ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ
Team Udayavani, Aug 28, 2024, 8:03 PM IST
ಚಿಕ್ಕಬಳ್ಳಾಪುರ: ಟಿಟಿ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತವಾಗಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ದಂಡುಪಾಳ್ಯ ಗೇಟ್ ಬಳಿ ಬುಧವಾರ (ಆಗಸ್ಟ್ 28) ನಡೆದಿದೆ.
ಟಿಟಿ ವಾಹನ ಬಾಯಿಕೊಂಡದಿಂದ ಚಿಂತಾಮಣಿ ಕಡೆಗೆ ಬರುತ್ತಿದ್ದು ಬೆಂಗಳೂರಿನಿಂದ ಕಡಪ ಹೈವೇ ರಸ್ತೆ ಮುಖಾಂತರ ಆಂಧ್ರಪ್ರದೇಶದ ಕಡೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನೆಲ್ಲೂರು ಜಿಲ್ಲೆಯ ಶ್ರೀಕಾಂತ್, ಶ್ರೀನಿವಾಸಲು, ಪುಷ್ಪ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಟಿಟಿ ವಾಹನದಲ್ಲಿದ್ದ 12 ಮಂದಿಗೆ ಗಂಭೀರ ಗಾಯಗಳಾಗಿದ್ದು ಚಿಂತಾಮಣಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿಷಯ ತಿಳಿದ ತಕ್ಷಣ ಎಸ್ ಪಿ ಕುಶಾಲ್ ಚೌಕ್ಸೆ, ಎಎಸ್ಪಿ ಖಾಸಿಂ ರಜ. ಡಿವೈಎಸ್ಪಿ ಮುರಳೀಧರ, ಸರ್ಕಲ್ ಇನ್ಸ್ಪೆಕ್ಟರ್ ಶಿವರಾಜ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: Manipal: ನೀರಿನಲ್ಲಿ ಮುಳುಗಿದ ಪ್ರಕರಣ, ಚಿಕಿತ್ಸೆ ಫಲಿಸದೆ ಇನ್ನೋರ್ವ ವಿದ್ಯಾರ್ಥಿಯೂ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.