Hair Growth: ಉದ್ದ ಮತ್ತು ಹೊಳಪಿನ ಕೂದಲಿಗೆ ಇವು ಉತ್ತಮ ನೈಸರ್ಗಿಕ ವಿಧಾನಗಳು!

ಆಯುರ್ವೇದ ವಿಧಾನಗಳು ನೂರಾರು ವರ್ಷಗಳಿಂದ ಬಳಕೆಯಲ್ಲಿವೆ.

ಕಾವ್ಯಶ್ರೀ, Aug 27, 2024, 6:02 PM IST

8-hair

ಉದ್ದ ಮತ್ತು ಹೊಳಪುಳ್ಳ ಕೂದಲು ಬಹುತೇಕ ಪ್ರತಿಯೊಬ್ಬ ಮಹಿಳೆಯರು ಬಯಸುತ್ತಾರೆ. ತಲೆ ಕೂದಲು ಉದ್ದವಾಗಿದ್ದರೆ ಸುಂದರವಾಗಿ ಕಾಣುತ್ತದೆ. ಹೆಚ್ಚಿನ ಮಹಿಳೆಯರು ಉದ್ದವಾದ ಮತ್ತು ನುಣುವಾದ ಕೂದಲು ಹೊಂದಬೇಕೆಂದು ಅಪೇಕ್ಷಿಸುತ್ತಾರೆ.

ಕೂದಲ ಬೆಳವಣೆಗೆಗೆ ಆಯುರ್ವೇದ ವಿಧಾನಗಳು ನೂರಾರು ವರ್ಷಗಳಿಂದ ಬಳಕೆಯಲ್ಲಿವೆ. ಅವು ಯಾವುದೇ ರೀತಿಯ ಅಡ್ಡಪರಿಣಾಮಗಳನ್ನು ಹೊಂದಿರುವುದಿಲ್ಲ. ಆದ್ದರಿಂದ, ಅವು ಬಳಕೆಗೆ ಸುರಕ್ಷಿತವಾಗಿರುತ್ತವೆ.

ಇಲ್ಲಿ ಕೆಲ ಆಯುರ್ವೇದದ ವಿಧಾನಗಳ ಮೂಲಕ ಉದ್ದ ಕೂದಲನ್ನು ಪಡೆಯಬಹುದಾದ ವಿಧಾನಗಳನ್ನು ತಿಳಿಸಿಕೊಡಲಾಗಿದೆ.

ಭೃಂಗರಾಜ್: ಉದ್ದ ಕೂದಲನ್ನು ಹೊಂದಲು ಭೃಂಗರಾಜ ರಸ ಉತ್ತಮ ಆಯುರ್ವೇದ ಪರಿಹಾರ. ಭೃಂಗರಾಜನನ್ನು ‘ಮೂಲಿಕೆಗಳ ರಾಜ’ ಎಂದೂ ಕರೆಯಲಾಗುತ್ತದೆ. ಭೃಂಗರಾಜ್ ರಸವನ್ನು ಕೂದಲಿಗೆ ಹಚ್ಚಿ 20 ನಿಮಿಷಗಳ ಕಾಲ ಬಿಟ್ಟು ತಣ್ಣೀರಿನಿಂದ ತೊಳೆದುಕೊಳ್ಳಬಹುದು. ಉತ್ತಮ ಫಲಿತಾಂಶಕ್ಕಾಗಿ ವಾರದಲ್ಲಿ ಎರಡು ಅಥವಾ ಮೂರು ಬಾರಿ ಇದನ್ನು ಬಳಸಬೇಕು. ಕೂದಲ ಆರೋಗ್ಯಕ್ಕಾಗಿ ಭೃಂಗರಾಜ್ ಎಣ್ಣೆಯನ್ನು ಕೂಡಾ ಬಳಸಬಹುದು.

ತೆಂಗಿನ ಎಣ್ಣೆ: ಕೂದಲಿಗೆ ಒದಗಿಸಬಹುದಾದ ಅತ್ಯಂತ ಪರಿಣಾಮಕಾರಿ ಆಯುರ್ವೇದ ಚಿಕಿತ್ಸೆಗಳಲ್ಲಿ ತೆಂಗಿನ ಎಣ್ಣೆಯೂ ಒಂದಾಗಿದೆ. ತೆಂಗಿನ ಎಣ್ಣೆ ಅಗಾಧವಾದ ಪ್ರಯೋಜನಗಳನ್ನು ಹೊಂದಿದೆ. ಒಂದು ಪ್ರಯೋಜನವೆಂದರೆ ಅದು ಉದ್ದ ಮತ್ತು ಹೊಳೆಯುವ ಕೂದಲನ್ನು ಹೊಂದಲು ಸಹಾಯ ಮಾಡುತ್ತದೆ. ಇದು ತಲೆಯ ನೆತ್ತಿಯನ್ನು ಪೋಷಿಸುತ್ತದೆ ಮತ್ತು ಆರೋಗ್ಯವಾಗಿಡುತ್ತದೆ. ತಲೆಗೆ ಸ್ನಾನ ಮಾಡುವ ಅರ್ಧ ಗಂಟೆಗೆ ಮುನ್ನ ಕೂದಲಿಗೆ ತೆಂಗಿನ ಎಣ್ಣೆ ಹಚ್ಚಿಕೊಳ್ಳಬೇಕು. ತೆಂಗಿನ ಎಣ್ಣೆ ನೆತ್ತಿಯನ್ನು ಆರೋಗ್ಯವಾಗಿಡಲು ಕೂಡಾ ಸಹಾಯ ಮಾಡುತ್ತದೆ.

