PM ಸೂರ್ಯಘರ್‌ ಯೋಜನೆಗೆ ಹಿನ್ನಡೆ “ಗ್ಯಾರಂಟಿ’


Team Udayavani, Aug 29, 2024, 7:10 AM IST

PM  ಸೂರ್ಯಘರ್‌ ಯೋಜನೆಗೆ ಹಿನ್ನಡೆ “ಗ್ಯಾರಂಟಿ’

ಬೆಂಗಳೂರು: ಸ್ವತಃ ಬಳಕೆದಾರರನ್ನೇ ವಿದ್ಯುತ್‌ನಲ್ಲಿ ಸ್ವಾವಲಂಬಿಯಾಗಿಸುವ ಕೇಂದ್ರದ ಮಹತ್ವಾಕಾಂಕ್ಷಿ “ಪ್ರಧಾನಮಂತ್ರಿ ಉಚಿತ ವಿದ್ಯುತ್‌ ಸೂರ್ಯಘರ್‌ ಯೋಜನೆ’ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಇದಕ್ಕೆ ಪರೋಕ್ಷವಾಗಿ ರಾಜ್ಯದ 5 ಗ್ಯಾರಂಟಿಗಳಲ್ಲೊಂದಾದ “ಗೃಹಜ್ಯೋತಿ’ ಕಾರಣವಾಗುತ್ತಿದೆ.

ಕಳೆದ ಫೆಬ್ರವರಿಯಲ್ಲಿ ಚಾಲನೆ ನೀಡಲಾದ ಸೂರ್ಯಘರ್‌ ಯೋಜನೆಯಡಿ ಕೇಂದ್ರ ಸರಕಾರವು ಗೃಹಬಳಕೆದಾರರಿಗೆ 3 ಕಿ.ವ್ಯಾ. ಸಾಮರ್ಥ್ಯದವರೆಗೆ ಮನೆಯ ತಾರಸಿಯಲ್ಲಿ ಸೌರವಿದ್ಯುತ್‌ ಫ‌ಲಕಗಳನ್ನು ಅಳವಡಿಸಿಕೊಳ್ಳಲು ಕನಿಷ್ಠ 30 ಸಾವಿರದಿಂದ ಗರಿಷ್ಠ 78 ಸಾವಿರ ರೂ.ವರೆಗೆ ಸಬ್ಸಿಡಿ ನೀಡುತ್ತದೆ. ಜತೆಗೆ ಮಾಸಿಕ 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುತ್ತದೆ. ಆದರೆ ಈಗಾಗಲೇ ಗೃಹಜ್ಯೋತಿ ಯೋಜನೆ ಅಡಿ ಯಾವುದೇ ಹೂಡಿಕೆ ಇಲ್ಲದೆ ರಾಜ್ಯ ಸರಕಾರ 200 ಯೂನಿಟ್‌ವರೆಗೆ ಎಲ್ಲ ವರ್ಗಗಳ ಗೃಹ ಬಳಕೆದಾರರಿಗೂ ಉಚಿತ ವಿದ್ಯುತ್‌ ಒದಗಿಸುತ್ತಿದೆ. ಹಾಗಾಗಿ, ಕೇಂದ್ರದ ಯೋಜನೆ ಕಡೆಗೆ ತಿರುಗಿಯೂ ನೋಡುತ್ತಿಲ್ಲ.

ದೇಶದ ಬಹುತೇಕ ರಾಜ್ಯಗಳಲ್ಲಿ ಕೇಂದ್ರದ ಸೂರ್ಯಘರ್‌ ಯೋಜನೆ ಅಡಿ ನೋಂದಣಿ ಸಂಖ್ಯೆ ಲಕ್ಷದ ಗಡಿ ದಾಟಿದೆ. ಅದರಲ್ಲೂ ಆಸ್ಸಾಂ, ಬಿಹಾರ, ಗುಜರಾತ್‌, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಉತ್ತರ ಪ್ರದೇಶ ಮುಂಚೂಣಿಯಲ್ಲಿವೆ. ಆದರೆ ಕರ್ನಾಟಕ ಮಾತ್ರ ಈ ನಿಟ್ಟಿನಲ್ಲಿ ಹಿನ್ನಡೆ ಅನುಭವಿಸುತ್ತಿದೆ ಎಂದು ಇಂಧನ ಇಲಾಖೆ ಮೂಲಗಳು ತಿಳಿಸಿವೆ.

