Belagavi; ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರದ ಉದ್ದೇಶ: ಹೆಬ್ಬಾಳ್ಕರ್
Team Udayavani, Aug 29, 2024, 3:14 PM IST
ಬೆಳಗಾವಿ: ರಾಜಭವನ ಸಂಪೂರ್ಣ ಒತ್ತಡದಲ್ಲಿ ಕೆಲಸ ಮಾಡುತ್ತಿದೆ. ದೇಶದಲ್ಲಿರುವ ಬಿಜೆಪಿಯೇತರ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಆರೋಪಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ ಆರೋಪಕ್ಕೆ ನ್ಯಾಯಾಲಯದಲ್ಲಿ ಉತ್ತರ ಸಿಗಲಿದೆ. ಖಂಡಿತವಾಗಿಯೂ ನ್ಯಾಯಾಲಯದಲ್ಲಿ ಜಯ ಸಿಕ್ಕೇ ಸಿಗುತ್ತದೆ. ನ್ಯಾಯಾಂಗದ ಮೇಲೆ, ಭಾರತದ ಸಂವಿಧಾನದ ಮೇಲೆ ವಿಶ್ವಾಸವಿದೆ ಎಂದು ಹೇಳಿದರು.
ಕಾಂಗ್ರೆಸ್ ಎಂದೆಂದಿಗೂ ಬಡವರ ಪರ. ಬಡವರಿಗಾಗಿಯೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕೇಂದ್ರ ಸರ್ಕಾರವೇ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿಯನ್ನು ಮನ್ನಾ ಮಾಡಿದೆ ಎಂದು ಹೆಬ್ಬಾಳ್ಕರ್ ಟೀಕೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.