ಆಮ್ಲಾ: ಆಮ್ಲಾ ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಸಲಾಗುವ ಮತ್ತೊಂದು ಉತ್ತಮ ಔಷಧವಾಗಿದೆ. ಆಮ್ಲಾ ಅನೇಕ ಪ್ರಯೋಜನಗಳನ್ನು ಹೊಂದಿದೆ. ಆರೋಗ್ಯಕರ ಮತ್ತು ಉದ್ದನೆಯ ಕೂದಲು ಹೊಂದಲು ಆಮ್ಲಾ ಸಹಕಾರಿಯಾಗಿದೆ. ಒಣ ಆಮ್ಲಾವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ಬೆರೆಸಿ ನಂತರ ನೆತ್ತಿಯ ಮೇಲೆ ಹಚ್ಚಬೇಕು. ಇದು ಕೂದಲಿನ ಆರೋಗ್ಯಕ್ಕೆ ಉತ್ತಮ.

ಅಶ್ವಗಂಧ: ಅಶ್ವಗಂಧವು ಆಯುರ್ವೇದದಲ್ಲಿ ಬಳಸಲಾಗುವ ಬಹಳ ಮುಖ್ಯವಾದ ಗಿಡಮೂಲಿಕೆ. ಅಶ್ವಗಂಧ ಕೂದಲ ಬೆಳವಣೆಗೆಗೆ, ಕೂದಲು ಉದುರುವುದಕ್ಕೆ, ಕೂದಲನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ನಿಂಬೆ ಸಿಪ್ಪೆ ಮತ್ತು ಕರಿಬೇವಿನ ಎಲೆಗಳು: ಕೂದಲ ಆರೋಗ್ಯಕ್ಕೆ ಕರಿಬೇವಿನ ಎಲೆಗಳು ಮತ್ತು ನಿಂಬೆ ಸಿಪ್ಪೆಯ ಮಿಶ್ರಣ ಬಳಸಬಹುದು. ಈ ಮಿಶ್ರಣಕ್ಕೆ ಹಸಿರು ಬೇಳೆ ಮತ್ತು ಮೆಂತ್ಯ ಬೀಜಗಳನ್ನು ಸೇರಿಸಬಹುದು ಅಥವಾ ನಿಂಬೆ ಸಿಪ್ಪೆ- ಕರಿಬೇವಿನ ಎಲೆಗಳನ್ನು ಮಾತ್ರವೂ ಬಳಸಬಹುದು. ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ ಸ್ವಲ್ಪ ಸಮಯದ ಬಳಿಕ ಶಾಂಪೂ ಬಳಸಿ ಕೂದಲು ತೊಳೆಯಬೇಕು. ಇದನ್ನು ಬಳಸುತ್ತಾ ಕೆಲ ದಿನಗಳಲ್ಲೇ ಉದ್ದವಾದ ಮತ್ತು ಆರೋಗ್ಯಕರ ಕೂದಲನ್ನು ಪಡೆಯಬಹುದು.

ಇವಿಷ್ಟು ಕೂದಲು ಪೋಷಿಸಲು ಮತ್ತು ಅವುಗಳನ್ನು ಬೆಳೆಯಲು ಬಳಸಬಹುದಾದ ಅತ್ಯುತ್ತಮ ಆಯುರ್ವೇದ ಪರಿಹಾರ.

ಟಾಪ್ ನ್ಯೂಸ್

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

Tan removalಗೆ ಟೊಮೆಟೊ ಫೇಸ್‌ ಪ್ಯಾಕ್‌; ನೈಸರ್ಗಿಕ ತ್ವಚೆ ಕಾಳಜಿ

Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್‌ ಪ್ಯಾಕ್‌; ಇದರ ಲಾಭವೇನು ಗೊತ್ತಾ?

1

South Indian actors: ನಾಗಾರ್ಜುನ್‌ ಟು ವಿಜಯ್; ದಕ್ಷಿಣ ಭಾರತದ ಶ್ರೀಮಂತ‌ ನಟರು ಯಾರ‍್ಯಾರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.