Karnataka ನಾಲ್ವರು ಶಿಕ್ಷಕರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ
ಬೆಂಗಳೂರಿನ ಇಬ್ಬರು, ಹುಣಸೂರು, ದೊಡ್ಡ ಬಳ್ಳಾಪುರದ ಒಬ್ಬರಿಗೆ ಗೌರವ
Team Udayavani, Aug 28, 2024, 6:45 AM IST
ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವಾಲಯವು ಕೊಡಮಾಡುವ ರಾಷ್ಟ್ರೀಯ ಉತ್ತಮ ಶಿಕ್ಷಕ -2024 ಪ್ರಶಸ್ತಿಗೆ ರಾಜ್ಯದ ನಾಲ್ವರು ಶಿಕ್ಷಕರು ಭಾಜನರಾಗಿದ್ದಾರೆ.
ಹುಣಸೂರಿನ ಬಾಲಕಿಯರ ಸರಕಾರಿ ಪಿಯು ಕಾಲೇಜಿನ ಉಪನ್ಯಾಸಕ ಎಚ್.ಎನ್. ಗಿರೀಶ್ ಮತ್ತು ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿಯ ಸರಕಾರಿ ಪ್ರೌಢ ಶಾಲೆಯ ಶಿಕ್ಷ ನಾರಾಯಣಸ್ವಾಮಿ ಆರ್., ಬೆಂಗಳೂರಿನ ಸಂಜಯನಗರದ ಡ್ಯಾಫೊಡಿಲ್ಸ್ ಕೇಂದ್ರೀಯ ಪಠ್ಯಕ್ರಮ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ನರಸಿಂಹಮೂರ್ತಿ ಎಚ್.ಕೆ., ಮಲ್ಲಸಂದ್ರದ ಕಮ್ಮಗೊಂಡನಹಳ್ಳಿಯ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯದ ಶಿಕ್ಷಕ ಅಶೋಕ್ ಸೇನ್ಗುಪ್ತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಸೆ. 5ರಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಈ ಪ್ರಶಸ್ತಿಯು 50 ಸಾವಿರ ರೂ. ನಗದು, ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಯಾರಿಗೆಲ್ಲ ಪ್ರಶಸ್ತಿ?
-ಎಚ್.ಎನ್. ಗಿರೀಶ್, ಹುಣಸೂರಿನ ಬಾಲಕಿಯರ ಸರಕಾರಿ ಪಿಯು ಕಾಲೇಜು
-ನಾರಾಯಣಸ್ವಾಮಿ ಆರ್., ದೊಡ್ಡಬಳ್ಳಾ ಪುರದ ಬಾಶೆಟ್ಟಿಹಳ್ಳಿಯ ಸರಕಾರಿ ಪ್ರೌಢ ಶಾಲೆ
-ನರಸಿಂಹಮೂರ್ತಿ ಎಚ್. ಕೆ., ಬೆಂಗಳೂರಿನ ಸಂಜಯನಗರದ ಡ್ಯಾಫೊಡಿಲ್ಸ್ ಆಂಗ್ಲ ಮಾಧ್ಯಮ ಶಾಲೆ
-ಅಶೋಕ್ ಸೇನ್ಗುಪ್ತ, ಮಲ್ಲಸಂದ್ರದ ಕಮ್ಮಗೊಂಡನಹಳ್ಳಿಯ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.