ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು KKRDB ಯಿಂದ 50 ಅಂಬ್ಯುಲೆನ್ಸ್: ಡಾ.ಅಜಯ ಸಿಂಗ್
Team Udayavani, Aug 28, 2024, 2:26 PM IST
ಕಲಬುರಗಿ: ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿ ಈಗಾಗಲೇ 371 ಹಾಸಿಗೆಯುಳ್ಳ ಜಯದೇವ ಹೃದ್ರೋಗ ಆಸ್ಪತ್ರೆಗೆ 222 ಕೋ. ರೂ ಅನುದಾನ ನೀಡಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ( KKRDB) ಮಂಡಳಿಯು ಈಗ ಕಲ್ಯಾಣ ಕರ್ನಾಟಕ ಭಾಗದ ಹೃದ್ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಮಂಡಳಿಯಿಂದಲೇ 50 ಅಂಬ್ಯುಲೆನ್ಸ್ ಗಳನ್ನು ನೀಡಲು ನಿರ್ಧರಿಸಿದೆ.
ಹೃದ್ರೋಗಕ್ಕೆ ಒಳಗಾದವರನ್ನು ಒಂದು ಗಂಟೆಯೊಳಗೆ ಆಸ್ಪತ್ರೆಗೆ ಸೇರಿಸುವುದು ಮುಖ್ಯವಾಗಿರುತ್ತದೆ. ಗ್ರಾಮೀಣ ಭಾಗದ ಹೃದ್ರೋಗಿಗಳನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ದೊರಕುವಂತಾಗಲು ಅಂಬ್ಯುಲೆನ್ಸ್ ನೀಡಲಾಗುತ್ತಿದೆ ಎಂದು ಮಂಡಳಿ ಅಧ್ಯಕ್ಷರಾಗಿರುವ ಜೇವರ್ಗಿ ಕ್ಷೇತ್ರದ ಶಾಸಕ ಡಾ. ಅಜಯಸಿಂಗ್ ಹೇಳಿದರು.
ನಗರದಲ್ಲಿ ಕೆಕೆಆರ್ ಡಿಬಿ ಸಂಪೂರ್ಣ 222.65 ಕೋ. ರೂ ಅನುದಾನ ದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಸುಸಜ್ಜಿತ 371 ಹಾಸಿಗೆಯುಳ್ಳ ಜಯದೇವ ಹೃದ್ರೋಗ ಆಸ್ಪತ್ರೆ ಯ ಕಟ್ಟಡ ನಿರ್ಮಾಣ ಕಾಮಗಾರಿ ವೀಕ್ಷಣೆ ನಂತರ ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದರು.
ಅಂಬ್ಯುಲೆನ್ಸ್ ಕಲ್ಯಾಣ ಕರ್ನಾಟಕ ಭಾಗದ ಪ್ರತಿಯೊಂದು ಜಿಲ್ಲೆ ಹಾಗೂ ತಾಲೂಕಾ ಕೇಂದ್ರಗಳಲ್ಲಿ ಇರಲಿದ್ದು, ಅಂಬ್ಯುಲೆನ್ಸ್ ಕಾರ್ಯನಿರ್ವಹಣೆಗಾಗಿ ಕೆಕೆಆರ್ ಡಿಬಿ ಯಿಂದಲೇ ಹಾಟ್ ಲೈನ್ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಿಸಿದರು.
ಕಲಬುರಗಿ ನಗರ ಹಾಗೂ ಸುತ್ತಮುತ್ತಲಿನ ಹೃದ್ರೋಗಿಗಳನ್ನು ಜಯದೇವ ಆಸ್ಪತ್ರೆಗೆ ದಾಖಲಿಸಿದರೆ ಉಳಿದ ತಾಲೂಕುಗಳಲ್ಲಿ ಮೊದಲು ತಾಲೂಕಾ ಆಸ್ಪತ್ರೆಯಲ್ಲಿ ಮೊದಲ ಹಂತದ ಚಿಕಿತ್ಸೆ ನೀಡಲಾಗಿ, ತದನಂತರ ಹೃದ್ರೋಗ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಒಟ್ಟಾರೆ ಹೃದಯ ರೋಗಿಗಳಿಗೆ ಬೇಗ ಚಿಕಿತ್ಸೆ ದೊರಕಲು ಅಂಬ್ಯುಲೆನ್ಸ್ ನೀಡಲಾಗುತ್ತಿದೆ. ಕಲಬುರಗಿಯಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಇನ್ನೂ ಹೆಚ್ಚುವರಿ ಹಣ ಕೇಳಿದರೆ ಇನ್ನಷ್ಟು ಹಣ ಮಂಡಳಿಯಿಂದ ನೀಡಲಾಗುವುದು ಎಂದು ಡಾ.ಅಜಯಸಿಂಗ್ ವಿವರಣೆ ನೀಡಿದರು.
