Udupi ರಥಬೀದಿಯಲ್ಲಿ ಮುಗಿಲು ಮುಟ್ಟಿದ ಕೃಷ್ಣ ಭಕ್ತರ ಸಡಗರ: ವಿಟ್ಠಲನ ಲೀಲೋತ್ಸವ ಸಂಭ್ರಮ


Team Udayavani, Aug 28, 2024, 1:08 AM IST

Udupi ರಥಬೀದಿಯಲ್ಲಿ ಮುಗಿಲು ಮುಟ್ಟಿದ ಕೃಷ್ಣ ಭಕ್ತರ ಸಡಗರ: ವಿಟ್ಠಲನ ಲೀಲೋತ್ಸವ ಸಂಭ್ರಮ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ಮಂಗಳವಾರ ನಗರದಲ್ಲಿ ಅದ್ದೂರಿಯಾಗಿ ನಡೆಯಿತು. ಮಧ್ಯಾಹ್ನದ ಬಳಿಕ ನಡೆದ ವಿಟ್ಲಪಿಂಡಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ರಥಬೀದಿಯಲ್ಲಿ ಕಂಡುಬಂದರು.

ವಿವಿಧ ವೇಷಧಾರಿಗಳು, ಕೊಂಬು ಕಹಳೆ, ಚೆಂಡೆ, ತಾಸೆಯ ತಾಳಕ್ಕೆ ಹುಲಿವೇಷಧಾರಿಗಳ ನರ್ತನದ ನಡುವೆ ಶ್ರೀಕೃಷ್ಣನ ಮೃಣ್ಮಯ ಮೂರ್ತಿಯ ಲೀಲೋತ್ಸವ ವಿಜೃಂಭಣೆಯಿಂದ ನೆರವೇರಿತು.ಜಿಲ್ಲೆ, ಹೊರಜಿಲ್ಲೆ, ಹೊರರಾಜ್ಯವಷ್ಟೇ ಅಲ್ಲದೆ ವಿದೇಶಿಗರೂ ಈ ಮೆರವಣಿಗೆಯನ್ನು ಕಣ್ತುಂಬಿಕೊಂಡರು. ರಥಬೀದಿ ತುಂಬಾ ಭಕ್ತರಿಂದ ತುಂಬಿ ಹೋಗಿತ್ತು. ಅಷ್ಟಮಠದ ಎಲ್ಲ ಭಾಗಗಳಲ್ಲಿಯೂ ಜನರು ನೆರೆದಿದ್ದರು.

ಕೆಮರಾಗಳಷ್ಟೇ ಅಲ್ಲದೆ ಮೊಬೈಲ್‌ಗ‌ಳ ಮೂಲಕವೂ ರಥಬೀದಿಯ ವಿವಿಧ ದೃಶ್ಯಾವಳಿಗಳನ್ನು ಭಕ್ತರು ಸೆರೆಹಿಡಿದರು.

ಬೆಳಗ್ಗಿನಿಂದಲೇ ಅನ್ನಪ್ರಸಾದ
ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಪಲ್ಲಪೂಜೆ ನೆರವೇರಿಸಿದ ಬಳಿಕ ಅನ್ನಸಂತರ್ಪಣೆಗೆ ಚಾಲನೆ ನೀಡಲಾಯಿತು. ಚಕ್ಕುಲಿ, ಉಂಡೆಗಳು, ಸಾರು, ಸಾಂಬಾರು, ಪಲ್ಯ, ಉಪ್ಪಿನಕಾಯಿ, ಹಾಲುಪಾಯಸ ವಿಶೇಷ ವಾಗಿತ್ತು. ಶ್ರೀಪಾದರು ಭಕ್ತರಿಗೆ ಅನ್ನ ಪ್ರಸಾದ ಬಡಿಸಿದರು. ಸಾವಿರಾರು ಭಕ್ತರು ಅನ್ನಪ್ರಸಾದ ಸ್ವೀಕರಿ ಸಿದರು.

ಹುಲಿ ಕುಣಿತ ವೀಕ್ಷಣೆ
ಉಡುಪಿ: ಶ್ರೀ ಶೀರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರು ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಮಹೋತ್ಸವವನ್ನು ಹುಲಿ ವೇಷ, ಜಾನಪದ ನೃತ್ಯ ಕಲಾವಿದರನ್ನು ವಿಶೇಷವಾಗಿ ಪ್ರೋತ್ಸಾಹಿಸುವ ಮೂಲಕ ಆಚರಿಸುತ್ತಾ ಬಂದಿದ್ದರು. ಆ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಆಶಯದಂತೆ ಈ ಬಾರಿ ಶ್ರೀ ರಾಘವೇಂದ್ರ ಮಠದ ಮುಂಭಾಗದಲ್ಲಿ ಅನ್ನವಿಟuಲ ವೇದಿಕೆಯಲ್ಲಿ ಅಬ್ಬರದ ಹುಲಿ ಕುಣಿತ ನಡೆಯಿತು.

ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೆàಶತೀರ್ಥ ಶ್ರೀಪಾದರು, ಪರ್ಯಾಯ ಶ್ರೀ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಒಟ್ಟಿಗೆ ಕೂತು ಹುಲಿಕುಣಿತ ವೀಕ್ಷಿಸಿದರು. ಶ್ರೀಮಠದ ದಿವಾನರಾದ ಉದಯಕುಮಾರ್‌ ಸರಳತ್ತಾಯ, ಶಾಸಕ ಯಶ್‌ಪಾಲ್‌ ಸುವರ್ಣ, ಶ್ರೀಮಠದ ಪಿಆರ್‌ಒ ಶ್ರೀಶಭಟ್‌, ಪ್ರಮುಖರಾದ ಮೋಹನ್‌ ಭಟ್‌ ಮೊದಲಾದವರು ಇದ್ದರು.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.