CM Siddaramaiah: ಮುಡಾದಲ್ಲಿ ಮಾಡಿದ ಪಾಪ ಅಳಿಸಿ ಹೋಗುತ್ತದೆಯೇ: ಸಿ.ಟಿ.ರವಿ

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ

Team Udayavani, Aug 28, 2024, 12:28 AM IST

CT-Ravi

ಬೆಂಗಳೂರು: ಕಾಂಗ್ರೆಸಿಗರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ತಮ್ಮ ಜವಾಬ್ದಾರಿಯ ಅರಿವಿಲ್ಲ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಯುವುದು ಸಹಜ. ಆದರೆ, ಇವರು ಭ್ರಷ್ಟಾಚಾರದ ಸಮರ್ಥನೆಗಾಗಿ ಜೋರು ಬಾಯಿ ಮಾಡಲು ಹೊರಟಿದ್ದಾರೆ. ಹಾಗೆ ಮಾಡಿದಾಕ್ಷಣ ಮುಡಾದಲ್ಲಿ ಇವರು ಮಾಡಿದ ಪಾಪ ಅಳಿಸಿ ಹೋಗುತ್ತದೆಯೇ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ 40 ವರ್ಷದ ಸಾರ್ವಜನಿಕ ಬದುಕಿನಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುವ ಸಿದ್ದರಾಮಯ್ಯರಿಂದ ಮಾತ್ರ ಇಂತಹ ಸಮರ್ಥನೆಗಳು ಸಾಧ್ಯ. ಎಲ್ಲ ನಿಯಮ ಮೀರಿ ನಿವೇಶನ ಪಡೆದು, ಅದು ಸರಿ ಎಂದು ವಾದಿಸಿ ದಕ್ಕಿಸಿಕೊಳ್ಳಲು ಬೇರೆ ಯಾರಿಗಾದರೂ ಸಾಧ್ಯವೇ? 2005ರಲ್ಲಿ ಅತ್ಯಂತ ಕಡಿಮೆ ಬೆಲೆಗೆ ಪಡೆದ ಭೂಮಿಗೆ 62 ಕೋಟಿ ರೂ. ಕೇಳಲು ಅವರನ್ನು ಬಿಟ್ಟು ಇನ್ಯಾರಿಗಾದರೂ ಸಾಧ್ಯವಿದೆಯೇ ಎಂದು ಪ್ರಶ್ನಿಸಿದರು.

ಸರ್ಫ್‌ ಎಕ್ಸೆಲ್‌, ಏರಿಯಲ್‌ ಹಾಕಿದರೂ ಕಪ್ಪು ಹೋಗಲ್ಲ
ಅಧಿವೇಶನದಲ್ಲಿ ಮುಡಾ ಹಗರಣದ ಚರ್ಚೆಗೆ ಏಕೆ ಬೆದರಿದರು? ಸದನದಲ್ಲಿ ದಾಖಲೆಗಳನ್ನು ಬಿಚ್ಚಿಟ್ಟಿದ್ದರೆ ನಿರುತ್ತರರಾಗಬೇಕಾಗುತ್ತದೆ. ಯಾವ ಸರ್ಫ್‌ ಎಕ್ಸೆಲ್‌, ಏರಿಯಲ್‌ ಕೂಡ ಇವರ ಕಪ್ಪು ತೊಳೆಯಲಾಗಲ್ಲ. ವೈಟ್ನರ್‌ ಹಚ್ಚಿ ಕಪ್ಪು ಕಾಣದಂತೆ ಮಾಡಬಹುದಷ್ಟೆ. ಸಂವಿಧಾನದ ಮೇಲೆ ನಂಬಿಕೆ ಇದ್ದಿದ್ದರೆ ರಾಜಭವನ ಚಲೋ ಮಾಡುವ ಘೋಷಣೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾಡುತ್ತಿರಲಿಲ್ಲ ಎಂದು ಟೀಕಿಸಿದರು.

ಕೆಂಪಣ್ಣ ಆಯೋಗದ ವರದಿ ಮಂಡಿಸಿ
ಅರ್ಕಾವತಿ ಬಡಾವಣೆಯ ರೀ ಡೂ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ರಾಜ್ಯಪಾಲರು ಮುಂದಿಟ್ಟು ಚರ್ಚಿಸಲು ನಿರ್ಧರಿಸಿದ್ದೇವೆ. ಎಕರೆಗೆ 15 ಕೋಟಿ ರೂ. ಎಂದರೂ 840 ಎಕರೆಗೆ 10-12 ಸಾವಿರ ಕೋಟಿ ರೂ. ಹಗರಣವಿದು. ಇಷ್ಟೆಲ್ಲ ಮಾಡಿಯೂ ಕಾಂಗ್ರೆಸಿಗರಲ್ಲಿ ಯಾರೂ ಭ್ರಷ್ಟರಿಲ್ಲ, ಇವರೆಲ್ಲ ಪ್ರಾಮಾಣಿಕರು.

