕೂ ಮುನ್ನ ಹಿಪ್ಪರಗಿಯ ಸಂಗಮನಾಥ ದೇವಾಲಯದ ಆವರಣದಲ್ಲಿ ಕೃಷ್ಣೆಯ ನೀರಾವರಿ ಯೋಜನೆಗಳು, ಕೃಷ್ಣೆಗೆ ಸಾಂಸ್ಕೃತಿಕ ವೈಭವದ ಕೊರಗು ಕುರಿತ ಚಿಂತನ-ಮಂಥನ ನಡೆಯಿತು. ಈ ವೇಳೆ, ಉತ್ತರಭಾರತದ ಗಂಗಾ ನದಿಗೆ ನಡೆಯುವ ಗಂಗಾರತಿ ಮಾದರಿಯಲ್ಲಿ ಕೃಷ್ಣಾರತಿಯೂ ನಿರಂತರವಾಗಿ ನಡೆಯಬೇಕು.  ಅದಕ್ಕಾಗಿ ಕೃಷ್ಣಾರತಿ ಸೇವಾ ಸಮಿತಿಯನ್ನು ಅಧಿಕೃತವಾಗಿ ರಚಿಸಿ, ಅದಕ್ಕೆ ರೈತರೇ ದೇಣಿಗೆ ನೀಡಲು ನಿರ್ಧರಿಸಿದರು. ಇದೇ ವೇಳೆ ಹಿಪ್ಪರಗಿಯ ರೈತ ಸೋಮನಾಥಗೌಡ ಪಾಟೀಲ 50 ಸಾವಿರ ರೂ. ದೇಣಿಗೆ ನೀಡಿದರು.

ಗಣ್ಯರು ಭಾಗಿ: ಕೃಷ್ಣ ಜನ್ಮಾಷ್ಟಮಿ ಹಾಗೂ ಮಾಜಿ ಸಚಿವ ಮುರಗೇಶ ನಿರಾಣಿ ಅವರ 59ನೇ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಕೃಷ್ಣಾರತಿಯ ವೀಕ್ಷಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ತೇರದಾಳ ಶಾಸಕ ಸಿದ್ದು ಸವದಿ, ಹಿಪ್ಪರಗಿಯ ಪ್ರಭು ಮಹಾರಾಜರು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ನಿಡಸೋಸಿಯ ನಿಜಲಿಂಗೇಶ್ವರ ಸ್ವಾಮೀಜಿ, ಆಲಗೂರಿನ ಪಂಚಮಸಾಲಿ ಪೀಠದ ಡಾ|ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಹುಲ್ಯಾಳದ ಹರ್ಷಾನಂದ ಸ್ವಾಮೀಜಿ, ಕುಂಚನೂರು ಕಮರಿ ಮಠದ ಶ್ರೀಗಳು ಸೇರಿದಂತೆ ಸಹಸ್ರಾರು ಜನರು ಪಾಲ್ಗೊಂಡಿದ್ದರು.

ಕೃಷ್ಣೆಗೆ ಕಲ್ಪನೆಗೂ ಮೀರಿ ಅನ್ಯಾಯವಾಗಿದೆ. ನಮ್ಮ ಜೀವನದಿ ಕೃಷ್ಣೆಗೆ ಎಲ್ಲ ರೀತಿಯ ಗೌರವ ದೊರೆಯಬೇಕು. ಸರ್ಕಾರ ಕೃಷ್ಣಾರತಿ ನಡೆಸಬೇಕು. ಇಲ್ಲದಿದ್ದರೆ ರೈತರೊಂದಿಗೆ ನಾವೇ ಈ ಸಂಭ್ರಮ ನಡೆಸುತ್ತೇವೆ. ಅಲ್ಲದೇ ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಭಾಗದ ಕಾಳಿ ನದಿ ಸಹಿತ ಮೂರು ನದಿ ಜೋಡಣೆ ಯೋಜನೆಗಳನ್ನು ಜಾರಿಗೊಳಿಸಬೇಕು.
*ಸಂಗಮೇಶ ನಿರಾಣಿ, ಅಧ್ಯಕ್ಷರು,
ಉತ್ತರಕರ್ನಾಟಕ ನೀರಾವರಿ ಹೋರಾಟ ಸಮಿತಿ

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.