Bengaluru: ನಗರದಲ್ಲಿ 10 ಬೀದಿ ನಾಯಿಗಳ ದಾಳಿ; ನಿವೃತ್ತ ಶಿಕ್ಷಕಿ ದುರ್ಮರಣ
Team Udayavani, Aug 29, 2024, 12:00 PM IST
ಬೆಂಗಳೂರು: ವಾಯುವಿಹಾರ ಮಾಡುತ್ತಿದ್ದ ವೃದ್ಧೆಯೊಬ್ಬರ ಮೇಲೆ ಹತ್ತಾರು ಬೀದಿ ನಾಯಿಗಳು ದಾಳಿ ನಡೆಸಿ ಕೊಂದಿರುವ ದಾರುಣ ಘಟನೆ ಜಾಲಹಳ್ಳಿಯ ಏರ್ಫೋರ್ಸ್ ಕ್ಯಾಂಪಸ್ನಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಉತ್ತರ ಭಾರತ ಮೂಲದ ರಾಜದುಲ್ಲಾರಿ ಸಿನ್ಹಾ(76) ಮೃತ ಮಹಿಳೆ.
ಜಾಲಹಳ್ಳಿಯ ಏರ್ ಫೋರ್ಸ್ ಕ್ಯಾಂಪಸ್ನಲ್ಲಿರುವ ಅಧಿ ಕಾರಿ ಅಮಿತ್ಕುಮಾರ್ ಸಿಂಗ್ ಅವರ ಅತ್ತೆ ಯಾಗಿರುವ ರಾಜದುಲ್ಲಾರಿ ಸಿನ್ಹಾ ನಿವೃತ್ತ ಶಿಕ್ಷಕಿಯಾಗಿದ್ದಾರೆ. ಬುಧವಾರ ಮುಂಜಾನೆ 6.20ರ ಸುಮಾರಿಗೆ ಮನೆ ಸಮೀಪ ದಲ್ಲಿ ವಾಯುವಿಹಾರ ಮಾಡು ತ್ತಿ ದ್ದರು. ಆಗ ಏಕಾಏಕಿ 10-12 ಬೀದಿ ನಾಯಿ ಗಳು ವೃದ್ಧೆ ಮೇಲೆ ದಾಳಿ ನಡೆಸಿದ್ದು, ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಕಚ್ಚಿವೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ರಸ್ತೆ ಯಲ್ಲಿ ಬಿದ್ದಿದ್ದರು. ಅದೇ ವೇಳೆ ನಡೆದು ಕೊಂಡು ಬರುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳೀಯರ ನೆರವು ಪಡೆದು ಸಮೀಪದ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ, ತೀವ್ರ ರಕ್ತಸ್ರಾವದಿಂದ ವೃದ್ಧೆ ಮೃತಪಟ್ಟಿದ್ದಾರೆ. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಗಂಗಮ್ಮನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.