ಸಿಎಂ ಸಿದ್ದರಾಮಯ್ಯ ತಮ್ಮ ವಿರುದ್ಧ ಆರೋಪ ಬಂದಾಗ ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿ ನೇಮಿಸಿದ ಕೆಂಪಣ್ಣ ಆಯೋಗದ ವರದಿ ಪಡೆದುಕೊಂಡರು. ಅದನ್ನು ಇದುವರೆಗೆ ಸದನದಲ್ಲಿ ಮಂಡಿಸಿ, ಕ್ರಮ ವಹಿಸಿಲ್ಲ. ಸ್ವತ್ಛವಾಗಿದ್ದರೆ ಭಯ ಬೀಳುವುದರಲ್ಲಿ ಅರ್ಥವಿಲ್ಲ. ನಿಮ್ಮ ಪ್ರಾಮಾಣಿಕತೆ, ಪಾರದರ್ಶಕತೆಯನ್ನು ಓರೆಗೆ ಹಚ್ಚಲು ಇದು ಸುಸಮಯ. ಇಲ್ಲದಿದ್ದರೆ, ನಿಮ್ಮ ಮೇಲೆ ನಂಬಿಕೆ ಬರುವುದೇ ಇಲ್ಲ ಎಂದು ಸಿ.ಟಿ. ರವಿ ಹೇಳಿದರು.


ಜಿಂದಾಲ್‌ಗೆ ಭೂಮಿ ಮರು ಪರಿಶೀಲಿಸಿ: ಸಿ.ಟಿ. ರವಿ ಆಗ್ರಹ
ನಿಮಗೂ, ನಿಮ್ಮ ಹೈಕಮಾಂಡ್‌ಗೂ ಕಿಕ್‌ಬ್ಯಾಕ್‌ ಸಿಕ್ಕಿದೆಯೇ?
ಜಿಂದಾಲ್‌ ಸಂಸ್ಥೆಗೆ 3677 ಎಕರೆ ಭೂಮಿಯನ್ನು ಶುದ್ಧಕ್ರಯಕ್ಕೆ ಕೊಡುವ ನಿರ್ಧಾರವನ್ನು ಪುನರ್‌ ಪರಿಶೀಲನೆ ಮಾಡಬೇಕು ಹಾಗೂ ಎಷ್ಟು ಮಂದಿ ಕನ್ನಡಿಗರಿಗೆ ಉದ್ಯೋಗ ಸಿಕ್ಕಿದೆ ಎಂಬುದರ ಜಾಬ್‌ ಆಡಿಟ್‌ ಮಾಡಿಸಬೇಕೆಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಆಗ್ರಹಿಸಿದರು.

ಬಿಜೆಪಿ ಆಡಳಿತದಲ್ಲಿದ್ದಾಗಲೇ ಈ ಪ್ರಸ್ತಾವನೆ ಬಂದಿತ್ತು. ಸಂಪುಟ ಸಭೆಯೊಳಗೆ ನಾವೆಲ್ಲರೂ ವಿರೋಧಿಸಿದ್ದೆವು. ಬಹಿರಂಗವಾಗಿ ಕಾಂಗ್ರೆಸ್‌ ವಿರೋಧಿಸಿತ್ತು. ಇದರಲ್ಲಿ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ ಬಂದಿದೆ, 1.20 ಲಕ್ಷ ರೂಪಾಯಿಗೇ ಭೂಮಿ ಕೊಡುವುದು ಎಂದರೇನರ್ಥ ಎಂದೆಲ್ಲ ಕಾಂಗ್ರೆಸ್‌ ಆರೋಪಿಸಿತ್ತು. ಅಂದು ವಿರೋಧಿಸಿ, ಇಂದು ಕೊಡುತ್ತಿದ್ದೀರಿ ಎಂದರೆ ನಿಮಗೂ ನಿಮ್ಮ ಹೈಕಮಾಂಡ್‌ಗೂ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ ಸಂದಾಯ ಆಗಿರಬಹುದು ಎಂದು ಆರೋಪಿಸಿದರು.

ಇದೆಲ್ಲ ಬಿಜೆಪಿ ಆಡಳಿತದಲ್ಲೇ ನಿರ್ಧಾರ ಆಗಿತ್ತು ಎನ್ನುವ ಸಚಿವ ಎಂ.ಬಿ. ಪಾಟೀಲ್‌, ಅಂದು ನೀವೇ ವಿರೋಧಿಸಿದ್ದನ್ನು ಇಂದೇಕೆ ಅನುಷ್ಠಾನಕ್ಕೆ ತಂದಿರಿ ಎಂಬುದಕ್ಕೆ ಉತ್ತರಿಸಿ. ಅಂದು ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಪತ್ರ ಬರೆದು ವಿರೋಧಿಸಿದ್ದ ಎಚ್‌.ಕೆ. ಪಾಟೀಲರು ಇಂದು ಸಂಪುಟ ಸಭೆಯ ನಿರ್ಣಯವನ್ನು ಪತ್ರಿಕಾಗೋಷ್ಠಿಯಲ್ಲಿ ಸಂಭ್ರಮದಿಂದ ಹೇಳಿಕೊಂಡಿದ್ದಾರೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1

Vishnuvardhan Birthday: ವಿಷ್ಣುವರ್ಧನ್‌ ಜನ್ಮದಿನ ಆಚರಿಸಲು ಫ್ಯಾನ್ಸ್‌  ರೆಡಿ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

1-bantwala-1

Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

HD ದೇವೇಗೌಡರ ಬದಲು ಎಚ್‌ಡಿಕೆ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

3-thirthahalli

Thirthahalli: ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

1-dde

Edneer ಶ್ರೀ ಚಾತುರ್ಮಾಸ್ಯ; ಪದಯಾನ ತಂಡದ ಭರತನಾಟ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.