Delhi excise scam: 5 ತಿಂಗಳ ಬಳಿಕ ಕೆಸಿಆರ್‌ ಪುತ್ರಿಗೆ ಜಾಮೀನು


Team Udayavani, Aug 27, 2024, 11:29 PM IST

Delhi excise scam: KCR’s daughter gets bail after 5 months

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ ರಾವ್‌ ಪುತ್ರಿ  ಕೆ.ಕವಿತಾಗೆ ಸುಪ್ರೀಂ ಕೋರ್ಟ್‌ ಮಂಗಳ ವಾರ ಜಾಮೀನು ನೀಡಿದೆ. ಈ ಮೂಲಕ ಈ ಪ್ರಕರಣ ದಲ್ಲಿ ಮನೀಶ್‌ ಸಿಸೋಡಿಯಾ ಅವರ ಬಳಿಕ ಮತ್ತೂಬ್ಬ ಪ್ರಭಾವಿ ನಾಯಕರಿಗೆ ಜಾಮೀನು ಸಿಕ್ಕಂತಾಗಿದೆ.

5 ತಿಂಗಳಿನಿಂದ ಕವಿತಾ ಕಸ್ಟಡಿಯಲ್ಲಿರುವುದನ್ನು ಗಮನಿಸಿದ ನ್ಯಾ|ಬಿ.ಆರ್‌.ಗವಾಯಿ ಮತ್ತು ನ್ಯಾ|ಕೆ.ವಿ.ವಿಶ್ವನಾಥ್‌ ಅವರಿದ್ದ ನ್ಯಾಯಪೀಠ ಈ ಪ್ರಕರಣದಲ್ಲಿ ತನಿಖೆ ಮುಕ್ತಾಯಗೊಂಡಿದ್ದು, ಇನ್ನೂ ಕವಿತಾ ಅವರು ಕಸ್ಟಡಿಯಲ್ಲಿರುವ ಆವಶ್ಯಕತೆ ಇಲ್ಲ ಎಂದು ಹೇಳಿ ಜಾಮೀನು ನೀಡಿದೆ.  ಈ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ತನಿಖೆ ನಡೆಯುವ ಸಂಭವಗಳು ಕಡಿಮೆ ಎಂಬುದನ್ನು ಕೋರ್ಟ್‌ ಮನಗಂಡಿದೆ ಎಂದು ಹೇಳಿದೆ. ಈ ಮೂಲಕ ಕವಿತಾಗೆ ಜಾಮೀನು ನಿರಾಕರಿಸಿದ್ದ ದಿಲ್ಲಿ ಹೈಕೋರ್ಟ್‌ ಆದೇಶ ತಳ್ಳಿÖಾಕಿದೆ. ಕವಿತಾ ಈ ಪ್ರಕರಣ ದಲ್ಲಿ ಪ್ರಮುಖ ಆರೋಪಿ ಎಂದು ಹೇಳುವ ಮೂಲಕ ಜು.1ರಂದು ಜಾಮೀನು ನೀಡಲು ದಿಲ್ಲಿ ಹೈಕೋರ್ಟ್‌ ನಿರಾಕರಿಸಿತ್ತು. ಮಾ.23ರಂದು ಜಾರಿ ನಿರ್ದೇಶನಾಲಯ ಮತ್ತು ಎ.11ರಂದು ಸಿಬಿಐ ಅವರನ್ನು ಬಂಧಿಸಿತ್ತು.

20 ಲಕ್ಷ ರೂ. ಬಾಂಡ್‌: ಕವಿತಾ ವಿರುದ್ಧದ 2 ಪ್ರಕರಣ ಗಳಲ್ಲಿ ತಲಾ 10 ಲಕ್ಷ ರೂ. ಬಾಂಡ್‌ ನೀಡುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ವಿಚಾರಣ ನ್ಯಾಯಾಲ ಯದ ವಶಕ್ಕೆ ಪಾಸ್‌ಪೋರ್ಟ್‌ ನೀಡಬೇಕು. ಹೊರ ಹೋದ ಬಳಿಕ ಸಾಕ್ಷಿಗಳನ್ನು ಹೆದರಿಸುವ ಅಥವಾ ಹಾಳು ಮಾಡುವ ಕೆಲಸ ಮಾಡಬಾರದು ಎಂದು ಎಚ್ಚರಿಸಿದೆ.

