IPL; ರೋಹಿತ್‌ ಶರ್ಮಾಗಾಗಿ 50 ಕೋಟಿ ರೂ ಎತ್ತಿಟ್ಟ ಲಕ್ನೋ ಮಾಲಿಕ?; ಗೋಯೆಂಕಾ ಹೇಳಿದ್ದೇನು?


Team Udayavani, Aug 29, 2024, 1:04 PM IST

Rs 50 Crore Earmarked For Rohit Sharma By LSG? What did Goenka say?

ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನ (IPL) ಮೆಗಾ ಹರಾಜು (Mega Auction) ಈ ವರ್ಷದ ಅಂತ್ಯದಲ್ಲಿ ನಡೆಯಲಿದೆ. ಈ ವೇಳೆ ಎಲ್ಲಾ ತಂಡಗಳಲ್ಲಿ ಭಾರಿ ಬದಲಾವಣೆಗಳು ಆಗಲಿದೆ. ಪ್ರಮುಖ ಕೆಲವೇ ಆಟಗಾರರನ್ನು ಫ್ರಾಂಚೈಸಿಗಳು ತಮ್ಮಲ್ಲಿ ಇರಿಸಿಕೊಂಡು ಉಳಿದ ಆಟಗಾರರನ್ನು ಕೈಬಿಡಬೇಕಾಗುತ್ತದೆ. ಈ ಬಗ್ಗೆ ಈಗಾಗಲೇ ಹಲವು ಊಹಾಪೋಹ ಪ್ರೇರಿತ ಸುದ್ದಿಗಳು ಹರಿದಾಡುತ್ತಿದೆ.

ಬಹುತೇಕ ಎಲ್ಲಾ ಫ್ರಾಂಚೈಸಿಗಳು ಮುಂಬೈ ಇಂಡಿಯನ್ಸ್‌ ನ (Mumbai Indians) ರಿಟೆನ್ಶನ್‌ ಲಿಸ್ಟ್‌ ಮೇಲೆ ಕಣ್ಣಿಟ್ಟಿದೆ. ಮುಂಬೈ ತಂಡದಲ್ಲಿ ಟೀಂ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್‌ ಯಾದವ್‌, ಟಿ20 ವಿಶ್ವಕಪ್‌ ಗೆದ್ದ ನಾಯಕ ರೋಹಿತ್‌ ಶರ್ಮಾ, ಮುಂಬೈ ನಾಯಕ ಹಾರ್ದಿಕ್‌ ಪಾಂಡ್ಯ, ವಿಶ್ವದ ಅತ್ಯುತ್ತಮ ಬೌಲರ್‌ ಗಳಲ್ಲಿ ಒಬ್ಬರಾದ ಜಸ್ಪ್ರೀತ್‌ ಬುಮ್ರಾ ಇದ್ದಾರೆ, ಇವರಲ್ಲಿ ಯಾರನ್ನೆಲ್ಲಾ ಮುಂಬೈ ಉಳಿಸಿಕೊಳ್ಳುತ್ತದೆ, ಯಾರನ್ನು ಬಿಡಲಿದೆ ಎಂಬ ಕುತೂಹಲ ಮೂಡಿದೆ.

ಇದರ ನಡುವೆ ಲಕ್ನೋ ಸೂಪರ್‌ ಜೈಂಟ್ಸ್‌ ಮಾಲಿಕ ಸಂಜೀವ್‌ ಗೋಯೆಂಕಾ (Sanjiv Goenka) ಅವರು ರೋಹಿತ್‌ ಶರ್ಮಾ (Rohit Sharma) ಅವರನ್ನು ಖರೀದಿಸಲೆಂದೇ 50 ಕೋಟಿ ರೂ ಪ್ರತ್ಯೇಕವಾಗಿರಿಸಿದ್ದಾರೆ ಎಂದು ಸುದ್ದಿಯೊಂದು ಹರಿದಾಡಿತ್ತು. ಇದೀಗ ಈ ವದಂತಿಗೆ ಗೋಯೆಂಕಾ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಪೋರ್ಟ್ಸ್‌ ತಕ್‌ ಗೆ ನೀಡಿದ ಸಂದರ್ಶನದ ವೇಳೆ ನಿರೂಪಕ ಈ ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಗೋಯೆಂಕಾ, “ರೋಹಿತ್‌ ಶರ್ಮಾ ಹರಾಜಿಗೆ ಬರುತ್ತಾರೆ ಎಂದು ನಿಮಗೆ ಗೊತ್ತಾ? ಅಥವಾ ಯಾರಿಗಾದರೂ ಗೊತ್ತಾ? ಮುಂಬೈ ಇಂಡಿಯನ್ಸ್‌ ಅವರನ್ನು ರಿಲೀಸ್‌ ಮಾಡುತ್ತಾ? ರೋಹಿತ್‌ ಹರಾಜಿನ ಭಾಗವಾಗುತ್ತಾರಾ? ಒಂದು ವೇಳೆ ಅವರು ಹರಾಜಿಗೆ ಬಂದರೂ ಕೇವಲ ಒಬ್ಬ ಆಟಗಾರನಿಗೆ ನಿಮ್ಮ ಬಜೆಟ್‌ ನ ಶೇ.50ರಷ್ಟು ಬಳಸಲು ಸಾಧ್ಯವಿಲ್ಲ. ಹಾಗಾದರೆ ಉಳಿದ 22 ಆಟಗಾರರನ್ನು ತೆಗೆದುಕೊಳ್ಳುವುದು ಹೇಗೆ” ಎಂದರು.

ಹಾಗಾದರೆ ಅವರು ನೀವು ಖರೀದಿಸಲು ಬಯಸುವ ಆಟಗಾರರ ಪಟ್ಟಿಯಲ್ಲಿದ್ದಾರಾ ಎಂದು ಸಂದರ್ಶನಕಾರ ಕೇಳಿದರು.

“ಪ್ರತಿಯೊಬ್ಬರನ್ನು ಒಂದು ವಿಶ್‌ ಲಿಸ್ಟ್‌ ಇರುತ್ತದೆ. ಉತ್ತಮ ಆಟಗಾರ, ಉತ್ತಮ ನಾಯಕ ನಿಮ್ಮ ತಂಡದಲ್ಲಿ ಇರಬೇಕು ಎಂದು ನೀವು ಬಯಸುತ್ತೀರಿ. ಆದರೆ ಇದು ಕೇವಲ ಬಯಕೆಯ ವಿಚಾರವಲ್ಲ. ಯಾರೆಲ್ಲಾ ಲಭ್ಯರಿದ್ದಾರೆ, ಯಾರೆಲ್ಲಾ ನಿಮಗೆ ಸಿಕ್ಕರು ಅಷ್ಟೇ ವಿಚಾರ ಇರುವುದು. ನಾನು ಯಾರನ್ನೂ ಬಯಸಬಹುದು, ಆದರೆ ಎಲ್ಲಾ ಫ್ರಾಂಚೈಸಿಗಳಲ್ಲೂ ಇದೇ ರೀತಿ ನಡೆಯುತ್ತದೆ. ನೀವು ಬಯಸಿದ ಎಲ್ಲರೂ ನಿಮಗೆ ಸಿಗುವುದಿಲ್ಲ” ಎಂದು ಸಂಜೀವ್‌ ಗೋಯೆಂಕಾ ಹೇಳಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.