Strike; ಸಾರಿಗೆ ನೌಕರರ ಮುಷ್ಕರ ಅನಿವಾರ್ಯ: ಸಮಿತಿ ಎಚ್ಚರಿಕೆ
ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ
Team Udayavani, Aug 28, 2024, 2:10 PM IST
ಹುಬ್ಬಳ್ಳಿ: ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ, ನಿಗಮಗಳಿಗೆ ಬಾಕಿ ಹಾಗೂ ಶಕ್ತಿ ಯೋಜನೆ ಬಾಕಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಸಾರಿಗೆ ನೌಕರರ ಮುಷ್ಕರ ಅನಿವಾರ್ಯವಾಗಲಿದೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಎಚ್ಚರಿಕೆ ನೀಡಿದೆ.
ಬುಧವಾರ(ಆ 28)ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರಾದ ದೇವರಾಜೆ ಅರಸು, ವಿಜಯ ಭಾಸ್ಕರ, ಮಂಜುನಾಥ ಅವರು, ನೌಕರರಿಗೆ 2020ರಲ್ಲಿ ಶೇ.15 ರಷ್ಟು ವೇತನ ಪರಿಷ್ಕರಣೆ ಮಾಡಲಾಗಿದ್ದು, ಸುಮಾರು 38 ತಿಂಗಳ ಹಿಂಬಾಕಿ ಬಿಡುಗಡೆ ಮಾಡಿಲ್ಲ.2024ರ ಜನೆವರಿಯಲ್ಲಿ ವೇತನ ಪರಿಷ್ಕರಣೆ ಆಗಬೇಕಾಗಿದ್ದು ಯಾವುದೇ ಕ್ರಮ ಇಲ್ಲವಾಗಿದೆ ಎಂದರು.
ಸಾರಿಗೆ ನಿಗಮಗಳಿಗೆ ಅಂದಾಜು 4,927 ಕೋಟಿ ರೂ., ಬಾಕಿ ಬರಬೇಕಾಗಿದೆ. ಶಕ್ತಿ ಯೋಜನೆಯಡಿ 1,500 ಕೋಟಿರೂ., ಹಾಗೂ ಸರಬರಾಜುದಾರರು, ಇಂಧನ ಬಾಕಿ 150 ಗಳನ್ನು ಬಿಡುಗಡೆ ಮಾಡಬೇಕು.ಸೆ.12ರಂದು ಜಂಟಿ ಕ್ರಿಯಾ ಸಮಿತಿಯಿಂದ ಬೆಂಗಳೂರಿನ ಫ್ರೀಡಮ್ ಪಾರ್ಕ್ ನಲ್ಲಿ ಒಂದು ದಿನದ ಧರಣಿ ಮಾಡುತ್ತಿದ್ದು, ಸರ್ಕಾರ ಸ್ಪಂದಿಸದಿದ್ದರೆ ಬಸ್ ಗಳ ಸಂಚಾರ ಸ್ಥಗಿತಗೊಳಿಸಿ ಮುಷ್ಕರಕ್ಕಿಳಿಯುವುದು ಅನಿವಾರ್ಯ ಆಗಲಿದೆ.
ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಲೇ ಸಾರಿಗೆ ನೌಕರರನ್ನು ಸಂಪೂರ್ಣವಾಗಿ ಕಡೆಗಣಿಸಿರುವುದಕ್ಕೆ ಜಂಟಿ ಕ್ರಿಯಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.