ಏನಿದು ಪ್ರಕರಣ?: ಕೆಲವರಿಗೆ  ಲಾಭ ಮಾಡಿಕೊಡು ವುದಕ್ಕಾಗಿ ಅಬಕಾರಿ ನೀತಿಯನ್ನು ರೂಪಿಸಲಾಗಿತ್ತು. ಇದರಲ್ಲಿ ಲಂಚ ಸ್ವೀಕರಿಸಿದ ವ್ಯಕ್ತಿಗಳಲ್ಲಿ ಮನೀಷ್‌ ಸಿಸೋಡಿಯಾ, ಕೇಜ್ರಿವಾಲ್‌, ಕವಿತಾ ಅವರ ಹೆಸರು ಕೇಳಿಬಂದಿತ್ತು. ಕವಿತಾ ಪ್ರಮುಖ ಆರೋಪಿ ಎಂದು ಹೇಳಿದ್ದ ಇ.ಡಿ ಅವರನ್ನು ಬಂಧಿಸಿತ್ತು. ಬಂಧನದಲ್ಲಿರುವ ಸಮಯದಲ್ಲೇ ಸಿಬಿಐ ಅವರನ್ನು ಬಂಧಿಸಿತ್ತು.

ಕೇಜ್ರಿ ನ್ಯಾಯಾಂಗ ಬಂಧನ ಅವಧಿ ಸೆ.3ರ ವರೆಗೆ ವಿಸ್ತರಣೆ

ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ನ್ಯಾಯಾಂಗ ಬಂಧನವನ್ನು ದಿಲ್ಲಿ ಕೋರ್ಟ್‌ ಸೆ.3ರ ವರೆಗೆ ವಿಸ್ತರಿಸಿದೆ. ಹಿಂದೆ ನೀಡಿದ್ದ ಅವಧಿ ಅಂತ್ಯಗೊಂಡದ್ದರಿಂದ ವೀಡಿಯೋ ಕಾನ್ಫರೆನ್ಸ್‌ ವಿಚಾರಣೆ ನಡೆಸಿ,  ಅವಧಿಯನ್ನು ವಿಸ್ತರಿಸಿತು.

ಎಲ್ಲಿದೆ ನ್ಯಾಯಸಮ್ಮತತೆ? ಇ.ಡಿ. ಸಿಬಿಐಗೆ ಸುಪ್ರೀಂ

ಕೆ. ಕವಿತಾ ಅವರ ಜಾಮೀನು ಅರ್ಜಿ ವಿಚಾರಣೆ ಸಮಯದಲ್ಲಿ ಸುಪ್ರೀಂಕೋರ್ಟ್‌ ತನಿಖಾ ಸಂಸ್ಥೆಗಳ “ನ್ಯಾಯಸಮ್ಮತತೆ’ಯನ್ನು ಪ್ರಶ್ನಿಸಿದೆ. ಇದು ಮುಂಬರುವ ಹಲವು ಪ್ರಕರಣಗಳ ಮೇಲೆ ಭಾರೀ ಪರಿಣಾಮ ಬೀರುವ ಸಾಧ್ಯತೆ ಇದೆ. ಕೇವಲ ಪ್ರಾಸಿಕ್ಯೂಶನ್‌ ಸಾಕ್ಷಿಗಳನ್ನಿಟ್ಟು ಕೊಂಡು ಆರೋಪಿಗಳ ಅಪರಾಧವನ್ನು ಖಚಿತ ಪಡಿಸಲು ಸಾಧ್ಯವಿಲ್ಲ. ಹೆಚ್ಚಿನ ಸಾಕ್ಷ್ಯಗಳನ್ನು ನೀಡಬೇಕಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

ಟಾಪ್ ನ್ಯೂಸ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.