![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 29, 2024, 9:08 AM IST
ಹೊಸದಿಲ್ಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರ ಭದ್ರತೆಯನ್ನು ಈಗ ಅತ್ಯುನ್ನತ ಮಟ್ಟಕ್ಕೆ ಏರಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ನೀಡುವ ಭದ್ರತೆಯಾದ ಎಎಸ್ಎಲ್ (ಅತ್ಯುನ್ನತ ಭದ್ರತಾ ವ್ಯವಸ್ಥೆ) ಅನ್ನು ಈಗ ಭಾಗವತ್ ಅವರಿಗೂ ನೀಡಲಾಗಿದೆ ಎಂಬ ಮಾಹಿತಿ ಇತ್ತೀಚೆಗಿನ ಭದ್ರತಾ ಪರಿಶೀಲನೆಯಲ್ಲಿ ತಿಳಿದುಬಂದಿದೆ.
ಈಗಾಗಲೇ ಭಾಗವತ್ಗೆ ಝಡ್+ ಭದ್ರತೆ ನೀಡಲಾಗಿತ್ತು. ಅದನ್ನೀಗ ಇನ್ನಷ್ಟು ಹೆಚ್ಚಿಸಲಾಗಿದೆ. ಎಎಸ್ಎಲ್ನಲ್ಲಿ ಕೆಲವು ಹೆಚ್ಚುವರಿ ಬಿಗಿಕ್ರಮಗಳಿರುತ್ತವೆ. ಯಾವ ಜಾಗಕ್ಕೆ ಭದ್ರತೆಗೊಳಗಾದ ವ್ಯಕ್ತಿ ಹೋಗುತ್ತಾರೋ, ಅಲ್ಲಿಗೆ ಮೊದಲೇ ಒಂದು ತಂಡ ತೆರಳುತ್ತದೆ. ಅಲ್ಲಿನ ಭದ್ರತಾ ಪರಿಸ್ಥಿತಿಯನ್ನು ಗಮನಿಸುತ್ತದೆ. ಸ್ಥಳ ಪರಿಶೀಲನೆ, ಸ್ಥಳೀಯ ಪೊಲೀಸರೊಂದಿಗೆ ಸಹಕಾರ-ಸಂಯೋಜನೆ, ಮುಂಚಿತವಾಗಿ ವ್ಯವಸ್ಥೆ, ಅಪಾಯ ಎಷ್ಟಿದೆ ಎಂಬ ಪರಿಶೀಲನೆಗಳು ನಡೆಯುತ್ತದೆ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿಗೂ ಎಎಸ್ಎಲ್ ಭದ್ರತೆ ನೀಡಲಾಗಿದೆ.
ಇದನ್ನೂ ಓದಿ: YouTube Premium: ಯುಟ್ಯೂಬ್ ಪ್ರೀಮಿಯಂ ಚಂದಾದಾರಿಕೆ ಶುಲ್ಕ ಹೆಚ್ಚಳ…
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.