ನೇರವಾಗಿ ಸೂರ್ಯಘರ್‌ ಯೋಜನೆ ಅಡಿ ಅರ್ಜಿ ಸಲ್ಲಿಕೆಗೆ ಪೋರ್ಟಲ್‌ ಮೂಲಕ ಅವಕಾಶ ಕಲ್ಪಿಸಿದೆ. ಒಟ್ಟಾರೆ ರಾಜ್ಯದಲ್ಲಿ ನೋಂದಣಿ ಮಾಡಿಸಿಕೊಂಡವರ ಸಂಖ್ಯೆ 20 ಸಾವಿರ ಕೂಡ ದಾಟಿಲ್ಲ. ರಾಜ್ಯದಲ್ಲಿ ಸುಮಾರು 1.95 ಕೋಟಿ ಗೃಹಬಳಕೆದಾರರಿದ್ದು, ಗೃಹಜ್ಯೋತಿ ಅಡಿ ನೋಂದಾಯಿಸಿಕೊಂಡವರ ಸಂಖ್ಯೆಯೇ ಅಂದಾಜು 1.72 ಕೋಟಿ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ನೋಂದಣಿ ಹೇಗೆ?
ಗ್ರಾಹಕರು ಯೋಜನೆ ನೋಂದಣಿಗೆ https://www.pmsuryaghar.gov.in/ ಪೋರ್ಟಲ್‌ನಲ್ಲಿ ಆರ್‌.ಆರ್‌. ನಂಬರ್‌ ಸಹಿತ ನೋಂದಣಿ ಮಾಡಿಕೊಳ್ಳಬೇಕು. ಆಗ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ ಗ್ರಾಹಕರ ಮೊಬೈಲ್‌ಗೆ ಒಂದು ನಂಬರ್‌ ಬರುತ್ತದೆ. ಅದನ್ನು ಗ್ರಾಹಕ ತನ್ನ ಪ್ರಸ್ತುತ ಸ್ಥಾಪಿತ ಸಾಮರ್ಥ್ಯ ಎಷ್ಟು ಎಂಬುದರ ಮಾಹಿತಿ ಒದಗಿಸಬೇಕಾಗುತ್ತದೆ. ಅದನ್ನು ಆಧರಿಸಿ ಸಚಿವಾಲಯವು ಸಂಬಂಧಪಟ್ಟ ಎಸ್ಕಾಂಗೆ ನಿರ್ದೇಶನ ನೀಡುತ್ತದೆ.

ಯಾರಿಗೆ ಎಷ್ಟು ಸಬ್ಸಿಡಿ?
ಈ ಯೋಜನೆ ಅಡಿ 1 ಕಿ.ವಾ. ಸಾಮರ್ಥ್ಯದ ಸೌರವಿದ್ಯುತ್‌ ಉಪಕರಣ ಅಳವಡಿಕೆಗೆ 30 ಸಾವಿರ ರೂ. ಸಬ್ಸಿಡಿ ದೊರೆತರೆ, 2 ಕಿ.ವಾ. ಸಾಮರ್ಥ್ಯಕ್ಕೆ 60 ಸಾವಿರ ಹಾಗೂ 3 ಕಿ.ವಾ. ಸಾಮರ್ಥ್ಯದ ಉಪಕರಣಗಳ ಅಳವಡಿಕೆಗೆ 78 ಸಾವಿರ ರೂ.ವರೆಗೆ ಸಬ್ಸಿಡಿ ದೊರೆಯುತ್ತದೆ. ಅನಂತರದಲ್ಲಿ 1 ಕಿ.ವಾ. ಅಳವಡಿಸಿಕೊಂಡ ಕುಟುಂಬಕ್ಕೆ ಮಾಸಿಕ 0-150 ಯೂನಿಟ್‌, 2-3 ಕಿ.ವಾ. ಸಾಮರ್ಥ್ಯಕ್ಕೆ 150-300 ಯೂನಿಟ್‌ ಹಾಗೂ 3 ಕಿ.ವಾ.ಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತದೆ.

– ವಿಜಯ ಕುಮಾರ ಚಂದರಗಿ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.