Women’s T20 World Cup: ಭಾರತ ಬಳಗವನ್ನು ಪ್ರಕಟಿಸಿದ ಬಿಸಿಸಿಐ; ಸ್ಥಾನ ಪಡೆದ ಶ್ರೇಯಾಂಕ


Team Udayavani, Aug 27, 2024, 5:55 PM IST

bcci announces squad for women t20 world cup

ಮುಂಬೈ: ಕೆಲವೇ ವಾರಗಳಲ್ಲಿ ಆರಂಭವಾಗಲಿರುವ ವನಿತಾ ಟಿ20 ವಿಶ್ವಕಪ್‌ ಗೆ (Women’s T20 World Cup) ಭಾರತ ತಂಡವನ್ನು (BCCI)  ಪ್ರಕಟ ಮಾಡಲಾಗಿದೆ. ಹಾಲಿ ಚಾಂಪಿಯನ್‌ ಆಸ್ಟ್ರೇಲಿಯಾ ತಂಡ ಪ್ರಕಟಿಸಿದ ಬೆನ್ನಲ್ಲೇ ಟ್ರೋಫಿ ಗೆಲ್ಲುವ ಫೇವರೇಟ್‌ ತಂಡಗಳಲ್ಲಿ ಒಂದಾದ ಭಾರತ ತಂಡವನ್ನೂ ಪ್ರಕಟಿಸಲಾಗಿದೆ.

ಮಂಗಳವಾರ (ಆ.27) ಬಿಸಿಸಿಐ 15 ಜನರ ತಂಡವನ್ನು ಪ್ರಕಟಿಸಲಾಗಿದೆ. ಹರ್ಮನ್‌ ಪ್ರೀತ್‌ ಕೌರ್‌ (Harmanpreet Kaur) ಅವರು ನಾಯಕಿಯಾಗಿ ಮುಂದುವರಿದಿದ್ದು, ಸ್ಮೃತಿ ಮಂಧನಾ (Smriti Mandhana)ಉಪ ನಾಯಕಿಯಾಗಿದ್ದಾರೆ.

ಶಫಾಲಿ ವರ್ಮಾ ಮತ್ತು ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ, ಪೂಜಾ ವಸ್ತ್ರಾಕರ್ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯಾಸ್ತಿಕಾ ಭಾಟಿಯಾ ಭಾಗವಹಿಸುವಿಕೆಯು ಫಿಟ್ನೆಸ್ ಮೇಲೆ ಅವಲಂಬಿತವಾಗಿದೆ.

ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಮತ್ತು ರೇಣುಕಾ ಸಿಂಗ್ ಠಾಕೂರ್ ಭಾರತದ ವೇಗದ ಬೌಲಿಂಗ್ ಆಯ್ಕೆಗಳಾಗಿದ್ದರೆ, ಆಶಾ ಶೋಭಾನ, ರಾಧಾ ಯಾದವ್, ಶ್ರೇಯಾಂಕ ಪಾಟೀಲ್ ಮತ್ತು ಸಜನಾ ಸಜೀವನ್ ಸ್ಪಿನ್‌ ವಿಭಾಗದಲ್ಲಿದ್ದಾರೆ. ಮತ್ತೊಂದೆಡೆ, ದಯಾಳನ್ ಹೇಮಲತಾ ಅವರು ಮುಖ್ಯ ತಂಡದಲ್ಲಿ ಬ್ಯಾಕ್ ಅಪ್ ಬ್ಯಾಟರ್ ಆಗಿ ಆಯ್ಕೆಯಾಗಿದ್ದಾರೆ.

ಕನ್ನಡತಿ ಶ್ರೇಯಾಂಕಾ ಪಾಟೀಲ್‌ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಅವರಿಗೂ ಫಿಟ್ನೆಸ್‌ ಮೇಲೆ ಅವಲಂಭಿತವಾಗಿದೆ. ಕಳೆದ ಏಷ್ಯಾ ಕಪ್‌ ಕೂಟದ ಮೊದಲ ಪಂದ್ಯದ ವೇಳೆ ಶ್ರೇಯಾಂಕಾ ಗಾಯಗೊಂಡಿದ್ದರು.

ಈ ಬಾರಿಯ ವನಿತಾ ಟಿ20 ವಿಶ್ವಕಪ್‌ ಯುಎಇ ನಲ್ಲಿ ನಡೆಯಲಿದೆ. ಈ ಮೊದಲು ಕೂಟವು ಬಾಂಗ್ಲಾದೇಶದಲ್ಲಿ ನಡೆಯಬೇಕಿತ್ತು. ಆದರೆ ರಾಜಕೀಯ ಅಶಾಂತಿಯಿಂದಾಗಿ ಪಂದ್ಯಾವಳಿಯನ್ನು ಬಾಂಗ್ಲಾದೇಶದಿಂದ ಸ್ಥಳಾಂತರಿಸಲಾಯಿತು.

ಉಮಾ ಚೆಟ್ರಿ, ತನುಜಾ ಕನ್ವರ್ ಮತ್ತು ಸೈಮಾ ಠಾಕೂರ್ ಪ್ರಯಾಣಿಕ- ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದಾರೆ. ರಾಘ್ವಿ ಬಿಸ್ಟ್ ಮತ್ತು ಪ್ರಿಯಾ ಮಿಶ್ರಾ ಅವರು ಪ್ರಯಾಣಿಸದ ಮೀಸಲು ಆಟಗಾರರಾಗಿದ್ದಾರೆ.

ಇದು ಪಂದ್ಯಾವಳಿಯ ಒಂಬತ್ತನೇ ಆವೃತ್ತಿಯಾಗಿದ್ದು, ಅಕ್ಟೋಬರ್ 3ರಿಂದ 20 ರವರೆಗೆ ನಡೆಯಲಿದೆ. ಭಾರತವು ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾದೊಂದಿಗೆ ಎ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಟಾಪ್ ನ್ಯೂಸ್

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

China Open Badminton: Priyanshu Rajawat out

China Open Badminton: ಪ್ರಿಯಾಂಶು ರಾಜಾವತ್‌ ಹೊರಕ್ಕೆ

FIH: Harman, Sreejesh in award competition

FIH: ಪ್ರಶಸ್ತಿ ಸ್ಪರ್ಧೆಯಲ್ಲಿ ಹರ್ಮನ್‌, ಶ್ರೀಜೇಶ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.