Kadaba:ಸಾಕು ನಾಯಿಗಳನ್ನು ಎಳೆದೊಯ್ದ ಚಿರತೆ?;ಪಂಜ,ಪುಳಿಕುಕ್ಕು ಪರಿಸರದ ಜನರಲ್ಲಿ ಆತಂಕ
Team Udayavani, Aug 30, 2024, 6:50 AM IST
ಕಡಬ: ಕಳೆದ ಕೆಲವು ದಿನಗಳಿಂದ ರಾತ್ರಿ ವೇಳೆ ಮನೆಯ ಬಳಿಯಿಂದ ಸಾಕು ನಾಯಿಗಳು ನಾಪತ್ತೆಯಾಗಿದ್ದು, ಅವುಗಳನ್ನು ಚಿರತೆಗಳು ಎಳೆದೊಯ್ದಿದೆ ಎನ್ನುವ ಸುದ್ದಿ ಕೋಡಿಂಬಾಳ ಬಳಿಯ ಪುಳಿಕುಕ್ಕು, ಪಂಜ, ನೇರಳ ಪರಿಸರದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಪಂಜ ಬಳಿಯ ಕರುಂಬು ನೆಕ್ಕಿಲ ನಿವಾಸಿ ರಾಮಚಂದ್ರ ಭಟ್ ಅವರ 2 ಸಾಕುನಾಯಿಗಳು ಆ. 28 ರಂದು ರಾತ್ರಿ ವೇಳೆ ಗೂಡಿನಿಂದ ಹೊರ ಬಿಟ್ಟ ಬಳಿಕ ತೋಟದತ್ತ ಹೋಗಿದ್ದು ಅನಂತರ ನಾಪತ್ತೆಯಾಗಿವೆ. ಅವರ ಪಕ್ಕದ ಮನೆಯ ಸಿಟೌಟ್ನಲ್ಲಿ ರಾತ್ರಿ ವೇಳೆ ಮಲಗಿದ್ದ ಸಾಕುನಾಯಿ ಕೂಡ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಮನೆಯವರು ಬೆಳಗ್ಗೆ ಎದ್ದು ನೋಡಿದಾಗ ಸಿಟೌಟ್ನಲ್ಲಿ ನಾಯಿ ಮಲ ವಿಸರ್ಜಿಸಿದ್ದು, ಯಾವುದೋ ಪ್ರಾಣಿಯ ಜೊತೆ ಕಾದಾಡಿದ ರೀತಿಯಲ್ಲಿ ಕೆಸರು ಮತ್ತು ಹೆಜ್ಜೆ ಗುರುತುಗಳ ಕುರುಹುಗಳು ಕಂಡುಬಂದಿವೆ ಎಂದು ಮಾಹಿತಿ ನೀಡಿದ್ದಾರೆ. ಪರಿಸರದ ಬೊಳ್ಳಾಜೆ, ಪೊಳೆಂಜ, ನೆಕ್ಕಿಲ, ನೇರಳ ಮುಂತಾದ ಪ್ರದೇಶದಲ್ಲಿ ಈ ಹಿಂದೆ ಮರಿಗಳ ಜೊತೆ ಎರಡು ಚಿರತೆಗಳು ಕಾಣಿಸಿಕೊಂಡಿತ್ತು ಎನ್ನುವ ಸುದ್ದಿ ಹರಡಿದ್ದು, ಕಾಣೆಯಾಗಿರುವ ನಾಯಿಗಳು ಚಿರತೆ ಪಾಲಾಗಿರಬಹುದು ಎನ್ನುವ ಅಭಿಪ್ರಾಯ ಸ್ಥಳೀಯರದ್ದು. ನಾಯಿಗಳನ್ನು ಚಿರತೆ ಹೊತ್ತೂಯ್ದಿದೆ ಎನ್ನುವ ಸುದ್ದಿಯಿಂದಾಗಿ ಆತಂಕಗೊಂಡಿರುವ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖಾ ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.