ಸೆಪ್ಟೆಂಬರ್ ಮಾಸಾಂತ್ಯಕ್ಕೆ ಉದ್ಘಾಟನೆ: ಜಯದೇವ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಮುಕ್ತಾಯವಾಗಿದ್ದು, ಸೆಪ್ಟೆಂಬರ್ ಮಾಸಾಂತ್ಯದಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಸೆ.17 ಕಲ್ಯಾಣ ಕರ್ನಾಟಕ ಉತ್ಸವ ದಿನದಂದು ಉದ್ಘಾಟನೆ ನೆರವೇರಿಸಬಹುದಿತ್ತು.ಆದರೆ ಆ ದಿನ ಕಕ ಭಾಗದ ಸಚಿವರು ಅವರವರ ಜಿಲ್ಲೆಯಲ್ಲಿ ಕಕ ಉತ್ಸವದಲ್ಲಿ ಭಾಗಿಯಾಗುವುದರಿಂದ ಬೇರೆ ದಿನದಂದೇ ಸಿಎಂ ಹಾಗೂ ಸಚಿವರೊಂದಿಗೆ ಸಮಾಲೋಚಿಸಿ ದಿನಾಂಕ ನಿರ್ಧರಿಸಲಾಗುವುದು ಎಂದರು.
ವಿವಿಗಳ ಅಭಿವೃದ್ಧಿ ಗೆ ರಾಜ್ಯಪಾಲರ ವಿವೇಚನಾ ನಿಧಿ: ಕಲ್ಯಾಣ ಕರ್ನಾಟಕದ 9 ಸರ್ಕಾರಿ , ಒಂದು ಸಿಯುಕೆ ಹಾಗೂ ಮೂರು ಖಾಸಗಿ ವಿವಿಗಳ ಅಭಿವೃದ್ಧಿ ಗೆಂದು ರಾಜ್ಯಪಾಲರ ವಿವೇಚನಾ ನಿಗದಿ ಎಂಬುದಾಗಿದೆ. ಆದರೆ ಒಂದೇ ಒಂದು ಪೈಸೆ ಕಕ ಹೊರ ಭಾಗದಲ್ಲಿ ವಿನಿಯೋಗವಾಗುವುದಿಲ್ಲ ಎಂದು ಡಾ. ಅಜಯಸಿಂಗ್ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ನಿಯಮಾನುಸಾರ ನಿವೇಶನ ಹಂಚಿಕೆ: ಹಿರಿಯ ನಾಯಕ ಖಗೆ೯ ಕುಟುಂಬ ಒಡೆತನದ ಸಿದ್ದಾರ್ಥ ಟ್ರಸ್ಟ್ ಗೆ ನಿಯಮಾನುಸಾರ ಸಿಎ ನಿವೇಶನ ಹಂಚಿಕೆಯಾಗಿದೆ. ಈಗಾಗಲೇ ಇದಕ್ಕೆ ಸಂಬಂಧ ಪಟ್ಟಂತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವರಣೆ ನೀಡಿದ್ದಾರೆ. ಇದರಲ್ಲಿ ಪ್ರಭಾವ ಏನೂ ಇಲ್ಲ ಎಂದು ಡಾ. ಅಜಯಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಡಳಿ ಕಾರ್ಯದರ್ಶಿ ಸುಂದರೇಶ ಬಾಬು, ಮುಖಂಡರಾದ ನೀಲಕಂಠರಾವ ಮೂಲಗೆ, ಶರಣು ಭೂಸನೂರ ಹಾಗೂ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ: Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.