Gundlupete: ಕಳಚಿದ ಚಲಿಸುತ್ತಿದ್ದ ಬಸ್ಸಿನ ಮುಂಬದಿ ಚಕ್ರ: ಪ್ರಯಾಣಿಕರು ಪಾರು
Team Udayavani, Aug 29, 2024, 7:16 PM IST
ಗುಂಡ್ಲುಪೇಟೆ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನ ಮುಂಬದಿ ಚಕ್ರ ಕಳಚಿ ಬಿದ್ದಿರುವ ಘಟನೆ ತಾಲೂಕಿನ ಕೋಡಹಳ್ಳಿ ಗ್ರಾಮದ ಸಮೀಪದಲ್ಲಿ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಗುಂಡ್ಲುಪೇಟೆ-ಚಾಚಹಳ್ಳಿ ಮಾರ್ಗವಾಗಿ ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನ ಮುಂಬದಿ ಚಕ್ರದ ರಾಡ್ ಹಠಾತ್ ತುಂಡಾಗಿದೆ. ಈ ವೇಳೆ ಬಸ್ ರಸ್ತೆಗೆ ಅಪ್ಪಳಿಸಿದ್ದು, ವಾಹನದ ವೇಗ ಕಡಿಮೆಯಿದ್ದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ. ಬಸ್ ನಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರು ಸೇರಿ 55ಕ್ಕೂ ಅಧಿಕ ಮಂದಿ ಇದ್ದರು ಎನ್ನಲಾಗುತ್ತಿದ್ದು, ಸದ್ಯ ಎಲ್ಲರೂ ಪಾರಾಗಿದ್ದಾರೆ.
ಡಿಪೋ ವ್ಯವಸ್ಥಾಪಕರ ವಿರುದ್ಧ ಆಕ್ರೋಶ: ತಾಲೂಕಿನ ಗ್ರಾಮೀಣ ಪ್ರದೇಶಗಳೊಳಗೆ ಸಂಚರಿಸುವ ಅನೇಕ ಸಾರಿಗೆ ಬಸ್ಗಳು ಸುಸ್ಥಿತಿಯಲ್ಲಿಲ್ಲ. ಈ ಕಾರಣದಿಂದ ಹಿಂದೆಯೂ ಕೂಡ ಹಲವು ಘಟನೆಗಳು ಸಂಭವಿಸಿವೆ. ಇದಕ್ಕೆ ಡಿಪೋ ವ್ಯವಸ್ಥಾಪಕರ ನಿರ್ಲಕ್ಷ್ಯವೇ ಕಾರಣ. ಕೂಡಲೇ ಎಚ್ಚೇತ್ತುಕೊಳ್ಳದಿದ್ದರೆ ಮುಂದೆ ಜರುಗುವ ಘಟನೆಗಳಿಗೆ ಅವರೇ ನೇರ ಹೊಣೆಯಾಗುತ್ತಾರೆ ಎಂದು ಪ್ರಯಾಣಿಕರು ಅಸಮಾಧಾನ ಹೊರ ಹಾಕಿದ್ದಾರೆ.
ಹಳೇ ಬಸ್ ಕಾರಣದಿಂದ ಅವಾಂತರ: ಗುಂಡ್ಲುಪೇಟೆ ಕೆಎಸ್ಆರ್ಟಿಸಿ ಬಸ್ ಗಳನ್ನು ನಿರ್ವಹಣೆ ಮಾಡುವಲ್ಲಿ ಸಿಬ್ಬಂದಿ ವರ್ಗದವರು ನಿರ್ಲಕ್ಷ್ಯ ವಹಿಸಿದ್ದಾರೆ. ಗುಂಡ್ಲುಪೇಟೆ-ಚಾಚಹಳ್ಳಿ ಮಾರ್ಗವಾಗಿ ಚಲಿಸುತ್ತಿದ್ದ ಬಸ್ ಕೂಡ ಹಳೆಯದಾದ ಕಾರಣ ಅವಘಡ ಸಂಭವಿಸಿದೆ. ಆದ್ದರಿಂದ ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಕ್ರಮವಹಿಸಿ, ಡಿಪೋ ವ್ಯವಸ್ಥಾಪಕರಿಗೆ ಖಡಕ್ ಸೂಚನೆ ನೀಡಬೇಕೆಂದು ಪ್ರಯಾಣಿಕರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.