Mollywood: ಅತ್ಯಾಚಾರ ಮಾಡಿ, ನಗ್ನ ಫೋಟೋ ಸೆರೆ; ಸಹಾಯಕ ನಿರ್ದೇಶಕನ ವಿರುದ್ಧ ನಟಿ ಆರೋಪ
Team Udayavani, Aug 29, 2024, 5:20 PM IST
ತಿರುವನಂತಪುರಂ: ಹೇಮಾ ಸಮಿತಿ ವರದಿ (Hema Committee Report) ಸಲ್ಲಿಕೆಯಾದ ಬೆನ್ನಲ್ಲೇ ಮಾಲಿವುಡ್ ಸಿನಿಮಾರಂಗದಲ್ಲಿ ನಡೆದಿದ್ದ ದೌರ್ಜನ್ಯ ಹಾಗೂ ಕಿರುಕುಳ ಪ್ರಕರಣಗಳು ಬೆಳಕಿಗೆ ಬರುತ್ತಿದೆ.
ಮಲಯಾಳಂ ನಿರ್ದೇಶಕ ರಂಜಿತ್ (Malayalam director Ranjith), ಹಿರಿಯ ನಟ ಸಿದ್ದೀಕ್ (Actor Siddique) ಕಾಲಿವುಡ್ – ಮಾಲಿವುಡ್ ನಟ ರಿಯಾಜ್ ಖಾನ್ (Actor Riyaz Khan), ಮುಕೇಶ್, ಮಣಿಯನ್ ಪಿಳ್ಳ ರಾಜು, ನಟ ಜಯಸೂರ್ಯ, ಚಂದ್ರಶೇಖರನ್ ಸೇರಿದಂತೆ 17 ಮಂದಿಯ ವಿರುದ್ಧ ಅಸಭ್ಯ ವರ್ತನೆ ಹಾಗೂ ಕಿರುಕುಳದ ಆರೋಪ ಕೇಳಿ ಬಂದಿದೆ.
ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಮತ್ತು ಮೋಹನ್ ಲಾಲ್( Mohanlal) ಅವರ 2022ರ ಚಲನಚಿತ್ರ ʼಬ್ರೋ ಡ್ಯಾಡಿʼ (Bro Daddy) ಚಿತ್ರದ ಸಹಾಯಕ ನಿರ್ದೇಶಕರ (Assistant director) ಮೇಲೆ ಅತ್ಯಾಚಾರ ಮತ್ತು ನಗ್ನ ಚಿತ್ರಗಳೊಂದಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪವನ್ನು ಜೂನಿಯರ್ ಅರ್ಟಿಸ್ಟ್ (Junior artist) ಮಾಡಿದ್ದಾರೆ.
ಇದನ್ನೂ ಓದಿ: Actress: ಲೈವ್ನಲ್ಲೇ ಕಣ್ಣಿರಿಟ್ಟು ರಾಜಕಾರಣಿಯ ʼಕಾಮದಾಟʼದ ರಹಸ್ಯ ಬಿಚ್ಚಿಟ್ಟ ಖ್ಯಾತ ನಟಿ
ಆರೋಪವೇನು?: 2021ರಲ್ಲಿ ʼಬ್ರೋ ಡ್ಯಾಡಿʼ ಸಿನಿಮಾದಲ್ಲಿ ಮದುವೆಯ ದೃಶ್ಯದಲ್ಲಿ ನಟಿಸುವ ದೃಶ್ಯವೊಂದಿತ್ತು. ಸಿನಿಮಾದ ಸಹಾಯಕ ನಿರ್ದೇಶಕ ಮನ್ಸೂರ್ ರಶೀದ್ (Mansoor Rasheed) ಸಿನಿಮಾದಲ್ಲಿ ಹೆಚ್ಚಿನ ದೃಶ್ಯದಲ್ಲಿ ನಟಿಸಲು ಅವಕಾಶ ನೀಡುತ್ತೇನೆ ಎನ್ನುವ ನೆಪದಲ್ಲಿ ನನ್ನನ್ನು ಚಿತ್ರದ ಸಿಬ್ಬಂದಿ ತಂಗಿದ್ದ ಹೋಟೆಲ್ ಕೋಣೆಗೆ ಕರೆದೊಯ್ದರು. ನಂತರ ಪಾನೀಯದಲ್ಲಿ ಅಮಲು ಬರುವ ಪದಾರ್ಥವನ್ನು ಹಾಕಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಮನ್ಸೂರ್ ನನ್ನ ನಗ್ನ ಫೋಟೋಗಳನ್ನು ಕ್ಲಿಕ್ಕಿಸಿ, ಆ ಫೋಟೋಗಳನ್ನು ಇಟ್ಟುಕೊಂಡು ನನಗೆ ಬ್ಲ್ಯಾಕ್ ಮೇಲ್ (Blackmail) ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ನಗ್ನ ಫೋಟೋಗಳನ್ನು ಬಳಸಿ ರಶೀದ್ ನನ್ನಿಂದ ಹಲವಾರು ಬಾರಿ ಬ್ಲ್ಯಾಕ್ಮೇಲ್ ಮಾಡಿ ಹಣ ವಸೂಲಿ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.
ಈ ಕುರಿತು ಹೈದರಾಬಾದ್ ಪೊಲೀಸರಿಗೆ ನಟಿ ದೂರು ನೀಡಿದ ಬಳಿಕ ಪ್ರಕರಣವನ್ನು ದಾಖಲಿಸಲಾಗಿದೆ. ಆದರೆ ಮನ್ಸೂರ್ ಇದುವರೆಗೆ ಪತ್ತೆಯಾಗಿಲ್ಲ. ಮನ್ಸೂರು ಊರು ಬಿಟ್ಟು ಓಡಿ ಹೋಗಲು ರಾಜಕಾರಣಿಗಳು ಸಹಾಯ ಮಾಡಿದ್ದಾರೆ ಎಂದು ದೂರುದಾರೆ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.