Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್
Team Udayavani, Aug 28, 2024, 2:17 PM IST
ರಾಯಚೂರು: ಇಲ್ಲಿನ ನಗರಸಭೆ 15 ತಿಂಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದೆ.
ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನರಸಮ್ಮ ಮಾಡಗಿರಿ, ಹಿಂದುಳಿದ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸಾಜೀದ್ ಸಮೀರ್ ಅವಿರೋಧವಾಗಿ ಆಯ್ಕೆಯಾದರು.
ಒಟ್ಟು 35 ಸದಸ್ಯರ ಸಂಖ್ಯಾಬಲದಲ್ಲಿ ಬಿಜೆಪಿಯ 12 ಸದಸ್ಯರು, ಜೆಡಿಎಸ್ ನ ಮೂವರು ಸದಸ್ಯರು, ನಗರ ಶಾಸಕರ ಒಂದು ಮತ ಇದ್ದರೂ ಬಿಜೆಪಿ ಕಣದಿಂದ ದೂರ ಉಳಿಯುವ ಮೂಲಕ ಅಚ್ಚರಿ ಮೂಡಿಸಿತು.
ಕಾಂಗ್ರೆಸ್ ನ 11 ಸದಸ್ಯರು, ಒಂಭತ್ತು ಪಕ್ಷೇತರರು, ಸಚಿವ ಎನ್.ಎಸ್.ಭೋಸರಾಜು, ಸಂಸದ ಕುಮಾರ ನಾಯಕ , ಎಂಎಲ್ ಸಿ ವಸಂತ ಕುಮಾರ ಮತಗಳು ಕಾಂಗ್ರೆಸ್ ಪರವಿದ್ದ ಕಾರಣಕ್ಕೆ ಗೆಲುವು ಅನಾಯಾಸ ಎನ್ನುವಂತಾಗಿತ್ತು. ಆದರೆ, ಪಕ್ಷೇತರರ ಬೆಂಬಲ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಬಹುಮತ ಸಿಗುವ ಸಾಧ್ಯತೆ ಕಡಿಮೆಯಾಗಿದ್ದರಿಂದ ಕಣದಿಂದ ಹಿಂದೆ ಸರಿಯುವ ಮೂಲಕ ಕಾಂಗ್ರೆಸ್ ಹಾದಿ ಸುಗಮವಾಯಿತು. ಕಳೆದ ಬಾರಿ ಬಿಜೆಪಿಯ ಲಲಿತಾ ಕಡಗೋಲು ಅಧ್ಯಕ್ಷರಿದ್ದರೆ, ಕಾಂಗ್ರೆಸ್ ನ ನರಸಮ್ಮ ಮಾಡಗಿರಿ ಉಪಾಧ್ಯಕ್ಷರಿದ್ದರು.
ಇದನ್ನೂ ಓದಿ: Vijayapura: ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಬಿಸಿಯೂಟ ಸವಿದ ರಾಷ್ಟ್ರಪಕ್ಷಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.