Belagavi: ಹಿರೇಬಾಗೇವಾಡಿಯ ಜೀವನಾಡಿ ಸಿದ್ಧನಬಾವಿ ಕೆರೆಗೆ ಬಾಗಿನ ಅರ್ಪಿಸಿದ ಸಚಿವೆ
Team Udayavani, Aug 28, 2024, 3:28 PM IST
ಬೆಳಗಾವಿ: ಈ ವರ್ಷ ಉತ್ತಮ ಮಳೆಯಾದ ಕಾರಣ ರಾಜ್ಯದ ಅಣೆಕಟ್ಟೆಗಳು ಭರ್ತಿಯಾಗಿ, ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ತಾಲೂಕಿನ ಹಿರೇಬಾಗೇವಾಡಿಯ ಜೀವನಾಡಿ ಸಿದ್ಧನಬಾವಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಸಚಿವರು, ಹಿರೇಬಾಗೇವಾಡಿ ಹಾಗೂ ಸುತ್ತಮತ್ತಲಿನ ಗ್ರಾಮಗಳ ಬಹುದಿನಗಳ ಬೇಡಿಕೆಯಾಗಿದ್ದ ಸಿದ್ಧನಭಾವಿ ಕೆರೆ ತುಂಬಿಸುವ ಯೋಜನೆ ಯಶಸ್ವಿಯಾಗಿದ್ದು, ಇಂದು ಗಂಗಾಮಾತೆಗೆ ಬಾಗಿನ ಅರ್ಪಿಸಿರುವುದು ಖುಷಿ ತಂದಿದೆ ಎಂದರು.
ಸಿದ್ಧನಬಾವಿ ಕೆರೆಯ ನೀರು ಸಂಗ್ರಹದಿಂದಾಗಿ ಬೋರ್ ವೆಲ್ ಗಳ ಅಂತರ್ಜಲ ವೃದ್ಧಿಯಾಗಲಿದೆ. ಇದರಿಂದ ಜನರಿಗೆ, ಜಾನುವಾರುಗಳಿಗೆ, ಸುತ್ತಮುತ್ತಲಿನ ರೈತರಿಗೆ ಸಹಾಯವಾಗಲಿದೆ. ಈ ಮೊದಲು ಕೆರೆ ತುಂಬಿಸುವ ಭರವಸೆ ನೀಡಿದ್ದೆ, ಇದೀಗ ನುಡಿದಂತೆ ಕೆರೆ ತುಂಬಿಸುವ ಕಾರ್ಯ ಮಾಡಲಾಗಿದೆ. 19 ಕೋಟಿ ರೂ. ವೆಚ್ಚದಲ್ಲಿ ಈ ಭಾಗದ ಕೆರೆಗಳನ್ನು ತುಂಬಿಸಲಾಗಿದೆ ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದರು.
ಈ ವರ್ಷ ಉತ್ತಮ ಮಳೆಯಾದ ಪರಿಣಾಮ ಇವತ್ತು ಎಲ್ಲ ಕೆರೆ ಕಟ್ಟೆಗಳು ತುಂಬಿದ್ದು, ರೈತರ ಮುಖದಲ್ಲಿ ಹರ್ಷದ ಹೊನಲು ಮೂಡಿದೆ. ಹಿರೇ ಬಾಗೇವಾಡಿ ಭಾಗದ ಜನರು ನನಗೆ ಹಿಂದಿನಿಂದಲೂ ಬೆಂಬಲ ನೀಡುತ್ತಾ ಬಂದಿದ್ದಾರೆ. ಈ ಭಾಗದ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಹಿರೇಬಾಗೇವಾಡಿ ಗ್ರಾಮದ 80 ಎಕರೆ ಜಮೀನು ವಿಶ್ವವಿದ್ಯಾಲಯಕ್ಕೆ ಹೋಗಿದ್ದು, ಸಿಎಂ, ಉನ್ನತ ಶಿಕ್ಷಣ ಸಚಿವರ ಹತ್ತಿರ ಮಾತನಾಡಿ ಮಲ್ಲಯ್ಯನ ಗುಡ್ಡದಲ್ಲಿ ಗ್ರಾಮಸ್ಥರಿಗಾಗಿ 10 ಎಕರೆ ವಾಪಸ್ ಪಡೆಯಲಾಗುವುದು. ಜತೆಗೆ ಆ ಜಮೀನಿನಲ್ಲಿ ಮಲ್ಲಯ್ಯನ ದೇವಸ್ಥಾನವನ್ನು ನಿರ್ಮಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಕೆರೆಗೆ ಬಾಗಿನ ಅರ್ಪಿಸಿರುವುದು ನನ್ನ ಅದೃಷ್ಟ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಹಿರೇಬಾಗೇವಾಡಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲಾಗುವುದು ಎಂದರು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾಜ ಚನ್ನರಾಜ ಹಟ್ಟಿಹೊಳಿ, ಜಾಲಿಕರೆಮ್ಮದೇವಿ ಆರಾಧಕರಾದ ಉಳವಪ್ಪ ಅಜ್ಜನವರು, ಗಂಗಯ್ಯ ಸ್ವಾಮಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ ಪಾಟೀಲ, ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ಪಾಟೀಲ, ಉಪಾಧ್ಯಕ್ಷರಾದ ಪುಷ್ಪ ನಾಯ್ಕರ್, ಸುರೇಶ್ ಇಟಗಿ, ಗೌಸಮೊದ್ದಿನ್ ಜಾಲಿಕೊಪ್ಪ, ಅನಿಲ ಪಾಟೀಲ, ಶ್ರೀಕಾಂತ ಮಾಧುಭರಮಣ್ಣವರ, ಅದಿವೇಶ್ ಇಟಗಿ, ಪಡಿಗೌಡ ಪಾಟೀಲ, ಶಿಪು ಹಳೇಮನಿ, ಪ್ರಕಾಶ ಜಪ್ತಿ, ಖತಾಲ್ ಗೋವೆ, ಮಹಾಂತೇಶ ಹಂಚಿನಮನಿ, ನಿಂಗಪ್ಪ ತಳವಾರ, ಆನಂದ ಪಾಟೀಲ, ಅಡಿವೆಪ್ಪ ತೋಟಗಿ, ಆನಂದ ಪಾಟೀಲ, ರಘು ಪಾಟೀಲ ಗ್ರಾಮದ ನೂರಾರು ಮಹಿಳೆಯರು, ಗ್ರಾಮ ಪಂಚಾಯತಿ ಸರ್ವ ಸದಸ್ಯರು, ಗ್ರಾಮದ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.