Bengal Bandh; 12 ಗಂಟೆ ಪಶ್ಚಿಮ ಬಂಗಾಳ ಬಂದ್ಗೆ ಬಿಜೆಪಿ ಕರೆ: ಹಲವರು ವಶಕ್ಕೆ
ಹೆಲ್ಮೆಟ್ ಹಾಕಿಕೊಂಡು ಬಸ್ ಚಲಾಯಿಸುತ್ತಿರುವ ಚಾಲಕರು..!!
Team Udayavani, Aug 28, 2024, 8:42 AM IST
ಕೋಲ್ಕತಾ: ಪ್ರತಿಭಟನಕಾರರ ಮೇಲೆ ಪೊಲೀಸರ ದಬ್ಬಾಳಿ ಕೆಯನ್ನು ಖಂಡಿಸಿ ಬಿಜೆಪಿಯು ಬುಧವಾರ(ಆ28) ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 12 ಗಂಟೆ ಪಶ್ಚಿಮ ಬಂಗಾಳ ಬಂದ್ಗೆ ಕರೆ ನೀಡಿದ್ದು, ಹಲವು ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಿಗಿ ಬಂದೋಬಸ್ತ್ ನಡೆಸಿರುವ ಪೊಲೀಸರು ಈಗಾಗಲೇ ಹಲವು ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು, ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಮಂಗಳವಾರ “ನಬನ್ನಾ ಅಭಿಜಾನ್'(ಸರಕಾರಿ ಸಚಿವಾಲಯ ಕಟ್ಟಡ ಮುತ್ತಿಗೆ) ಕರೆ ಹಿನ್ನೆಲೆಯಲ್ಲಿ ಕೋಲ್ಕತಾದ ವಿವಿಧೆಡೆ ಭಾರೀ ಪ್ರತಿಭಟನೆಗಳು ನಡೆದಿದ್ದವು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನಕಾರರು ಬ್ಯಾರಿಕೇಡ್ಗಳನ್ನು ಕಿತ್ತು ಹಾಕಿ, ಸಚಿವಾಲಯ ಕಟ್ಟಡಕ್ಕೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದ್ದರು. ಈ ವೇಳೆ ಪ್ರತಿಭಟನಕಾರರು ಮತ್ತು ಪೊಲೀಸರ ಮಧ್ಯೆ ಸಂಘರ್ಷ ನಡೆದಿತ್ತು.
ಹೌರಾದಲ್ಲಿ ಸರಕಾರಿ ಬಸ್ಸಿನ ಚಾಲಕರು ಹೆಲ್ಮೆಟ್ ಧರಿಸಿರುವುದು ಕಂಡುಬಂದಿದೆ. ಇವತ್ತು ಬಂದ್ ಕರೆ ನೀಡಲಾಗುವ ಕಾರಣ ಸುರಕ್ಷತೆಗಾಗಿ ಹೆಲ್ಮೆಟ್ ಹಾಕಿಕೊಂಡಿದ್ದೇವೆ ಎಂದು ಬಸ್ ಚಾಲಕರೊಬ್ಬರು ಹೇಳಿದ್ದಾರೆ.
#WATCH | BJP’s 12-hour ‘Bengal Bandh’: Drivers of Government bus in Howrah seen wearing helmets
A bus driver says, “We are wearing helmets for safety…” pic.twitter.com/fymjumiuur
— ANI (@ANI) August 28, 2024
ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಸುಕಾಂತ ಮಜುಂದಾರ್ ಅವರು ಬಂದ್ ಕರೆ ಕುರಿತು ಪ್ರತಿಕ್ರಿಯಿಸಿ ‘ಮಮತಾ ಬ್ಯಾನರ್ಜಿಯವರ ನಿರಂಕುಶ ಆಡಳಿತಕ್ಕೆ ಬಂದ್ ಅಗತ್ಯ ಪ್ರತಿಕ್ರಿಯೆಯಾಗಿದೆ ಟಿಎಂಸಿ ಸರಕಾರವು ಪ್ರಕರಣದಲ್ಲಿ ನ್ಯಾಯಕ್ಕಾಗಿ ಸಾರ್ವಜನಿಕರ ಬೇಡಿಕೆಯನ್ನು ನಿರ್ಲಕ್ಷಿಸಿದೆ ಎಂದು ಕಿಡಿ ಕಾರಿದ್ದಾರೆ.
ಬಂಗಾಳದ ವಿಪಕ್ಷ ನಾಯಕ ಸುವೆಂದು ಅಧಿಕಾರಿ ಪ್ರತಿಕ್ರಿಯಿಸಿ ‘ಶಾಂತಿಯುತ ವಿದ್ಯಾರ್ಥಿ ಮೆರವಣಿಗೆ ವಿರುದ್ಧ ಪೊಲೀಸರು ಅತಿಯಾದ ಬಲಪ್ರಯೋಗ ನಡೆಸಿರುವುದು ಖಂಡನೀಯ’ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.