H.D.Kumaraswamy: ಸಹಿ ನಿಮ್ಮದಲ್ಲವಾದರೆ ದೂರು ನೀಡಿ: ಡಿ.ಕೆ.ಶಿವಕುಮಾರ್‌

ವೆಂಕಟೇಶ್ವರ ಮಿನರಲ್ಸ್‌ಗೆ ಗಣಿ ಮಂಜೂರು ಪ್ರಕರಣ, ಸಹಿ ನಿಮ್ಮದಲ್ಲವಾದರೆ ಕೋರ್ಟ್‌ನಲ್ಲಿ ಒಪ್ಪಿಕೊಂಡಿದ್ದು ಯಾಕೆ?

Team Udayavani, Aug 28, 2024, 6:20 AM IST

DKS

ಬೆಂಗಳೂರು: ಸತ್ಯಕ್ಕೆ ಹೆಸರಾದ ನಮ್ಮ ರಾಷ್ಟ್ರದ ಉಕ್ಕು ಸಚಿವ ಕುಮಾರಸ್ವಾಮಿ ಅವರು ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಗಣಿ ಮಂಜೂರು ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸಹಿಯೇ ಅಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ಸಹಿ ಫೋರ್ಜರಿ ಆಗಿರುವ ಬಗ್ಗೆ ದೂರು ಯಾಕೆ ನೀಡಿಲ್ಲ? ತಮಗೆ ಹತ್ತಿರದ ಅಥವಾ ಅನುಕೂಲವಾದ ಠಾಣೆ ಅಥವಾ ಆನ್‌ಲೈನ್‌ನಲ್ಲೇ ಈ ಸಂಬಂಧ ದೂರು ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.

ಕುಮಾರಸ್ವಾಮಿ ಅವರು ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಗಣಿ ಮಂಜೂರು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಹಾಕಿಕೊಳ್ಳುತ್ತಾರೆ. ಆ ಸಂದರ್ಭದಲ್ಲಿ ಅವರು ತಮ್ಮ ಅಫಿದವಿತ್‌ನಲ್ಲಿ ಈ ಜಮೀನನ್ನು ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಮಂಜೂರು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರಲ್ಲೇ ಎಫ್ಐಆರ್‌ ದಾಖಲಾಗಿದ್ದು, ಈ ಪ್ರಕರಣದ ತನಿಖೆ ಬಾಕಿ ಇದೆ ಎಂದು ಒಪ್ಪಿಕೊಂಡಿದ್ದಾರೆ. ಕುಮಾರಸ್ವಾಮಿ ಅವರೇ, ಈ ಸಹಿ ನಿಮ್ಮದಲ್ಲವಾದರೆ ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ಆ ಆದೇಶವನ್ನು ನೀವೇ ನೀಡಿರುವುದಾಗಿ ಒಪ್ಪಿಕೊಂಡಿರುವುದು ಯಾಕೆ ಎಂದು ಡಿಕೆಶಿ ಪ್ರಶ್ನಿಸಿದರು. ಮಿಸ್ಟರ್‌ ಕುಮಾರಸ್ವಾಮಿ ನಿಮ್ಮ ವಿರುದ್ಧ 2011ರಲ್ಲಿ ಯಡಿಯೂರಪ್ಪ ಅವರ ಸರಕಾರ ಯಾಕೆ ದೂರು ದಾಖಲಿಸಿತ್ತು ಎಂದು ಲೇವಡಿ ಮಾಡಿದರು.

ಇನ್ನೊಬ್ಬರ ಕುಟುಂಬದ ವಿಚಾರಕ್ಕೆ ಹೋಗಬಹುದಾ?
ತಮ್ಮ ಕುಟುಂಬದ ಸುದ್ದಿಗೆ ಯಾರೂ ಬರಬಾರದು. ಆದರೆ ಅವರು ಯಾರ ಕುಟುಂಬದ ವಿಚಾರಕ್ಕೆ ಬೇಕಾದರೂ ಹೋಗಬಹುದಾ ಎಂದು ಶಿವಕುಮಾರ್‌ ಖಾರವಾಗಿ ಕೇಳಿದರು. ನಾನು ಅವರ ಕುಟುಂಬ ಹಾಗೂ ಸಹೋದರನ ಆಸ್ತಿ ಬಗ್ಗೆ ಅನೇಕ ಪ್ರಶ್ನೆ ಕೇಳಿದ್ದಾರೆ. ಈವರೆಗೂ ಉತ್ತರ ನೀಡಿಲ್ಲ. ನನ್ನ ಕುಟುಂಬದ ಸುದ್ದಿಗೆ ಬರುತ್ತೀಯಾ ಎಂದೆಲ್ಲ ಅವರು ಕಿಡಿಕಾರಿದ್ದಾರೆ.

ಅವರು ಕೂಡ ಯಾರ ಕುಟುಂಬದ ವಿಚಾರಕ್ಕೆ ಹೋಗಿದ್ದಾರೆ ಎಂಬುದನ್ನು ಹೇಳಬೇಕು. ಅವರು ಹೇಗೆ ಬೇರೆಯವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೋ ಅದೇ ರೀತಿ ಬೇರೆಯವರು ಅವರ ಕುಟುಂಬದ ವಿಚಾರಕ್ಕೆ ಹೋಗುತ್ತಾರೆ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.